Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0724/05/2024 4:12 PM

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು.

ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ : ಈ ಬಾರಿ ಡಾ: ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು ಒತ್ತಡವಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹೈ ಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದರು.

ಪ್ರಕರಣ ದುರ್ಬಲಗೊಳಿಸಲು ಹೇಳಿಕೆ : ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ನಂಬಿರುವುದು ನಿಮ್ಮ ತಪ್ಪು : ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು ಎಂದರು.

ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ ಎಂದರು.

ಪಿಎಂಒ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ : ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.

ಬಿಜೆಪಿ ಯವರನ್ನು ಪ್ರಶ್ನಿಸಿ : ಚುನಾವಣಾ ಫಲಿತಾಂಶಕ್ಕಾಗಿ ಇದನ್ನು ವಿಳಂಬ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಪ್ರಶ್ನೆಯನ್ನು ಬಿಜೆಪಿಯ ಪ್ರಹ್ಲಾದ್ ಜೋಶಿ ಅವರನ್ನು ಕೇಳಿ ಎಂದರು.

ಮನೆಯವರಿಗೆ ಹೇಳದೆ ವಿದೇಶಕ್ಕೆ ತೆರಳಿದರೇ : ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಮಾತನಾಡಿ ಇವರಿಗೆ ಗೊತ್ತಿಲ್ಲದೆ ಪ್ರಜ್ವಲ ರೇವಣ್ಣ ಹೊರಟು ಹೋಗಿದ್ದಾರಾ?

ಪ್ರಚಾರಕ್ಕೆ ಏಕೆ ಹೋಗಿದ್ದರು : ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಪ್ರಶ್ನಿಸಿದರು.

ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ

ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದರು.

ಪರಿಶೀಲನೆ : ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

We are ready for taluk zilla panchayat and BBMP elections: Siddaramaiah
Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.