ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಇದುವರೆಗೆ ಒಟ್ಟು 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇಂದು ಫಿಲಂ ಚೇಂಬರ್ನ ಪದಾಧಿಕಾರಿಗಳು ಸೇರಿ ಚಿತ್ರದುರ್ಗದ ರೇಣುಕಾ ಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾತನಾಡಿದ ಫಿಲಂ ಚೇಂಬರ್ ನ ಅಧ್ಯಕ್ಷ ಎನ್ಎಂ ಸುರೇಶ್ ಅವರು ಚಿತ್ರರಂಗದಿಂದ ದರ್ಶನ್ ಫ್ಯಾನ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲು ಆಗಲ್ಲ ಎಂದು ತಿಳಿಸಿದರು.
ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಕುಟುಂಬದ ಭೇಟಿ ಬಳಿಕ ಮಾತನಾಡಿದ ಅವರು, ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೆವು. ಬಹಳ ನೋವಾಗಿದೆ ಎಂದು ಚಿತ್ರದುರ್ಗದಲ್ಲಿ ಫಿಲಂ ಅಧ್ಯಕ್ಷ ಎಂ ಎನ್ ಸುರೇಶ್ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಎನ್ ಎಂ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಯಾರೇ ಮಾಡಿದರು ತಪ್ಪು ತಪ್ಪೇ. ವಾಣಿಜ್ಯ ಮಂಡಳಿ ತಪ್ಪುಗಳನ್ನು ಖಂಡಿಸುತ್ತದೆm ರೇಣುಕಾಸ್ವಾಮಿ ತಂದೆ ತಾಯಿ ಕಣ್ಣೀರು ಹಾಕಿದ್ದು ನೋಡಿ ನಮಗೂ ಕಣ್ಣೀರು ಬಂತು ಎಂದರು.
ಚಿತ್ರರಂಗದಿಂದ ದರ್ಶನ್ ಬ್ಯಾನ್ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲು ಆಗಲ್ಲ ಕಲಾವಿದರ ಸಂಘ ನಿರ್ಮಾಪಕರ ಸಂಘ ಇದೆ ಅಲ್ಲಿ ನಿರ್ಧಾರವಾಗುತ್ತದೆ ಈ ಹಿಂದೆ ಡಾಕ್ಟರ್ ರಾಜಕುಮಾರ್ ವಿಷ್ಣುವರ್ಧನ್ ಶಂಕರನಾಗಗೆ ಕೂಡ ಫ್ಯಾನ್ಸ್ ಇದ್ದರು ಆದರೆ ಇತ್ತೀಚಿಗೆ ಅಭಿಮಾನಿಗಳು ಪ್ರಚೋದನೆಗೆ ಒಳಗಾಗುತ್ತಿದ್ದಾರೆ ಯಾರು ಪ್ರಶೋದನೆಗೆ ಒಳಗಾಗಬಾರದು.ಸಾಕೇತಿಕವಾಗಿ 5 ಲಕ್ಷ ನೀಡಿದ್ದೇವೆ ಶಾಶ್ವತ ಪರಿಹಾರ ನೀಡುತ್ತೇವೆ ಕ್ಷಮೆ ಕೇಳಲು ಬಂದಿದ್ದೇವೆ ಅವರ ಬಗ್ಗೆ ವೈಭವೀಕರಿಸಬಾರದು ಎಂದು ತಿಳಿಸಿದರು.