ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ (ಜುಲೈ 4) ನಡೆದ ಟಿ20 ವಿಶ್ವಕಪ್ 2024ರ ಪ್ರಶಸ್ತಿ ಸಂಭ್ರಮಾಚರಣೆಯಲ್ಲಿ ಟೀಂ ಇಂಡಿಯಾ ‘ವಂದೇ ಮಾತರಂ’ ಹಾಡನ್ನು ಹಾಡಿದೆ. ಮುಂಬೈನಲ್ಲಿ ಅಭಿಮಾನಿಗಳ ಸಾಗರದ ನಡುವೆ ವಿಜಯೋತ್ಸವ ಮೆರವಣಿಗೆ ನಡೆಸಿದ ಟೀಮ್ ಇಂಡಿಯಾ, ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿತು.

ಸನ್ಮಾನ ಸಮಾರಂಭದ ನಂತರ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಇತರರು ಸೇರಿದಂತೆ ಭಾರತೀಯ ಕ್ರಿಕೆಟಿಗರು ವಾಂಖೆಡೆ ಕ್ರೀಡಾಂಗಣದ ಸುತ್ತಲೂ ಹೋಗಿ ಅಭಿಮಾನಿಗಳೊಂದಿಗೆ ಜನಪ್ರಿಯ ದೇಶಭಕ್ತಿ ಗೀತೆಯನ್ನು ಹಾಡಿದರು. ಈ ವಿಡಿಯೋವನ್ನು ಬಿಸಿಸಿಐ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

Share.
Exit mobile version