Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಹದ್ದಿ’ನಿಂದ ಕಲಿಯಬೇಕಾದ 5 ಬ್ಯುಸಿನೆಸ್ ಸೂತ್ರಗಳಿವು.! ಅನುಸರಿಸಿದ್ರೆ ನೀವು ಕೂಡ ಅಂಬಾನಿ ಆಗಬೋದು

18/07/2025 6:35 PM

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ

18/07/2025 6:20 PM

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅ.27ರಂದು VA ನೇಮಕಾತಿ ಪರೀಕ್ಷೆ: ಎಲ್ಲಾ ಕೇಂದ್ರಗಳಲ್ಲೂ ಬಿಗಿ ಭದ್ರತೆಗೆ ಸಚಿವ ಕೃಷ್ಣಬೈರೇಗೌಡ ಸೂಚನೆ
KARNATAKA

ಅ.27ರಂದು VA ನೇಮಕಾತಿ ಪರೀಕ್ಷೆ: ಎಲ್ಲಾ ಕೇಂದ್ರಗಳಲ್ಲೂ ಬಿಗಿ ಭದ್ರತೆಗೆ ಸಚಿವ ಕೃಷ್ಣಬೈರೇಗೌಡ ಸೂಚನೆ

By kannadanewsnow0924/10/2024 7:04 PM

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟೆಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, “ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಇಂತಹ ಯಾವ ಅಕ್ರಮಗಳಿಗೂ ಅಧಿಕಾರಿಗಳು ಅವಕಾಶ ನೀಡಬಾರದು” ಎಂದು ತಾಕೀತು ಮಾಡಿದರು.

“ರಾಜ್ಯಾದ್ಯಂತ ಒಟ್ಟಾರೆ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದೆ ಮೂರು ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದೆ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಈ ವರ್ಷ ಕೆಲಸ ಆಕಾಂಕ್ಷಿ ಯುವಕರ-ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಬೇಕಾದ ಹಾಗೂ ಅರ್ಹರಿಗೆ ಕೆಲಸ ಲಭ್ಯವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ 40 ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ಕೆಲವು ಜಿಲ್ಲೆಗಳಲ್ಲಿ ಗರಿಷ್ಠ 86 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದೆ” ಎಂದು ಕಿವಿಮಾತು ಹೇಳಿದರು.

“ಪಶ್ನೆ ಪತ್ರಿಕೆಗಳು ಜಿಲ್ಲಾ ಟ್ರಷರಿಯಲ್ಲಿದ್ದಾಗ ಅಥವಾ ಟ್ರಷರಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗುವ ದಾರಿಯಲ್ಲೇ ಸೋರಿಕೆಯಾದ ಹಲವು ಪ್ರಕರಣಗಳು ನಮ್ಮ ಮುಂದಿವೆ. ಆದರೆ, ಈ ವರ್ಷ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಲು ಅವಕಾಶ ನೀಡಬಾರದು. ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಬೇಕು” ಎಂದು ಸೂಚಿಸಿದರು.

ಮುಂದುವರೆದು, “ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರು ಹೊಸ ಹೊಸ ಮೋಸದ ಮಾರ್ಗಗಳನ್ನು ಶೋದಿಸುತ್ತಿದ್ದಾರೆ. ನಾವು ಚಾಪೆ ಕೆಳಗೆ ನುಸುಳಿದರೆ ರಂಗೋಲಿ ಕೆಳಗೆ ನುಸುಳುವ ಕಳ್ಳರೂ ಇದ್ದಾರೆ. ಅಧಿಕಾರಿಗಳು ಇಂತಹ ಪ್ರಮಾದಗಳಿಗೂ ಸಿದ್ದವಾಗಿರಬೇಕು. ಹೀಗಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಪ್ರತಿಯೊಬ್ಬ ಅಭ್ಯರ್ಥಿಗಳನ್ನೂ ಮೈಕ್ರೋ ಡಿಟೆಕ್ಟ್ ಮೂಲಕ ಪರೀಕ್ಷಿಸಬೇಕು.

ಗುಲಬುರ್ಗಾ, ಯಾದಗಿರಿ ಹಾಗೂ ಬಿಜಾಪುರ ಜಿಲ್ಲೆಗಳನ್ನು ಸೂಕ್ಷ್ಮ ಜಿಲ್ಲೆಗಳು ಎಂದು ಗುರುತಿಸಿದ್ದು, ಈ ಭಾಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಬೇಕು, ಅಗತ್ಯವಿದ್ದರೆ ಮೀಸಲು ಪೊಲೀಸ್ ಪಡೆ, ಹೋಮ್ ಗಾರ್ಡ್ ಹಾಗೂ ಪಂಚಾಯತ್-ನಗರಸಭೆ ಅಧಿಕಾರಿಗಳನ್ನೂ ಬಳಸಿಕೊಳ್ಳಬಹುದು. ಅಗತ್ಯ ಹಣಕಾಸು ವ್ಯವಸ್ಥೆ ಒದಗಿಸಲು ಇಲಾಖೆ ಬದ್ಧವಾಗಿದೆ” ಎಂದು ಅಧಿಕಾರಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ. ಹೆಚ್ ಉಪಸ್ಥಿತರಿದ್ದರು.

Good News: ಜನರ ಮನೆ ಬಳಿಗೆ ‘ಆರೋಗ್ಯ ಸೇವೆ’ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರಾಧಿ – ಕೋರ್ಟ್ ತೀರ್ಪು

Share. Facebook Twitter LinkedIn WhatsApp Email

Related Posts

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ

18/07/2025 6:20 PM2 Mins Read

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM3 Mins Read

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM1 Min Read
Recent News

‘ಹದ್ದಿ’ನಿಂದ ಕಲಿಯಬೇಕಾದ 5 ಬ್ಯುಸಿನೆಸ್ ಸೂತ್ರಗಳಿವು.! ಅನುಸರಿಸಿದ್ರೆ ನೀವು ಕೂಡ ಅಂಬಾನಿ ಆಗಬೋದು

18/07/2025 6:35 PM

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ

18/07/2025 6:20 PM

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM
State News
KARNATAKA

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ

By kannadanewsnow0918/07/2025 6:20 PM KARNATAKA 2 Mins Read

ಬೆಂಗಳೂರು :  ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ‘ಮನೆ-ಮನೆಗೆ ಪೊಲೀಸ್’ ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.…

ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

18/07/2025 6:11 PM

Watch Video: ಕೆಡಿಪಿ ಸಭೆಯಲ್ಲಿ ‘ರಮ್ಮಿ ಆಟ’ ಆಡಿದ ಅಧಿಕಾರಿಗೆ ಬಿಗ್ ಶಾಕ್: ನೋಟಿಸ್ ಜಾರಿ, ಶಿಸ್ತು ಕ್ರಮಕ್ಕೆ ಸಚಿವರ ಆದೇಶ

18/07/2025 6:07 PM

ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

18/07/2025 5:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.