ಉತ್ತರಕನ್ನಡ : ದಕ್ಷಿಣ ಒಳನಾಡಿನಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಈಗಾಗಲೇ ಹಲವು ಪ್ರದೇಶಗಳಲ್ಲಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ.ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಇದೀಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಹೌದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಡಿ ಜಲಪಾತ ಮಲ್ನಾಡು ಭಾಗದಲ್ಲಿ ಮಳೆಯಿಂದ ಫಾಲ್ಸ್ ತುಂಬಿ ತುಳುಕುತ್ತಿದೆ. ಪ್ರವಾಸಿಗರು ನೀರಿಗೆ ಇಳಿದು ಮೋಜು ಮಸ್ತಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಜಾಗ್ರತ ಕ್ರಮವಾಗಿ ಸಾತೋಡಿ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

Share.
Exit mobile version