Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಅಧ್ಯಾಯ `ತುರ್ತು ಪರಿಸ್ಥಿತಿ’ ಹೇರಿಕೆಗೆ ಇಂದು 50 ವರ್ಷ : ಪ್ರಧಾನಿ ಮೋದಿ ಟ್ವೀಟ್

25/06/2025 8:56 AM

BIG NEWS : ಕಳೆದುಹೋದ ‘ಮೊಬೈಲ್’ ಮರುಪಡೆಯಲು ‘RPF’ ಅದ್ಭತ ಯೋಜನೆ : ‘ಆಪರೇಷನ್ ಅಮಾನತ್’ ಅಡಿ ‘CEIR ಟ್ರ್ಯಾಕಿಂಗ್’ ಬಿಡುಗಡೆ.!

25/06/2025 8:51 AM

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ 7 ಪ್ರಯೋಜನಗಳು.!

25/06/2025 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಕ್ಫ್ ಆಸ್ತಿ ವಿವಾದ: ರಾಜ್ಯದ ಜನತೆ ಬಿಜೆಪಿ ದುರುದ್ದೇಶ ಅರ್ಥ ಮಾಡಿಕೊಳ್ಳಬೇಕು – ಸಿಎಂ ಸಿದ್ಧರಾಮಯ್ಯ
KARNATAKA

ವಕ್ಫ್ ಆಸ್ತಿ ವಿವಾದ: ರಾಜ್ಯದ ಜನತೆ ಬಿಜೆಪಿ ದುರುದ್ದೇಶ ಅರ್ಥ ಮಾಡಿಕೊಳ್ಳಬೇಕು – ಸಿಎಂ ಸಿದ್ಧರಾಮಯ್ಯ

By kannadanewsnow0903/11/2024 7:53 PM

ಬೆಂಗಳೂರು: ನಾವು ವಕ್ಫ್ ಆಸ್ತಿ ವಿವಾದದ ನಂತ್ರ ರೈತರಿಗೆ ನೀಡಿದ್ದಂತ ನೋಟಿಸ್ ಹಿಂಪಡೆಯಲು ನಿರ್ಧರಿಸಿದ್ದೇವೆ. ಹೀಗಿದ್ದರೂ ನಾಳೆ ಬಿಜೆಪಿ ವಕ್ಫ್ ವಿವಾದದ ಬಗ್ಗೆ ಪ್ರತಿಭಟನೆ ನಡೆಸುತ್ತಿದೆ. ಇದರಲ್ಲಿ ರೈತರ ಹಿತಾಸಕ್ತಿ ಇಲ್ಲ. ಯಾವ ಸದುದ್ದೇಶವೂ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು. ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ ಎಂದಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ. ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ. ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ ಎಂದು ಗುಡುಗಿದ್ದಾರೆ.

ಇದಕ್ಕಾಗಿ ಒಂದೆಡೆ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯಲ್ಲಿನ ಪಾಲು ಮತ್ತು ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಎಷ್ಟೇ ಸುಳ್ಳು ಆರೋಪಗಳನ್ನು ಮಾಡಿದರೂ ಈ ಯೋಜನೆಗಳಿಂದ ಸಂತೃಪ್ತರಾಗಿರುವ ಫಲಾನುಭವಿಗಳು ಇದಕ್ಕೆ ಕಿವಿಗೊಡದೆ ಇರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ ಎಂದಿದ್ದಾರೆ.

ಸುಳ್ಳು ಪ್ರೊಪಗಾಂಡದ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಸಂಘರ್ಷವನ್ನು ಸೃಷ್ಟಿ ಮಾಡಿ ಅದರಿಂದ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ. ಇದರ ಹೊರತಾಗಿ ಈ ಪ್ರತಿಭಟನೆಯಲ್ಲಿ ಯಾವ ರೈತರ ಹಿತಾಸಕ್ತಿಯ ರಕ್ಷಣೆಯ ಸದುದ್ದೇಶ ಇಲ್ಲ. ಈ ಪ್ರತಿಭಟನೆಯಿಂದ ರಾಜ್ಯದ ಸೌಹಾರ್ದತೆಗೆ ಭಂಗ ಉಂಟಾಗಬಹುದೇ ಹೊರತು ರೈತರಿಗೆ ಯಾವ ಲಾಭವೂ ಇಲ್ಲ ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದ ಪ್ರಜ್ಞಾವಂತ ಜನತೆ ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ವಕ್ಫ್ ವಿವಾದ: SIT ಇಲ್ಲವೇ CBI ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

BIG NEWS: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ.? ಇಲ್ಲಿದೆ ಡೀಟೆಲ್ಸ್

Share. Facebook Twitter LinkedIn WhatsApp Email

Related Posts

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

25/06/2025 8:30 AM1 Min Read

BREAKING : ರೋಡ್ ರೇಜ್ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ನೋಟಿಸ್

25/06/2025 7:44 AM1 Min Read

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

25/06/2025 7:43 AM4 Mins Read
Recent News

BREAKING : ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಅಧ್ಯಾಯ `ತುರ್ತು ಪರಿಸ್ಥಿತಿ’ ಹೇರಿಕೆಗೆ ಇಂದು 50 ವರ್ಷ : ಪ್ರಧಾನಿ ಮೋದಿ ಟ್ವೀಟ್

25/06/2025 8:56 AM

BIG NEWS : ಕಳೆದುಹೋದ ‘ಮೊಬೈಲ್’ ಮರುಪಡೆಯಲು ‘RPF’ ಅದ್ಭತ ಯೋಜನೆ : ‘ಆಪರೇಷನ್ ಅಮಾನತ್’ ಅಡಿ ‘CEIR ಟ್ರ್ಯಾಕಿಂಗ್’ ಬಿಡುಗಡೆ.!

25/06/2025 8:51 AM

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ 7 ಪ್ರಯೋಜನಗಳು.!

25/06/2025 8:42 AM

BREAKING : ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ` ಡೊನಾಲ್ಡ್ ಟ್ರಂಪ್’ | Nobel Peace prize

25/06/2025 8:30 AM
State News
KARNATAKA

ರೈಲು ಪ್ರಯಾಣಿಕರೇ ಗಮನಿಸಿ : ಜುಲೈ 2ರಿಂದ `ವಂದೇ ಭಾರತ್ ಎಕ್ಸ್ಪ್ರೆಸ್’ ರೈಲುಗಳ ಮಾರ್ಗ ಬದಲಾವಣೆ | Vande Bharat

By kannadanewsnow5725/06/2025 8:30 AM KARNATAKA 1 Min Read

ಬೆಂಗಳೂರು : ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ…

BREAKING : ರೋಡ್ ರೇಜ್ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ನೋಟಿಸ್

25/06/2025 7:44 AM

BIG NEWS : ಕರ್ನಾಟಕ `ಲೋಕಾಯುಕ್ತ ಪೊಲೀಸರು’ ನಿರ್ವಹಿಸಬೇಕಾದ `ಕರ್ತವ್ಯಗಳ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ | Karnataka Lokayukta Police

25/06/2025 7:43 AM
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

25/06/2025 7:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.