Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಉಪ್ಪು’ ಯಾವಾಗ ಖರೀದಿಸಬೇಕು? ಯಾವ ಸಮಯದಲ್ಲಿ ಖರೀದಿಸಬಾರದು ಗೋತ್ತಾ? ಇಲ್ಲಿದೆ ಮಾಹಿತಿ

30/06/2025 6:25 PM

BREAKING : ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ನಿರಾಸೆ ; ‘ಬಡ್ಡಿದರ’ದಲ್ಲಿ ‘ಯಥಾಸ್ಥಿತಿ’ ಮುಂದುವರಿಕೆ

30/06/2025 6:15 PM

GOOD NEWS: ‘ಸಣ್ಣ ಉಳಿತಾಯ ಯೋಜನೆ’ ಮೇಲಿನ ಬಡ್ಡಿದರ ಯಥಾಸ್ಥಿತಿ ಮುಂದುವರೆಸಿದ ಕೇಂದ್ರ ಸರ್ಕಾರ | Small Savings Schemes

30/06/2025 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ ಯಾರೇ ವಿರೋಧ ಮಾಡಿದರೂ ‘ನೀರಿನ ದರ ಏರಿಕೆ’: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

BIG NEWS: ಬೆಂಗಳೂರಲ್ಲಿ ಯಾರೇ ವಿರೋಧ ಮಾಡಿದರೂ ‘ನೀರಿನ ದರ ಏರಿಕೆ’: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0922/08/2024 3:37 PM

ಬೆಂಗಳೂರು : “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.

“ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ” ಎಂದು ಹೇಳಿದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

“14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ” ಎಂದು ಹೇಳಿದರು.

ಮೇಕೆದಾಟು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಂಬಿಕೆ ಇದೆ

“ನಾನು ಅಧಿಕಾರವಹಿಸಿಕೊಂಡ ತಕ್ಷಣ 6 ಎಂಎಲ್ ಡಿ ನೀರು ಸರಬರಾಜನ್ನು ಹೆಚ್ಚಳ ಮಾಡಲಾಗಿದೆ. ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಮೇಕೆದಾಟು ಯೋಜನೆ ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ” ಎಂದರು.

“ಕೆಆರ್ ಎಸ್ ಯಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರನ್ನು ತರಬಹುದು ಎಂದು ಒಂದಷ್ಟು ಜನ ವರದಿ ಕೊಟ್ಟಿದ್ದಾರೆ. ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ. ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ರಾಜಕಾರಣದಿಂದ ಅಲ್ಲಲ್ಲಿ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ. ಇದನ್ನೂ ಸಹ ಒಂದು ಹಂತಕ್ಕೆ ತಲುಪಿಸಿದ್ದೇನೆ. ಕಾವೇರಿ 5 ನೇ ಹಂತದ ಕಾಮಗಾರಿಗೆ ನಿಂತಿದ್ದು ಮತ್ತೆ ಚಾಲನೆ ಮಾಡಲಾಗುವುದು” ಎಂದು ತಿಳಿಸಿದರು.

“ಕಾಲುವೆಗಳಲ್ಲಿ ನೀರನ್ನು ಕೊನೆಯ ಹಂತಕ್ಕೆ ತಲುಪಿಸಬೇಕು ಎಂದು ಕಾಲುವೆಗಳ ಅಕ್ಕ ಪಕ್ಕ ಅರ್ಧ ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಬೋರ್ ವೆಲ್ ಗಳನ್ನು ಹಾಕುವಂತಿಲ್ಲ ಹಾಗೂ ಪಂಪ್ ಮೂಲಕ ನೀರನ್ನು ಎತ್ತುವಂತಿಲ್ಲ ಎನ್ನುವ ಕಾನೂನು ತರಲಾಗಿದೆ” ಎಂದು ಹೇಳಿದರು.

“ನಾನು ಸೇರಿದಂತೆ ಹಿರಿಯ ಅಧಿಕಾರಿಗಳು ಇಲಾಖೆಗೆ ಇಂದು ಬರುತ್ತೇವೆ ನಾಳೆ ಹೋಗುತ್ತೇವೆ. ಆದರೆ ಇಲಾಖೆಯ ಎಂಜಿನಿಯರ್ ಗಳು, ನೌಕರರು ಸಂಸ್ಥೆಗೆ ಯಾವ ರೀತಿಯ ಶಾಶ್ವತ ಪರಿಹಾರ ಬೇಕು ಎನ್ನುವ ಬಗ್ಗೆ ವರದಿ ತಯಾರಿಸಿ ನನಗೆ ನೀಡಿ. ನೀವುಗಳು ಇಲ್ಲದಿದ್ದರೆ ಬೆಂಗಳೂರಿಗೆ ಹೊಸ ರೂಪ ಬರಲು ಸಾಧ್ಯವಿಲ್ಲ. ಈ ಇಲಾಖೆಯವರು ಹಗಲು ರಾತ್ರಿ ಒತ್ತಡದಲ್ಲಿಯೇ ಕೆಲಸ ಮಾಡಬೇಕಾದ ಪರಿಸ್ಥಿತಿಯಿದೆ” ಎಂದರು.

“ಅಂತರ್ಜಲ ಹೆಚ್ಚಳ ಮಾಡಲು ಕೆರೆ ಅಭಿವೃದ್ದಿ ಸಮಿತಿ ಜೊತೆ ಕೆಲಸ ಮಾಡಬೇಕಿದೆ. ಕಳೆದ ವರ್ಷದ ಬರಗಾಲದ ಸಮಯದಲ್ಲಿ ಬೆಂಗಳೂರಿನಲ್ಲಿ 7 ಸಾವಿರ ಬೋರ್ ವೆಲ್ ಗಳು ಬತ್ತಿ ಹೋಗಿದ್ದರು ಕೂಡ ಹೆಚ್ಚು ಶ್ರಮ ಹಾಕಿ ಕೆಲಸ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಂಡ ನೌಕರರಿಗೆ ಅಭಾರಿಯಾಗಿದ್ದೇನೆ. ನೀರುಗಂಟಿಯಿಂದ ಹಿಡಿದು ಪ್ರತಿಯೊಬ್ಬ ನೌಕರನಿಗೂ ಮನಪೂರ್ವಕ ಅಭಿನಂದನೆಗಳು” ಎಂದು ಹೇಳಿದರು.

BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ: BJP MLC ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

‘ಉಪ್ಪು’ ಯಾವಾಗ ಖರೀದಿಸಬೇಕು? ಯಾವ ಸಮಯದಲ್ಲಿ ಖರೀದಿಸಬಾರದು ಗೋತ್ತಾ? ಇಲ್ಲಿದೆ ಮಾಹಿತಿ

30/06/2025 6:25 PM3 Mins Read

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM1 Min Read

BREAKING: ನಾಳೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

30/06/2025 5:42 PM2 Mins Read
Recent News

‘ಉಪ್ಪು’ ಯಾವಾಗ ಖರೀದಿಸಬೇಕು? ಯಾವ ಸಮಯದಲ್ಲಿ ಖರೀದಿಸಬಾರದು ಗೋತ್ತಾ? ಇಲ್ಲಿದೆ ಮಾಹಿತಿ

30/06/2025 6:25 PM

BREAKING : ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ನಿರಾಸೆ ; ‘ಬಡ್ಡಿದರ’ದಲ್ಲಿ ‘ಯಥಾಸ್ಥಿತಿ’ ಮುಂದುವರಿಕೆ

30/06/2025 6:15 PM

GOOD NEWS: ‘ಸಣ್ಣ ಉಳಿತಾಯ ಯೋಜನೆ’ ಮೇಲಿನ ಬಡ್ಡಿದರ ಯಥಾಸ್ಥಿತಿ ಮುಂದುವರೆಸಿದ ಕೇಂದ್ರ ಸರ್ಕಾರ | Small Savings Schemes

30/06/2025 6:14 PM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM
State News
KARNATAKA

‘ಉಪ್ಪು’ ಯಾವಾಗ ಖರೀದಿಸಬೇಕು? ಯಾವ ಸಮಯದಲ್ಲಿ ಖರೀದಿಸಬಾರದು ಗೋತ್ತಾ? ಇಲ್ಲಿದೆ ಮಾಹಿತಿ

By kannadanewsnow0930/06/2025 6:25 PM KARNATAKA 3 Mins Read

ಉಪ್ಪಿಗೆ ಮಹಾಲಕ್ಷ್ಮಿ ಅಂಶವಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಹಾಗೆಯೇ, ಈ ಉಪ್ಪನ್ನು ನಮ್ಮ ಕೈಯಲ್ಲಿ ಇಟ್ಟುಕೊಂಡು, ನಾವು ಏನು ಪ್ರಾರ್ಥಿಸುತ್ತೇವೆ,…

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM

BREAKING: ನಾಳೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

30/06/2025 5:42 PM

Rain In Karnataka: ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

30/06/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.