ಮಂಗಳೂರು : ದ್ವೇಷ ಭಾಷಣ ಮಾಡಿದ ಆರೋಪದ ಅಡಿ ಪ್ರಾಧ್ಯಪಕ ಅರುಣ್ ಉಳ್ಳಾಲ್ ವಿರುದ್ಧ FIR ದಾಖಲಾಗಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಇದೆ ಅಕ್ಟೋಬರ್ 15ರಂದು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದೆ.
ಹೌದು ಇದೆ ಅಕ್ಟೋಬರ್ 15ಕ್ಕೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಶಿವಾನಂದ್ ಮೆಂಡನ್ ಈ ಕುರಿತು ಹೇಳಿಕೆ ನೀಡಿದ್ದಾರೆ.ಹಿಂದೂಗಳನ್ನು ಗುರಿಯಾಗಿಸಿಕೊಂಡು ಅರುಣ್ ಉಳ್ಳಾಲ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಆದರೆ ಅರುಣ್ ಉಳ್ಳಾಲ್ ಪರವಾಗಿ ವಿ ಹೆಚ್ ಪಿ ನಿಲ್ಲುತ್ತದೆ ಎಂದು ತಿಳಿಸಿದರು.
ಪ್ರಕರಣ ಹಿನ್ನೆಲೆ?
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಡಾ.ಅರುಣ್ ಉಳ್ಳಾಲ್, ಕ್ರೈಸ್ತ, ಮುಸ್ಲಿಮರು ಸಹಿತ ಭಿನ್ನ ಧರ್ಮದವರ ಮದುವೆ ಹಾಲ್ಗಳಲ್ಲಿ ಹಿಂದೂಗಳು ಮದುವೆಗಳನ್ನು ನಡೆಸಬಾರದು, ಅವರ ಒಡೆತನದ ಶಿಕ್ಷಣ ಸಂಸ್ಥೆಗಳಿಗೆ ಹಿಂದೂಗಳು ಮಕ್ಕಳನ್ನು ಸೇರಿಸಬಾರದು, ಹಿಂದೂಗಳ ಒಡೆತನದ ಮದುವೆ ಹಾಲ್ಗಳು, ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಬಳಸಬೇಕು.
ಒಂದು ಅಂಶ ಗಮನಿಸಿ; ನಗರದಲ್ಲಿರುವ ಹಿಂದೂಗಳ ಕಾಲೇಜುಗಳಲ್ಲಿ ವರ್ಷ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ನಗರದಲ್ಲಿ ಅನ್ಯ ಮತೀಯರು ನಡೆಸುತ್ತಿರುವ ಕಾಲೇಜೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ 11 ಬ್ಯಾಚ್ಗಳಿವೆ. ನಮ್ಮವರ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಒಂದು ತರಗತಿಗೂ ವಿದ್ಯಾರ್ಥಿಗಳ ಕೊರತೆ ಇದೆ. ಮಕ್ಕಳನ್ನು ಹಿಂದೂ ಶಾಲೆಗೇ ಸೇರಿಸಬೇಕು. ಇಂತಹ ಆಲೋಚನೆ ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದರು.