Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ವಿಧಾನಸಭೆಯಲ್ಲೇ ಈ ಉತ್ತರ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah
KARNATAKA

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ವಿಧಾನಸಭೆಯಲ್ಲೇ ಈ ಉತ್ತರ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah

By kannadanewsnow0918/07/2024 4:53 PM

ಬೆಂಗಳೂರು: ರಾಜ್ಯದಲ್ಲಿ ತೀವ್ರತೆಯನ್ನು ಪಡೆಯುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಇಂದು ವಿಧಾನಸಭೆಯಲ್ಲೇ ವಿಪಕ್ಷಗಳ ನಾಯಕರಿಗೆ ಪ್ರತ್ಯುತ್ತರ ಕೊಟ್ಟಿದ್ದಾರೆ. ಏನು ಹೇಳಿದ್ರು ಅಂತ ಮುಂದೆ ಓದಿ.

ಇಂದು ವಿಧಾನಸಭೆಯಲ್ಲಿ ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರಿಸಿದಂತ ಅವರು, ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು SIT ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ SIT ಬಗ್ಗೆ ಹೀಗೆ ಹೇಳಿದ್ದೀರಾ? ಎಂದು ಪ್ರಶ್ನಿಸಿದರು.

26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಮಾತಾಡಿದ್ದಾರೆ ಎಂದರು.

ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮೀಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳು ಆರಂಭಿಸಲಾಗಿದೆ ಎಂದು ಹೇಳಿದರು.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ SCP/TSP ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರೊಯಾಗಿ ಜಾರಿ ಮಾಡಿದೆ. ಶೇ.24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ನೀವು ಬರಿ ಮೊಸಳೆ ಕಣ್ಣೀರು ಹರಿಸುತ್ತೀರಿ ಎಂದರು.

1949 ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, “ಜನವರಿ 26-1950 ಕ್ಕೆ ಸಂವಿಧಾನ ಜಾರಿಗೆ ಬಂದಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದರು.

ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಂಥಾ ಸಮಾಜಕ್ಕೆ ಕಾಲಿಟ್ಟಾಗ ಆರ್ಥಿಕವಾಗಿ, ಸಾಮಾಜಿಕವಾಗಿ ಇನ್ನೂ ಅಸಮಾನತೆ ಉಳಿದುಕೊಂಡಿದೆ. ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಈಗ. ಆರ್.ಅಶೋಕ್ ಮೂರು ಗಂಟೆ ನಾಲ್ಲು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ ಎಂದರು.

ಇದು ST ವರ್ಗದ ಅಭಿವೃದ್ಧಿಗೆ ಮೀಸಲಾದ ನಿಗಮ. ನಮ್ಮ ಸರ್ಕಾರ ಬಂದ ಮೇಲೆ ಇಡೀ ದೇಶದಲ್ಲಿ Scsp/tsp ಕಾಯ್ದೆ ತಂದವರು ನಾವು. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ scsp/tsp ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ? ಎಂದು ಪ್ರಶ್ನಿಸಿದರು.

ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು sC/st ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ. ಗುತ್ತಿಗೆಯಲ್ಲೂ SC-ST ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥಾದ್ದನ್ನು ಬಿಜೆಪಿ ಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ. SC-ST ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು ಎಂದರು.

ನಾವು SC-ST ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡಲು ಆಗುತ್ತಿತ್ತಾ ? ಎಂದು ಪ್ರಶ್ನಿಸಿದಂತ ಅವರು, ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾವು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಪತ್ನಿ ಕೊಟ್ಡ ದೂರಿನ ಆಧಾರದಲ್ಲಿ FIR ದಾಖಲಿಸಿ ತನಿಖೆ ಶುರು ಮಾಡಿದೆವು ಎಂದು ಸದನಕ್ಕೆ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಜನರಲ್ ಮ್ಯಾನೇಜರ್ ರಾಜಶೇಖರ್ ಕೊಟ್ಟ ಆರು ಮಂದಿ ವಿರುದ್ದ ನೀಡಿದ ದೂರಿನ ಆಧಾರದಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ವಿಧಾನಸಭೆಯ ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಅವರು ಚಂದ್ರಶೇಖರ್ ಅವರ ಡೆತ್ ನೋಟ್ ಓದಿದರು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ‘ಯು ಟರ್ನ್‌’ ನಡೆ ಸರಿಯಲ್ಲ: APP ಮುಖ್ಯಮಂತ್ರಿ ಚಂದ್ರು

BREAKING: ನಾಳೆಯೊಳಗೆ ಎಲ್ಲಾ ಅಭ್ಯರ್ಥಿಗಳ ‘ನೀಟ್ ಯುಜಿ ಫಲಿತಾಂಶ’ ಪ್ರಕಟಿಸಿ: NTAಗೆ ಸುಪ್ರೀಂ ಕೋರ್ಟ್ ನಿರ್ದೇಶನ | NEET UG Results

Share. Facebook Twitter LinkedIn WhatsApp Email

Related Posts

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM1 Min Read
Recent News

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM
State News
KARNATAKA

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

By kannadanewsnow0904/07/2025 8:20 PM KARNATAKA 1 Min Read

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಈ ಪ್ರಕರಣ ಸಂಬಂಧ ನಟಿ ರನ್ಯಾ…

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

04/07/2025 7:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.