ಧಾರವಾಡ: ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ( Karnataka University ) ಕ್ಯಾಂಪಸ್‌ನಲ್ಲಿ ಕನಿಷ್ಠಪಕ್ಷ ಒಂದು ಲಕ್ಷ ವಿದ್ಯಾರ್ಥಿಗಳಾದರೂ ಅಧ್ಯಯನ ಮಾಡುವಂತಾಗಬೇಕು. ಇದಕ್ಕೆ ಸರಕಾರವು ಅಗತ್ಯ ಉಪಕ್ರಮಗಳನ್ನು ರೂಪಿಸಲಿದೆ. ಜತೆಗೆ ಕಾಲೇಜುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ.

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥ ಉನ್ನತ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿರುವ ಸುಶಾಸನ ಮಾಸಾಚರಣೆ ಅಂಗವಾಗಿ ಅವರು ವಿವಿ ವ್ಯಾಪ್ತಿಯ ಹಲವು ಕಾಲೇಜುಗಳ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿಯ ಜತೆ ಅವರು ಬುಧವಾರ ಇಲ್ಲಿನ ಕರ್ನಾಟಕ ವಿವಿ ಕ್ಯಾಂಪಸ್‌ನಲ್ಲಿ ಸಂವಾದ ನಡೆಸಿದರು.

‘ಅತಿಥಿ ಉಪನ್ಯಾಸಕ’ರಿಗೆ ಅಭದ್ರತೆಯ ಆತಂಕ ಬೇಡ: ಬೇಡಿಕೆ ಈಡೇರಿಸಲು ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ಅಶ್ವತ್ಥನಾರಾಯಣ

ಇದು ಜ್ಞಾನದ ಯುಗವಾಗಿದ್ದು, ಕರ್ನಾಟಕದ ವಿಕಾಸಕ್ಕೆ ಸುವರ್ಣಾವಕಾಶ ಸಿಕ್ಕಿದೆ. ಇದನ್ನು ನಾವು ಕಳೆದುಕೊಳ್ಳದೆ, ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಯುವಜನರು ತಮ್ಮ ವ್ಯಕ್ತಿಗತ ಬದುಕನ್ನು ಕಟ್ಟಿಕೊಳ್ಳುವ ಜತೆಗೆ ರಾಷ್ಟ್ರನಿರ್ಮಾಣ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು.

ಪ್ರಧಾನಿ ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು ಭಾರತವು ಈಗ ತನ್ನದೇ ಆದ ರಕ್ಷಣಾ ನೀತಿ ಮತ್ತು ವಿದೇಶಾಂಗ ನೀತಿಗಳನ್ನು ಹೊಂದಿದೆ. ದೇಶವು ಜಗತ್ತಿನಲ್ಲಿ ಐದನೇ ಅತ್ಯಂತ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಆದರೆ ಇದು ಇನ್ನಷ್ಟು ಎತ್ತರಕ್ಕೆ ಹೋಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

BREAKING NEWS: ಅಫ್ಘಾನಿಸ್ತಾನದ ಇಬಾಕ್ ನ ಸೆಮಿನರಿಯಲ್ಲಿ ಬಾಂಬ್‌ ಸ್ಪೋಟ 15 ಸಾವು, 27 ಮಂದಿಗೆ ಗಾಯ | Afghanistan Blast

ಪ್ರಥಮ ದರ್ಜೆ ಕಾಲೇಜುಗಳಿಗೆ ಆರ್ಥಿಕ ಸ್ವಾಯತ್ತತೆ ಕೊಡಲಾಗಿದೆ. ಇದರ ಜತೆಗೆ ಕೌಶಲ್ಯಗಳನ್ನು ಕಲಿಸಲು ಸುಶಾಸನ ಮಾಸಾಚರಣೆಯ ಅಂಗವಾಗಿ ಗುರುವಾರದಿಂದ ಸ್ಕಿಲ್‌ ಪೋರ್ಟಲ್‌ಗೆ ಚಾಲನೆ ನೀಡಲಾಗುತ್ತಿದೆ. ಇದನ್ನು ವಿದ್ಯಾರ್ಥಿ ಸಮುದಾಯವು ಸದ್ಬಳಕೆ ಮಾಡಿಕೊಳ್ಳಬೇಕು. ಕರ್ನಾಟಕದಲ್ಲಿ ಶೇಕಡ 200ರಷ್ಟು ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಸಂಪೂರ್ಣ ಡಿಜಿಟಲೀಕರಣ ಯಶಸ್ವಿಯಾಗಿ ನಡೆಯುತ್ತಿದೆ. ಯಾವ ಖಾಸಗಿ ವಿ.ವಿ.ಗಳಿಗೂ ಈ ಸಾಧನೆ ಸಾಧ್ಯವಾಗಿಲ್ಲ. ಇಂದು ಪ್ರವೇಶಾತಿಯಿಂದ ಹಿಡಿದು ಅಂಕಪಟ್ಟಿ ವಿತರಣೆಯವರೆಗೆ ಎಲ್ಲವೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ನಡೆಯುತ್ತಿದೆ. ಇಂತಹ ಸಾಧನೆ ಬೇರೆ ಯಾವ ರಾಜ್ಯದಲ್ಲೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದರು.

ಶಿವಮೊಗ್ಗ: ‘ಸಾಗರ ನಗರಸಭೆ’ಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ

ರಾಜ್ಯವು ಐಟಿ, ಬಿಟಿ, ಸೆಮಿಕಂಡಕ್ಟರ್, ಚಿಪ್‌ ತಯಾರಿಕೆ ಇತ್ಯಾದಿಗಳಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ನೇರ ಮತ್ತು ಪರೋಕ್ಷ ತೆರಿಗೆ ಸಂಗ್ರಹದಲ್ಲೂ ನಾವು ಎರಡನೇ ಸ್ಥಾನದಲ್ಲಿವೆ. ವಿ.ವಿ.ಗಳು ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಇದಕ್ಕಾಗಿಯೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಇ-ಆಫೀಸ್‌ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವರು ನುಡಿದರು.

ಈ ಕಾರ್ಯಕ್ರಮದಲ್ಲಿ ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಪ್ರೊ.ಸಿ ಕೃಷ್ಣಮೂರ್ತಿ, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

Share.
Exit mobile version