Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ
KARNATAKA

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಇಲಾಖಾ ನೌಕರರೂ ಮಾತೃ ಹೃದಯದಿಂದ ಜನ ಸೇವೆ ಮಾಡಬೇಕೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಹೇಳಿದರು.

ಮದ್ದೂರು ಪಟ್ಟಣದ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿ.ಎ ಮುರಳೀಧರ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿದ್ದ ಎಚ್.ಮಂಜುನಾಥ್ ಅವರು ಮಂಡ್ಯ ತಾಲೂಕಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ರಾಜಸ್ವ ನಿರೀಕ್ಷಕ ವಿ.ಎ.ಮುರಳೀಧರ ಅವರನ್ನು ಜಿಲ್ಲಾ ಸಮಿತಿಯಿಂದ ಅವರನ್ನು ನೇಮಕ ಮಾಡಲಾಗಿದೆ.

ವಿ.ಎ.ಮುರಳೀಧರ ಅವರು ದಶಕಗಳ ಮೇಲ್ಪಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅವರಿಗೆ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಿದ್ದು ಖುಷಿ ವಿಚಾರ. ನೌಕರರ ಸಹಕಾರ ಇಲ್ಲದೆ ಜನಸೇವೆ ಹಾಗೂ ಉತ್ತಮ ಆಡಳಿತ ನೀಡಲು ಅಸಾಧ್ಯ. ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆಗೆ ಸಂಪರ್ಕ ಹೊಂದಿರುವ ಇಲಾಖೆಯಾಗಿದ್ದು, ಜನ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ಅದನ್ನು ಉತ್ತಮ ರೀತಿಯಲ್ಲಿ ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ ಎಂದು ಸಲಹೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷ ವಿ.ಎ.ಮುರಳೀಧರ ಅವರು ಸಾರ್ವಜನಿಕ ಕೆಲಸದಲ್ಲಿ ನಿರತರಾಗಿರುವ ನೌಕರರ ಹಿತಾಸಕ್ತಿ ಕಾಪಾಡುವ ಕಾರ್ಯಕ್ಕೆ ಸದಾ ಬದ್ಧನಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವೆ, ಗ್ರಾಮ ಮಟ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಕಂದಾಯ ಇಲಾಖೆ ನೌಕರರ ಸೇವೆ ಅನನ್ಯವಾಗಿದೆ. ಸರ್ಕಾರದ ಪ್ರತಿಯೊಂದು ಕಾರ್ಯಕ್ರಮ ಮತ್ತು ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ಮುಟ್ಟಿಸುವ ಕಾರ್ಯ ಕಂದಾಯ ಇಲಾಖೆ ನೌಕರರಿಂದ ಆಗುತ್ತಿದೆ. ನೌಕರರ ಸಂಘದ ಬೇಡಿಕೆಗಳಿಗೆ ಸದಾ ಸ್ಪಂದನೆ ನೀಡುವ ಮೂಲಕ ನೌಕರರ ಮೇಲೆ ಯಾವುದೇ ಅನ್ಯಾಯವಾಗದಂತೆ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಹಿತಾಸಕ್ತಿಗೆ ಬದ್ಧನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ತಮ್ಮಣ್ಣಗೌಡ, ನೂತನ ಅಧ್ಯಕ್ಷ ವಿ.ಎ.ಮುರಳೀಧರ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್, ಶಿರಸ್ತೇದಾರ್ ಲಕ್ಷ್ಮೀ ನರಸಿಂಹನ್, ಜಿಲ್ಲಾ ಕಾರ್ಯದರ್ಶಿ ಮಹೇಶ್, ಜಂಟಿ ಕಾರ್ಯದರ್ಶಿ ವೆಂಕಟೇಶ್, ಪ್ರಭು, ಸಂಘಟನಾ ಕಾರ್ಯದರ್ಶಿ ಕುಮಾರ್, ರಾಜಸ್ವ ನಿರೀಕ್ಷಕರಾದ ಮೋಹನ್, ಗಿರೀಶ್, ರವೀಂದ್ರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮಹಾಲಿಂಗಯ್ಯ, ಸಂಘಟನಾ ಕಾರ್ಯದರ್ಶಿ ಕೆ.ಆರ್.ಗೋವಿಂದರಾಜು ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.