ವಿಜಯಪುರ : ಕಳ್ಳರು ಎಂದು ಕಾರ್ಮಿಕರನ್ನು ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ವಿಜಯಪುರ : ಕಳ್ಳರು ಎಂದು ಭಾವಿಸಿ ಕಾರ್ಮಿಕರನ್ನು ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂಡಿ ತಾಲೂಕಿನ ಹೊಸಮನಿ ಹಟ್ಟಿಯಲ್ಲಿ ನಡೆದಿದೆ. ತಮಿಳುನಾಡಿನಿಂದ  ಕೆಲಸಕ್ಕೆಂದು ವಿಜಯಪುರಕೆ 12 ಮಂದಿ ಕಾರ್ಮಿಕರು ಬಂದಿದ್ದರು. ಇದನ್ನು ನೋಡಿದ ಗ್ರಾಮಸ್ಥರು ಅವರನ್ನು ಕಳ್ಳರು ಎಂದು ಭಾವಿಸಿ ಹಿಡಿಯಲು ಹೋಗಿದ್ದಾರೆ, ಆದರೆ 10 ಮಂದಿ ಕಾರ್ಮಿಕರು ಜನರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಗ್ರಾಮಸ್ಥರು ಅವರನ್ನು ಕಟ್ಟಿ ಹಾಕಿ ಮನಸೋ ಇಚ್ಚೆ ಥಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading ವಿಜಯಪುರ : ಕಳ್ಳರು ಎಂದು ಕಾರ್ಮಿಕರನ್ನು ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು