Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

4 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ

24/08/2025 8:50 AM

ಭಾರತದಲ್ಲಿಯೇ ತಯಾರಿಸಿದ ಮೊದಲ `ಸೆಮಿಕಂಡಕ್ಟರ್ ಚಿಪ್’ ವರ್ಷಾಂತ್ಯದ ವೇಳೆಗೆ ಮಾರುಕಟ್ಟೆಗೆ : ಪ್ರಧಾನಿ ಮೋದಿ ಘೋಷಣೆ

24/08/2025 8:48 AM

BREAKING : ನೈಜೀರಿಯಾ ವಾಯುಪಡೆಯಿಂದ `ಏರ್ ಸ್ಟ್ರೈಕ್’ : 35 ಬಂಡುಕೋರರ ಹತ್ಯೆ | Nigeria air strike

24/08/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ, ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ: ಸಿಎಂ ಸಿದ್ಧರಾಮಯ್ಯ
KARNATAKA

ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ, ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ: ಸಿಎಂ ಸಿದ್ಧರಾಮಯ್ಯ

By kannadanewsnow0904/11/2024 3:47 PM

ಬೆಂಗಳೂರು: ಬಿಜೆಪಿ  ನಾಯಕರು ರಾಜಕಾರಣಕ್ಕಾಗಿ ವಕ್ಫ್ ನೋಟಿಸ್ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಇಂದು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವಂತ ಅವರು, ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂಬುದಾಗಿ ಹೇಳಿದ್ದಾರೆ.

ಸಂಸದ @BSBommai ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ.@BJP4Karnataka ನಾಯಕರು ರಾಜಕಾರಣಕ್ಕಾಗಿ ವಕ್ಫ್ ನೋಟಿಸ್ ವಿಚಾರವನ್ನು ಇಟ್ಟುಕೊಂಡು… pic.twitter.com/r29u00qmph

— Siddaramaiah (@siddaramaiah) November 4, 2024

ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಯಾರೇ ಆಗಿರಲಿ ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಡಿವಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾರಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ? ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಚಿವರಾದ @HKPatilINC, @krishnabgowda ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮುಸ್ಲಿಂ,…

— Siddaramaiah (@siddaramaiah) November 4, 2024

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ? ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ.

ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರು, ಇದಕ್ಕೆ ಏನು ಹೇಳಬೇಕು? ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ ನಿರ್ಧಾರವಾಗುತ್ತದೆ.

15ನೇ ಹಣಕಾಸು ಆಯೋಗದವರು ಕೆಲವು ಶಿಫಾರಸ್ಸು ಮಾಡಿದ್ದಾರೆ. ₹5,495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದ್ದರು. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸ್ಸು ಮಾಡಿದ್ದರು. ಒಟ್ಟು ₹11,495 ಕೋಟಿಗಳನ್ನು ಕೊಡಬೇಕಿತ್ತು, ಆದರೆ ಕೊಟ್ಟಿಲ್ಲ. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ? ₹11,495 ಕೋಟಿ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಈ ಸವಾಲು ಸ್ವೀಕರಿಸಿ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ? ಈ…

— Siddaramaiah (@siddaramaiah) November 4, 2024

ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಬಡವರಾಗಿಯೇ ಇರಬೇಕು. ಅದಕ್ಕೆ BJP ಅವರನ್ನು ಬಡವರ ವಿರೋಧಿಗಳು ಎಂದು ಕರೆಯುವುದು.

ಜನರಲ್ಲಿ ಶಕ್ತಿ ಇಲ್ಲದಿದ್ದರೆ ತಾನೇ ಅವರನ್ನು ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ? ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ. ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ ಲೆಕ್ಕ ಕೊಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಬಡವರಾಗಿಯೇ ಇರಬೇಕು. ಅದಕ್ಕೆ @BJP4Karnataka ಅವರನ್ನು ಬಡವರ ವಿರೋಧಿಗಳು…

— Siddaramaiah (@siddaramaiah) November 4, 2024

ವಕ್ಫ್ ವಿಚಾರವಾಗಿ BJP ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ? ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು.. ಅವು ಅಭಿವೃದ್ಧಿಯಲ್ಲವೆ? 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ. ಇವೆಲ್ಲ ಅಭಿವೃದ್ದಿಯಲ್ಲವೇ? ಎಂದಿದ್ದಾರೆ.

ವಕ್ಫ್ ವಿಚಾರವಾಗಿ @BJP4Karnataka ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ.

ಮಾಜಿ ಸಂಸದ @mepratap ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ? ಅವರಿಗೆ…

— Siddaramaiah (@siddaramaiah) November 4, 2024

GOOD NEWS: ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from September 1

24/08/2025 8:23 AM2 Mins Read

ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!

24/08/2025 8:13 AM2 Mins Read

BREAKING : ಇಂದು ಬೆಳಗ್ಗೆ 10 ಗಂಟೆಗೆ ನಟ ದರ್ಶನ್ ನಟನೆಯ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್.!

24/08/2025 7:34 AM1 Min Read
Recent News

4 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ

24/08/2025 8:50 AM

ಭಾರತದಲ್ಲಿಯೇ ತಯಾರಿಸಿದ ಮೊದಲ `ಸೆಮಿಕಂಡಕ್ಟರ್ ಚಿಪ್’ ವರ್ಷಾಂತ್ಯದ ವೇಳೆಗೆ ಮಾರುಕಟ್ಟೆಗೆ : ಪ್ರಧಾನಿ ಮೋದಿ ಘೋಷಣೆ

24/08/2025 8:48 AM

BREAKING : ನೈಜೀರಿಯಾ ವಾಯುಪಡೆಯಿಂದ `ಏರ್ ಸ್ಟ್ರೈಕ್’ : 35 ಬಂಡುಕೋರರ ಹತ್ಯೆ | Nigeria air strike

24/08/2025 8:36 AM

ಭಾರತವು ತನ್ನ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯೊಂದಿಗೆ ಜಗತ್ತಿಗೆ ಭರವಸೆಯ ದೀಪವಾಗಿ ನಿಂತಿದೆ: ಪ್ರಧಾನಿ ಮೋದಿ

24/08/2025 8:25 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from September 1

By kannadanewsnow5724/08/2025 8:23 AM KARNATAKA 2 Mins Read

ನವದೆಹಲಿ : ಕೆಲವು ದಿನಗಳ ನಂತರ ಸೆಪ್ಟೆಂಬರ್ ತಿಂಗಳು ಪ್ರಾರಂಭವಾಗಲಿದೆ. ಸೆಪ್ಟೆಂಬರ್ 1, 2025 ರಿಂದ ದೇಶದಲ್ಲಿ ಹಲವು ನಿಯಮಗಳು…

ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!

24/08/2025 8:13 AM

BREAKING : ಇಂದು ಬೆಳಗ್ಗೆ 10 ಗಂಟೆಗೆ ನಟ ದರ್ಶನ್ ನಟನೆಯ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್.!

24/08/2025 7:34 AM

BIG NEWS : ಗುತ್ತಿಗೆ ಶಿಕ್ಷಕರ ನೇಮಕಾತಿಗೆ ಶೇ. 5 ‘ಕೃಪಾಂಕ’ : ಸುಪ್ರೀಂಕೋರ್ಟ್ ಮಹತ್ವದ ಆದೇಶ

24/08/2025 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.