ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಬಿ.ನಾಗೇಂದ್ರ ಅವರ ನಿವಾಸದಲ್ಲಿ ಮಹತ್ವದ ಆಸ್ತಿ ಪತ್ರಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವಂತ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ನಡೆಸಿದ್ದರು.
ಬೆಳಿಗ್ಗೆಯಿಂದಲೂ ನಾಗೇಂದ್ರ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿರುವಂತ ಇಡಿ ಅಧಿಕಾರಿಗಳಿಗೆ ಆಸ್ತಿ ಪತ್ರಗಳ ಮಹತ್ವದ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಪತ್ತೆಯಾದಂತ ಆಸ್ತಿ ಪತ್ರಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದು, ಅವುಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಿಂದ ಬಂದಂತ ಹಣದಿಂದಲೇ ಖರೀದಿ ಮಾಡಲಾಗಿದ್ಯ ಅಂತನೂ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.
ನಾಗೇಂದ್ರ ನಿವಾಸದಲ್ಲಿನ ಕಂಪ್ಯೂಟರ್ ಕೂಡ ಶೋಧ ಮಾಡುತ್ತಿದ್ದಾರೆ. ಹೈದ್ರಾಬಾದ್ ಟು ಬಳ್ಳಾರಿಗೆ ಅಕೌಂಟ್ ಲಿಂಕ್ ಆಗಿದ್ಯಾ ಅನ್ನುವ ಬಗ್ಗೆಯೂ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನೂ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತರು, ಮನೆಯಲ್ಲಿನ ಕೆಲಸಗಾರರು ಸೇರಿದಂತೆ ವಿವಿಧ ಜನರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!