ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಲ್ಲಲ್ಲಿ ಮನೆ, ರಸ್ತೆ, ರಪ್ಪಗಳು ಹಾನಿಗೊಂಡಿವೆ. ಈ ಪ್ರದೇಶಗಳಿಗೆ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಶಾಸಕರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:15/ 16.06.2025 ರಂದು ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೇವನೆಯಿಂದ ನಿರ್ದೇಶಿತನಾಗಿದ್ದೇನೆ ಎಂದಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು