Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಳ್ಳು ಸುದ್ದಿ, ತಪ್ಪು ಮಾಹಿತಿಯನ್ನು ಫ್ಯಾಕ್ಟ್ ಚೆಕ್‌ ಘಟಕದ ಮೂಲಕ ನಿಯಂತ್ರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

30/07/2025 10:30 PM

ಮಳೆಗಾಲದಲ್ಲಿ ಜಸ್ಟ್ ಇಷ್ಟು ಮಾಡಿ ಸಾಕು ಯಾವುದೇ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯೋದಿಲ್ಲ

30/07/2025 9:49 PM

BREAKING : ಡಬಲ್ ಒಲಿಂಪಿಕ್ ಚಾಂಪಿಯನ್ ‘ಲಾರಾ ಡಾಲ್ಮಿಯರ್’ ವಿಧಿವಶ |Laura Dahlmeier No More

30/07/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್‌.ಅಶೋಕ್
KARNATAKA

ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್‌.ಅಶೋಕ್

By kannadanewsnow0931/08/2024 4:13 PM

ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರ್ಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

ಎಲ್ಲರೂ ರಾಜೀನಾಮೆ ನೀಡಿ

ಪಕ್ಷದಿಂದ ಪ್ರತಿಭಟನೆ ಎನ್ನುವುದಾದರೆ ಎಲ್ಲ ಸಚಿವರು ರಾಜೀನಾಮೆ ನೀಡಿ ನಂತರ ಪ್ರತಿಭಟನೆ ಮಾಡಲಿ. ಇಲ್ಲಿ ಡಬಲ್‌ ಆಕ್ಟಿಂಗ್‌ ಮಾಡುವುದು ಬೇಡ. ರಾಜಭವನದ ದುರುಪಯೋಗ ಎನ್ನುವ ಆರೋಪ ಸವಕಲು ನಾಣ್ಯವಾಗಿದೆ. ಸಿದ್ದರಾಮಯ್ಯ ಅವರಿಗೆ ಭಯ ಏಕೆ? ಅವರ ರಕ್ಷಣೆಗೆ ನ್ಯಾಯಾಲಯವಿದೆ. ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್‌ ಚೇರ್‌ ನಡೆಯುತ್ತಿದ್ದು, ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಒಂದೊಂದು ಸಮುದಾಯದವರು ಒಂದೊಂದು ಕಡೆ ಆಹಾರದ ಮೇಳ ನಡೆಸುತ್ತಿದ್ದಾರೆ. ಎಲ್ಲರೂ ಸಿಎಂ ಕುರ್ಚಿಗೆ ಟವೆಲ್‌ ಹಾಕುತ್ತಿದ್ದಾರೆ. ಈ ಆಹಾರ ಮೇಳಗಳನ್ನು ಸಿಎಂ ಸಿದ್ದರಾಮಯ್ಯ ನಿಯಂತ್ರಿಸಲಿ ಎಂದರು.

KKRTC ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರ ಸಚಿವ ರಾಮಲಿಂಗಾರೆಡ್ಡಿ ವಿತರಣೆ

ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

30/07/2025 9:38 PM2 Mins Read

10-15 ದಿನಗಳಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆಗೆ ಕೇಂದ್ರದ ಭರವಸೆ: ಬೊಮ್ಮಾಯಿ

30/07/2025 9:26 PM4 Mins Read

2025-26ನೇ ಸಾಲಿನ ‘ದಸರಾ ಕ್ರೀಡಾಕೂಟ’ಕ್ಕೆ ವೇಳಾಪಟ್ಟಿ ಪ್ರಕಟಿಸಿದ ಸರ್ಕಾರ

30/07/2025 8:56 PM1 Min Read
Recent News

ಸುಳ್ಳು ಸುದ್ದಿ, ತಪ್ಪು ಮಾಹಿತಿಯನ್ನು ಫ್ಯಾಕ್ಟ್ ಚೆಕ್‌ ಘಟಕದ ಮೂಲಕ ನಿಯಂತ್ರಣ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

30/07/2025 10:30 PM

ಮಳೆಗಾಲದಲ್ಲಿ ಜಸ್ಟ್ ಇಷ್ಟು ಮಾಡಿ ಸಾಕು ಯಾವುದೇ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯೋದಿಲ್ಲ

30/07/2025 9:49 PM

BREAKING : ಡಬಲ್ ಒಲಿಂಪಿಕ್ ಚಾಂಪಿಯನ್ ‘ಲಾರಾ ಡಾಲ್ಮಿಯರ್’ ವಿಧಿವಶ |Laura Dahlmeier No More

30/07/2025 9:38 PM

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

30/07/2025 9:38 PM
State News
KARNATAKA

ಸಾಗರ ತಾಲ್ಲೂಕು ಕಾರು ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರಾಗಿ 3ನೇ ಬಾರಿಗೆ ಗಿರೀಶ್ ಕೋವಿ ಅವಿರೋಧ ಆಯ್ಕೆ

By kannadanewsnow0930/07/2025 9:38 PM KARNATAKA 2 Mins Read

ಶಿವಮೊಗ್ಗ: ಸಾಗರ ತಾಲೂಕಿನ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ಉದ್ಯಮಿಗಳು, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಿರೀಶ್ ಕೋವಿ…

10-15 ದಿನಗಳಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆಗೆ ಕೇಂದ್ರದ ಭರವಸೆ: ಬೊಮ್ಮಾಯಿ

30/07/2025 9:26 PM

2025-26ನೇ ಸಾಲಿನ ‘ದಸರಾ ಕ್ರೀಡಾಕೂಟ’ಕ್ಕೆ ವೇಳಾಪಟ್ಟಿ ಪ್ರಕಟಿಸಿದ ಸರ್ಕಾರ

30/07/2025 8:56 PM

CRIME NEWS: ರಾಜ್ಯದಲ್ಲಿ ಮತ್ತೊಂದು ‘ಡಿಜಿಟಲ್ ಅರೆಸ್ಟ್’ ಕೇಸ್: ಬರೋಬ್ಬರಿ 89.90 ಲಕ್ಷ ಕಳೆದುಕೊಂಡ ವ್ಯಕ್ತಿ

30/07/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.