Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾವು ‘ಜೆಡಿಎಸ್ ಪಕ್ಷ’ದವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್
KARNATAKA

ನಾವು ‘ಜೆಡಿಎಸ್ ಪಕ್ಷ’ದವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್

By kannadanewsnow0920/03/2024 2:03 PM

ಬೆಂಗಳೂರು : “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಸುರೇಶ್ ಉತ್ತರಿಸಿದ ಅವರು, “ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ” ಎಂದು ತಿರುಗೇಟು ನೀಡಿದರು.

ಆಸ್ಪತ್ರೆಯಿಂದ ಬಂದ ನಂತರ ಬಲಿಷ್ಠವಾಗಿ ಪ್ರಚಾರ ಮಾಡುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಟವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ” ಎಂದು ಹೇಳಿದರು.

ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ:

ಬಿಜೆಪಿ- ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, “ಜಾತ್ಯಾತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, ʼಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ʼಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ʼರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ – ಎಂಬೆಲ್ಲ ಹೇಳಿಕೆಗಳನ್ನು ಜನರಿಗೆ ತೋರಿಸಿ. ನಾನು ಮಾಡಿರುವ ಕೆಲಸಗಳಿಗೆ ನನ್ನ ಕ್ಷೇತ್ರದ ಜನತೆಯ ಬಳಿ ಕೂಲಿ ಕೇಳುತ್ತಿದ್ದೇನೆ. ಮಾಧ್ಯಮದವರು ನನಗೆ ಕೂಲಿ ಕೊಡಿಸುತ್ತೀರಾ ಎನ್ನುವ ಭಾವನೆ ಇದೆ” ಎಂದು ಹೇಳಿದರು.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಇಳಿಯುತ್ತಾರೆ ಎಂದಾಗ “ನಮ್ಮ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ, ಗೆಲ್ಲುತ್ತಾರೆ. ನಾವು ಕೊಟ್ಟಿರುವ ಐದು ಗ್ಯಾರಂಟಿಗಳು, ಮುಂದಿನ ಐದು ವರ್ಷದಲ್ಲಿ ಈ ರಾಜ್ಯದ ಅಭಿವೃದ್ದಿಗೆ ನಾವು ಕೈಗೊಂಡಿರುವ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ” ಎಂದರು.

ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಕೇಳಿದಾಗ “ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ” ಎಂದು ವ್ಯಂಗ್ಯವಾಡಿದರು.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್- ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆ ಬಗ್ಗೆ ಪ್ರಶ್ನಿಸಿದಾಗ “ನಾನು ಕ್ಷೇತ್ರದ ಕೆಲಸದಲ್ಲಿ ನಿರತನಾಗಿದ್ದು, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರನ್ನು ಕೇಳಬೇಕು. ಈಗ ನಾನು ಏನನ್ನೂ ಹೇಳುವುದಿಲ್ಲ. ನಾನು ಗ್ರೌಂಡಿನಲ್ಲಿ ಇದ್ದೇನೆ, ನೀವು ಮೇಲೆ ಇದ್ದೀರಿ. ಈ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ನಿರ್ಧಾರ” ಎಂದರು.

ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ:

ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ. ಕೃಷ್ಣಗಿರಿಯಿಂದ ಬರುತ್ತಾರೆ ಎನ್ನುವುದು ಅವರಿಗೆ ತಿಳಿದಿದೆ ಎಂದರೆ ಬೇಕಂತಲೇ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂದರ್ಥವಲ್ಲವೇ? ಈ ವಿಚಾರದಲ್ಲೂ ರಾಜಕಾರಣಕ್ಕೆ ಮುಂದಾಗಿದ್ದಾರೆ” ಎಂದು ಹೇಳಿದರು.

`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಕೆ.ಎಸ್ ಈಶ್ವರಪ್ಪ ನಂತರ ಮತ್ತೊಬ್ಬ ಬಿಜೆಪಿ ನಾಯಕ ‘ಬಂಡಾಯ’ : ‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

ನಾವು ಜೆಡಿಎಸ್ ಪಕ್ಷದವರನ್ನು ಪ್ರಧಾನ ಮಂತ್ರಿ ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್ We have made JD(S) prime minister chief minister: DK Shivakumar Suresh
Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM1 Min Read

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM1 Min Read
Recent News

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM
State News
KARNATAKA

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

By kannadanewsnow0511/05/2025 2:28 PM KARNATAKA 1 Min Read

ಬಾಗಲಕೋಟೆ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಓವರ್ ಟೇಕ್ ಮಾಡಲು ಹೋಗಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು…

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM

ALERT : ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ಇಲ್ಲಿದೆ ಸುಲಭ ವಿಧಾನ.!

11/05/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.