ಉತ್ತರಕನ್ನಡ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗೆ ಸುಮಾರು 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.
ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಬರಿ ಅವಾಂತರ ಸೃಷ್ಟಿಯಾಗಿದ್ದು, ಕಾರವಾರದಲ್ಲಿ ರಾತ್ರಿ ಇಡೀ ಸುರಿದ ಮಳೆಯಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗಿದ ಪರಿಣಾಮ 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಅನುಮಾನ ದೇವಸ್ಥಾನದ ಬಳಿಯ ಚಿಕ್ಕನಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬಾಗಲಕೋಟೆಯಲ್ಲಿ ಪೆಟ್ರೋಲ್ ಬಂಕ್ ಜಲಾವೃತ!
ಭಾರಿ ಮಳೆಗೆ ಪೆಟ್ರೋಲ್ ಬಂಕ್ ಸಹ ಜಲಾವೃತವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಕೆರೆಯಂತಾಗಿದೆ. ಯಾವುದೇ ವಾಹನಗಳು ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸೇತುವೆ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇನ್ನು ಹಲವು ಮನೆಗಳಿಗೆ ನೀರು ನುಗ್ಗಿದ್ದು ಮನೆಯವರು ಕಂಗಾಲಾಗಿದ್ದಾರೆ.