Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM

BREAKING : ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ : ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ

21/12/2025 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾವಿರೋದೇ ನಿಮ್ಮ ರಾಜೀನಾಮೆ ಕೊಡಿಸೋದಕ್ಕೆ, ನಾವ್ಯಾಕೆ ಬಟ್ಟೆ ಹರಿದುಕೊಳ್ಳೋಣ?: ಬಿಜೆಪಿ ಪಿ.ರಾಜೀವ್
KARNATAKA

ನಾವಿರೋದೇ ನಿಮ್ಮ ರಾಜೀನಾಮೆ ಕೊಡಿಸೋದಕ್ಕೆ, ನಾವ್ಯಾಕೆ ಬಟ್ಟೆ ಹರಿದುಕೊಳ್ಳೋಣ?: ಬಿಜೆಪಿ ಪಿ.ರಾಜೀವ್

By kannadanewsnow0901/01/2025 4:12 PM

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ ನೀವಾದರೂ ಬುದ್ಧಿ ಹೇಳಿ. ಸುಪಾರಿ ಕೊಟ್ಟಂಥ ಇಷ್ಟು ದೊಡ್ಡ ಆರೋಪ ಯಾವ ಸಚಿವರ ಮೇಲೂ ಬಂದಿಲ್ಲ; ಆರೋಪಮುಕ್ತನಾಗುವವರೆಗೆ ನೀನು (ಪ್ರಿಯಾಂಕ ಖರ್ಗೆ) ಸಚಿವನಾಗಿ ಮುಂದುವರೆಯಬೇಡ ಎಂದು ನಿಮ್ಮ ಮಗನಿಗೆ ನೀವಾದರೂ ಬುದ್ಧಿ ಹೇಳಿ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಿದರು.

ಸುಪಾರಿ ಕೊಡುವ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೀವು ಹೇಗೆ ಸಚಿವಸಂಪುಟದಲ್ಲಿ ಇಟ್ಟುಕೊಳ್ಳುತ್ತೀರಿ ಸಿದ್ದರಾಮಯ್ಯನವರೇ? ಎಂದರಲ್ಲದೆ, ಭ್ರಷ್ಟಾಚಾರಕ್ಕಾಗಿ ಹಿಂಸಿಸಿ ಸಾವಿಗೆ ದುಷ್ಪ್ರೇರಣೆ ಆಗಿದ್ದು, ಅದರಲ್ಲಿ ನೇರವಾಗಿ ಸಚಿವರೇ ಭಾಗಿಯಾಗಿದ್ದಾರೆ. ಸುಪಾರಿ ಕೊಟ್ಟದ್ದಕ್ಕೆ ಬೆನ್ನಿಗೆ ನಿಂತರೆ ಸುಪಾರಿ ಕೊಟ್ಟಿದ್ದೀರೆಂದೇ ಅರ್ಥ. ಸಂವಿಧಾನದ ಬಗ್ಗೆ ಮಾತನಾಡುವ ಖರ್ಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಗ ಸುಪಾರಿಯಲ್ಲಿ ಭಾಗವಹಿಸಿದ್ದಾರೆ ಎಂದರೆ, ಇವರು ಸಚಿವರಾಗಿ ಒಂದು ಕ್ಷಣವೂ ಇರಬಾರದು ಎಂದು ಆಗ್ರಹಿಸಿದರು.

ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆಯವರು ಹೇಳಿದ್ದು, ನಿಮಗಾಗಿ ನಾವ್ಯಾಕೆ ಬಟ್ಟೆ ಹರಿದುಕೊಳ್ಳೋಣ ಎಂದು ಕೇಳಿದರು. ನಾವಿರೋದೇ ನಿಮ್ಮನ್ನು ರಾಜೀನಾಮೆ ಕೊಡಿಸೋದಕ್ಕೆ ಎಂದು ಸವಾಲು ಹಾಕಿದರು.

ಸರ್ವಖಾತೆಯ ಸಚಿವರು, ಎಲ್ಲ ವಿಚಾರದಲ್ಲಿ ಮೂಗು ತೂರಿಸುವ ಸಚಿವರಾದ ಪ್ರಿಯಾಂಕ್ ಖರ್ಗೆಯವರು ಯಾವ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಘೋಷಿಸಿದ್ದಾರೆ. ಒಂದು ನಾಯಿ ಕುಂಟುತ್ತ ನಡೆದರೆ ಅದರ ಬಗ್ಗೆ ಮಾತನಾಡುವ ಸಚಿವ, ಒಬ್ಬ ವ್ಯಕ್ತಿ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡರೆ ಅದರ ಬಗ್ಗೆ ಮಾತನಾಡುವ ಮನುಷ್ಯತ್ವವನ್ನು ಯಾಕೆ ಕಳಕೊಂಡರು ಎಂದು ಪ್ರಶ್ನಿಸಿದರು.

ಪ್ರಿಯಾಂಕ್ ಖರ್ಗೆಯವರು ನಾನ್ಯಾಕ್ರಿ ರಾಜೀನಾಮೆ ಕೊಡಲಿ? ನನ್ನ ಹೆಸರು ಅದರಲ್ಲಿ ಉಲ್ಲೇಖಿಸಿದ್ದಾರಾ ಎಂದು ಕೇಳಿದ್ದಾರೆ. ಎಲ್ಲದರಲ್ಲಿ ಮೂಗು ತೂರಿಸುವ ಕೆಲಸದ ಒತ್ತಡದಲ್ಲಿ ಸಚಿನ್ ಪಾಂಚಾಳ ಅವರ ಡೆತ್ ನೋಟನ್ನು ವ್ಯವಧಾನದಿಂದ ಓದುವ ತಾಳ್ಮೆಯೂ ಅವರಿಗೆ ಇರಲಾರದು ಎಂದು ತಿಳಿಸಿದರು.

ಡೆತ್ ನೋಟಿನಲ್ಲಿ ಈ ರಾಜ್ಯ ಸರಕಾರದ ಭ್ರಷ್ಟಾಚಾರ ಬಯಲಾಗಿದೆ. ಸುಪಾರಿ ಕೊಡುವಂಥವರು ಈ ಸಚಿವ ಸಂಪುಟದ ಒಳಗಿದ್ದಾರೆ ಎಂಬುದು ಈ ಡೆತ್ ನೋಟಿನಲ್ಲಿ ಬಹಿರಂಗವಾಗಿದೆ. ಭ್ರಷ್ಟಾಚಾರದ ಕುರಿತಾಗಿ ಇಷ್ಟು ಪರ್ಸೆಂಟ್ ಕಮಿಷನ್ ಕೊಡಬೇಕೆಂದು ಹೇಳಿದ್ದಕ್ಕೆ ನಾನು ಹಣ ಹೊಂದಿಸಿದೆ. ಉಳಿದ ದುಡ್ಡಿಗಾಗಿ ಹಿಂಸಿಸಿದ್ದರು; ಜೀವ ಬೆದರಿಕೆ ಹಾಕಿದ್ದರು. ಜೀವ ಬೆದರಿಕೆ ಹಾಕಲು ಬೆನ್ನಿಗೆ ಯಾರು ನಿಂತರು ಎಂದು ಪ್ರಶ್ನಿಸಿದರು.

ಮನೆಗೆ ನುಗ್ಗಿ ಬಾಕಿ ದುಡ್ಡಿಗಾಗಿ ಬೆದರಿಕೆ ಹಾಕಲು ಹಿಂದೆ ನಿಂತ ಸಚಿವ ಯಾರು ಎಂದು ಪ್ರಶ್ನೆಯನ್ನು ಮುಂದಿಟ್ಟರು. ಡೆತ್ ನೋಟಿನಲ್ಲಿ ಅವರು ಮಾನ್ಯ ಮಂತ್ರಿಗಳು (ಅಂದರೆ ಇದೇ ಪ್ರಿಯಾಂಕ್ ಖರ್ಗೆಯವರು) ಅಂದು ಇಜಾಜ್ ಹುಸೇನ್ ಅವರಿಗೆ ಟೆಂಡರ್ ಮಾಡಿಕೊಡು ಎಂದಿದ್ದಾರೆ. ಅದರ ಹಿನ್ನೆಲೆಯಲ್ಲೇ ಬೆದರಿಕೆ ಹಾಕಲಾಗಿದೆ ಎಂದು ವಿಶ್ಲೇಷಿಸಿದರು.

ವಸೂಲಿಗೆ ಹೋದ ಆರೋಪಿ ಹಿಂದೆ ಪ್ರಿಯಾಂಕ ಖರ್ಗೆ ಇದ್ದಾರೆಂದೇ ಡೆತ್ ನೋಟಿನ ಅರ್ಥ. ಭ್ರಷ್ಟಾಚಾರ ಆಗಿದ್ದು, ಆ ಆತ್ಮಹತ್ಯೆಗೆ ಪ್ರಿಯಾಂಕ ಖರ್ಗೆ ನೇರ ಕಾರಣ ಎಂದು ಆರೋಪಿಸಿದರು. ಸುಪಾರಿ ಕೊಟ್ಟು ಕೊಲೆ ಮಾಡಿಸುವುದು ಇಡೀ ದೇಶ ಬೆಚ್ಚಿ ಬೀಳಿಸುವ ಸುದ್ದಿ. ಯಾರ್ಯಾರಿಗೆ ಸುಪಾರಿ ಕೊಟ್ಟಿದ್ದೀರಿ? ಲಿಂಗಾಯತ ಸಮುದಾಯದ ಸ್ವಾಮೀಜಿ, ದಲಿತ ಸಮುದಾಯದ ಶಾಸಕ, ದಲಿತ ಮುಖಂಡ, ಬಿಜೆಪಿ ಜಿಲ್ಲಾಧ್ಯಕ್ಷರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದೀರಲ್ಲವೇ ಈ ಸರಕಾರದಲ್ಲಿ ಎಂದು ಕೇಳಿದರು.

ಆಂದೋಲ ಸ್ವಾಮಿ, ಚಂದು ಪಾಟೀಲ್, ಮಣಿಕಂಠ ರಾಠೋಡ, ಬಸವರಾಜ ಮತ್ತಿಮೂಡ ಇವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ; ಸುಪಾರಿ ಕೊಡಲಾಗಿದೆ. ಈತನ ಬೆನ್ನಿಗೆ ಮಾನ್ಯ ಮಂತ್ರಿಗಳು ಬೆಂಬಲವಾಗಿದ್ದಾರೆ ಎಂದು ತಿಳಿಸಿದ್ದು, ಪ್ರಿಯಾಂಕ ಖರ್ಗೆ ನೇರವಾಗಿ ಸುಪಾರಿಯಲ್ಲಿ ಭಾಗವಹಿಸಿದಂತೆ ಆಗಿಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ತಾಯಿ ,ನಾಲ್ವರು ಸಹೋದರಿಯರ ಹತ್ಯೆ ಪ್ರಕರಣ: ‘ಹಿಂದೂ’ ಆಗಲು ಬಯಸಿದ್ದ ಆರೋಪಿ ಅರ್ಷದ್

BREAKING : ಯಾದಗಿರಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧ ಹಿನ್ನೆಲೆ, ಕತ್ತು ಕುಯ್ದು ವ್ಯಕ್ತಿಯ ಬರ್ಬರ ಹತ್ಯೆ!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM1 Min Read

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM1 Min Read

BREAKING : ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ : ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ

21/12/2025 3:04 PM1 Min Read
Recent News

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM

BREAKING : ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ : ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ

21/12/2025 3:04 PM

BIG NEWS : ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

21/12/2025 2:52 PM
State News
KARNATAKA

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

By kannadanewsnow0521/12/2025 3:21 PM KARNATAKA 1 Min Read

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ…

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM

BREAKING : ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ : ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ

21/12/2025 3:04 PM

BIG NEWS : ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

21/12/2025 2:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.