Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್

23/06/2025 11:24 PM

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರದ ಹೊನವಾಡ ಗ್ರಾಮದಲ್ಲಿ ‘ವಕ್ಫ್ ಆಸ್ತಿ’ ವಿವಾದ: ಈ ಸ್ಪಷ್ಟನೆ ಕೊಟ್ಟ ಸಚಿವರು
KARNATAKA

ವಿಜಯಪುರದ ಹೊನವಾಡ ಗ್ರಾಮದಲ್ಲಿ ‘ವಕ್ಫ್ ಆಸ್ತಿ’ ವಿವಾದ: ಈ ಸ್ಪಷ್ಟನೆ ಕೊಟ್ಟ ಸಚಿವರು

By kannadanewsnow0928/10/2024 9:45 PM

ಬೆಂಗಳೂರು: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಸರಕಾರದ ಪರವಾಗಿ ಮೂವರು ಸಚಿವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿಯದಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. 137 ಎಕರೆಯನ್ನು ವಿವಿಧ ಯೋಜನೆಗಳಿಗೆ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಮಿಕ್ಕ 773 ಎಕರೆ ಮಾತ್ರ ವಕ್ಫ್ ಸಂಸ್ಥೆಗಳ ಅಡಿಯಲ್ಲಿದೆ. ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ರೈತರಿಗೆ ವಕ್ಫ್ ಆಸ್ತಿಯೆಂದು ಯಾವುದೇ ನೊಟೀಸ್ ನೀಡಿಲ್ಲ. ಈ ಸಂಬಂಧ ಸಚಿವ ಎಂ ಬಿ ಪಾಟೀಲ ಅವರೂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

1974ರ ಗೆಜೆಟ್ ಅಧಿಸೂಚನೆಯಲ್ಲಿ ವಿಜಯಪುರದ ಮಹಾಲಬಾಗಾಯತದ ಪಕ್ಕದಲ್ಲಿ ಬ್ರ್ಯಾಕೆಟ್ ಒಳಗೆ ವಕ್ಫ್ ಆಸ್ತಿಯಡಿಯಲ್ಲಿ ಹೊನವಾಡ ಎಂದು ತಪ್ಪಾಗಿ ನಮೂದಿಸಲಾಗಿತ್ತು.1977ರಲ್ಲಿ ವಕ್ಫ್ ಮಂಡಳಿಯೇ ತನ್ನ ತಪ್ಪನ್ನು ಸರಿಪಡಿಸಿದೆ. ಇದು ವಿವಾದವೇ ಅಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸವರಾಜ ಪಾಟೀಲ ಯತ್ನಾಳ ನಡುವೆ ನಡೆಯುತ್ತಿರುವ ತಿಕ್ಕಾಟದಿಂದ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆ
ಎಂದು ಅವರು ಸ್ಪಷ್ಟಪಡಿಸಿದರು.

ಇಂಡಿ ತಾಲ್ಲೂಕಿನಲ್ಲಿ ಮಾತ್ರ ಅಲ್ಲಿಯ ತಹಸೀಲ್ದಾರರು ಯಾವುದೇ ನೋಟೀಸ್ ನೀಡದೆ, 41 ಆಸ್ತಿಗಳನ್ನು ಇಂದೀಕರಣ ಮಾಡಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತರು 1974ಕ್ಕಿಂತ ಮೊದಲಿನ ದಾಖಲೆ ಕೊಟ್ಟರೆ ಅಂತಹ ಆಸ್ತಿಗಳನ್ನು ವಕ್ಫ್ ಅಧಿಸೂಚನೆಯಿಂದ ಕೈಬಿಡಲಾಗುವುದು. ಬಾಧಿತ ರೈತರು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ, ಅವರು ಪರಿಶೀಲಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಸಚಿವ ಪಾಟೀಲ, `ಈ ಪ್ರಕರಣ ಕುರಿತು ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿಜಯಪುರ ಪ್ರಕರಣದಲ್ಲಿ 1964ರಿಂದ 1973ರವರೆಗಿನ ಕಂದಾಯ ಮತ್ತು ವಕ್ಫ್ ದಾಖಲೆಗಳನ್ನು ತೌಲನಿಕವಾಗಿ ಪರಿಶೀಲಿಸಲು ಆದೇಶ ನೀಡಲಾಗಿದೆ’ ಎಂದರು.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜನರ ನಡುವೆ ಗೊಂದಲ ಸೃಷ್ಟಿಸುವ ಕೆಲಸ ಬಿಜೆಪಿ ಮುಖಂಡರಿಂದ ಆಗುತ್ತಿದೆ. ಇದರಲ್ಲಿ ಧ್ರುವೀಕರಣದ ಸಂಚಿದೆ. ಸತ್ಯ ಶೋಧನೆಗೆ ಬಿಜೆಪಿ ಸಮಿತಿ ಬಂದರೆ ಕಾಫಿ- ಟೀ ಕೊಟ್ಟು ಪೂರ್ಣ ಮಾಹಿತಿ ನೀಡಲು ಜಿಲ್ಲಾಡಳಿತಕ್ಕೂ ಸೂಚಿಸಲಾಗಿದೆ‌ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಕ್ಫ್ ಸಚಿವ ಜಮೀರ್ ಅಹಮದ್ ಮಾತನಾಡಿ, `ನಮಗೆ ರೈತರ ಯಾವ ಜಮೀನೂ ಬೇಡ. ನಾನೂ ರೈತನ ಮಗನೇ. ವಕ್ಫ್ ಆಸ್ತಿಗೆ ಇಂದೀಕರಣ ಮಾಡಿಕೊಡಿ ಎಂದಷ್ಟೇ ಕೇಳಿರುವುದು.‌ ಇಷ್ಟಕ್ಕೂ ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಮಂಡಳಿಯದೇ ವಿನಾ 1,200 ಎಕರೆ ಅಲ್ಲ. ಅದೆಲ್ಲ‌ ರೈತರದೇ ಆಗಿದೆ ಎಂದೂ ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ 1,345 ಎಕರೆ ವಕ್ಫ್ ಆಸ್ತಿ ಒತ್ತುವರಿಯಾಗಿದ್ದು, ಇದು ಯಾರಿಗೂ ಅಧಿಕೃತವಾಗಿ ಹಂಚಿಕೆ ಆಗಿಲ್ಲ. ಇದರಲ್ಲಿಯೂ ಸುಮಾರು 26 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ಕೋರ್ಟ್ ನಲ್ಲಿದೆ. ಇದು ಬಿಟ್ಟರೂ 1,319 ಎಕರೆ ವಕ್ಪ್ ಆಸ್ತಿ ಅಕ್ರಮವಾಗಿ ಬೇರೆ ವ್ಯಕ್ತಿ/ಸಂಸ್ಥೆಗಳ ವಶದಲ್ಲಿ ಇದ್ದು ಅದನ್ನು ಸರಿ‌ ಮಾಡಿಕೊಡಲು ಕೇಳಲಾಗಿದೆ. ಇದು ಬಿಟ್ಟರೆ ನಮಗೆ ಬೇರೆ ಯಾರ ಆಸ್ತಿಯೂ‌ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ವಕ್ಫ್ ಅದಾಲತ್ ನಡೆಸಿದಾಗ ಅಲ್ಲಿನ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಆಹ್ವಾನ ನೀಡಲಾಗಿತ್ತು. ಅಂದು ಸಭೆಗೆ ಬಾರದ ಅವರು ಈಗ ಬೇಕೆಂದೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಟೀಕಿಸಿದರು.

BREAKING: ರಾಜ್ಯ ಸರ್ಕಾರದಿಂದ ‘PU ಕಾಲೇಜು ಉಪನ್ಯಾಸಕ’ರಿಗೆ ‘ವಿಶೇಷ ಭತ್ಯೆ’ ಮಂಜೂರು ಮಾಡಿ ಆದೇಶ

‘BMTC’ಗೆ ನಗರ ಸಾರಿಗೆಯಲ್ಲಿ ಉತ್ಕೃಷ್ಟತೆ ಸೇವೆಗೆ ‘ರಾಷ್ಟ್ರಮಟ್ಟದ ಪ್ರಶಸ್ತಿ’

ನ.10ರಂದು ‘ದುಬೈ’ನಲ್ಲಿ ಕನ್ನಡದ ಕಲರವ: ‘ಶಾಸಕ ಬೇಳೂರು ಗೋಪಾಲಕೃಷ್ಣ’ಗೆ ಮುಖ್ಯ ಅತಿಥಿಯಾಗಿ ವಿಶೇಷ ಆಹ್ವಾನ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM2 Mins Read

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM1 Min Read

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM1 Min Read
Recent News

BREAKING: ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್

23/06/2025 11:24 PM

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM

ಈಗ ಭಾರತೀಯರು ಅಮೆರಿಕಕ್ಕೆ ಹೋಗುವುದು ಸುಲಭವಲ್ಲ ; ‘ಟ್ರಂಪ್’ ಮತ್ತೊಂದು ಹೊಸ ಆದೇಶ

23/06/2025 9:40 PM
State News
KARNATAKA

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

By kannadanewsnow0923/06/2025 9:45 PM KARNATAKA 2 Mins Read

ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ…

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.