ಬೆಂಗಳೂರು: ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ವಿವಾದ ಘಟನೆ ಕುರಿತು ಪೊಲೀಸ್ ಆಯುಕ್ತರಿಗೆ ನಟ ವಿಧ್ಯಾಭರಣ್ ದೂರು ನೀಡಿದ್ದಾರೆ.
ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ವಿದ್ಯಾಭರಣ್ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ನಮ್ಮ ಹಿತುಶತ್ರುಗಳೇ ಇಂತಹ ಕುಂತತ್ರ ಮಾಡಿದ್ದಾರೆ.

BREAKING NEWS: ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೂಳೂರು ಬಸವನಗೌಡ ವಿಧಿವಶ

 

ಆಡಿಯೋದಲ್ಲಿ ತಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಲಾಗಿದೆ. ಅವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮಾತುಗಳಿಂದಾಗಿ ತಮಗೂ ಮತ್ತು ತಮ್ಮ ಕುಟುಂಬಕ್ಕೂ ಮುಜುಗರ ಉಂಟಾಗಿದೆ. ಆಡಿಯೋದಲ್ಲಿ ಮಾತನಾಡಿದವರು ಯಾರು ಎಂಬುದನ್ನು ಪತ್ತೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥ ವಿಷಯ ನಾನಾ ರೂಪಗಳನ್ನು ಪಡೆದುಕೊಳ್ಳುತ್ತಿದೆ. ವೈಷ್ಣವಿ ಗೌಡ ಮತ್ತು ನಟ ವಿದ್ಯಾಭರಣ್ ಇಬ್ಬರೂ ಪ್ರತ್ಯೇಕ ಹೇಳಿಕೆಗಳನ್ನು ನೀಡಿದ್ದು, ಅದು ನಿಶ್ಚಿತಾರ್ಥ ಅಲ್ಲ, ಕೇವಲ ಹಣ್ಣು ಕಾಯಿ ಇಡುವ ಶಾಸ್ತ್ರ ಎಂದು ಸ್ಪಷ್ಟ ಪಡಿಸಿದ್ದಾರೆ.

Share.
Exit mobile version