ಮಂಡ್ಯ: ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಜೆಡಿಎಸ್‌ ಶಾಸಕ ಸುರೇಶ್ ಗೌಡ, ನಿಂದಿಸಿ ಬೆದರಿಕೆ ಹಾಕಿರುವ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಡೆದಿದೆ.

ಘಟನೆ ಹಿನ್ನಲೆ: ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದ್ದು, ಇದೇ ಜಾಗದಲ್ಲಿ ಬಗರ್‌ ಹುಕುಂ ಅಡಿಯಲ್ಲಿ ರೈತರು ಅರ್ಜಿ ಸಲ್ಲಿಸಿದ್ದಾರೆ. ಇದೇ ವೇಳೆ ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರು ಕಿಡಿಕಾರಿದ್ದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ಸುರೇಶ್ ಗೌಡ ಆಕ್ರೋಶಗೊಂಡ ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕರ ಈ ವರ್ತನೆಗೆ ವ್ಯಾಪಾಕ ಟೀಕೆ ಕೇಳಿ ಬರುತ್ತಿದ್ದು, ಓಟ್‌ ಬ್ಯಾಂಕ್‌ ಸಲುವಾಗಿ ಅರಣ್ಯದ ಕತ್ತು ಹಿಸುಕಲು ಶಾಸಕರು ಮುಂದಾಗಿರುವುದನ್ನು ಆಕ್ರೋಶ ವ್ಯಕ್ತವಾಗುತ್ತಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ :https://www.facebook.com/1114376272/videos/pcb.10220719367870119/807320490625388

Share.
Exit mobile version