ಬೆಂಗಳೂರು :  ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ. 

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು.  ಈ ಹಿನ್ನೆಲೆ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಈ ಕುರಿತು ಬಿಜೆಪಿ ಟ್ವೀಟ್ ನಲ್ಲಿ ಸಂತಸ ಹಂಚಿಕೊಂಡಿದೆ.

ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು  ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

BIGG NEWS : ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ಅಂತ್ಯಕ್ರಿಯೆ : ಮಣ್ಣಲ್ಲಿ ಮಣ್ಣಾದ ‘ಹೊನ್ನಾಳಿ ಚಂದ್ರಶೇಖರ್’

BIG NEWS: ನ.6ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪರೀಕ್ಷೆ: ಶೂ, ಬೆಲ್ಟ್ ಧರಿಸಿ ಬರುವುದಕ್ಕೆ ನಿಷೇಧ | KAR TET-2022

Share.
Exit mobile version