Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಗದೀಪ್ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

22/07/2025 12:19 PM

BREAKING : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | Jagdeep Dhankhar

22/07/2025 12:17 PM

BREAKING : ರೈತರ `ಕೃಷಿ ಸಾಲ ಮನ್ನಾ’ ಕುರಿತು ಸರ್ಕಾರದಿಂದ ಮಹತ್ವದ ಹೇಳಿಕೆ

22/07/2025 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 545 ಪಿಎಸ್ಐ ಹುದ್ದೆಗಳ ಪಾರದರ್ಶಕ ನೇಮಕಾತಿಯ ಮೂಲಕ ನನಗೆ ನೋಟಿಸ್ ಕೊಟ್ಟಿದ್ದ ಬಿಜೆಪಿಗೆ ಉತ್ತರ ನೀಡಿದ್ದೇವೆ: ಪ್ರಿಯಾಂಕ್ ಖರ್ಗೆ
KARNATAKA

545 ಪಿಎಸ್ಐ ಹುದ್ದೆಗಳ ಪಾರದರ್ಶಕ ನೇಮಕಾತಿಯ ಮೂಲಕ ನನಗೆ ನೋಟಿಸ್ ಕೊಟ್ಟಿದ್ದ ಬಿಜೆಪಿಗೆ ಉತ್ತರ ನೀಡಿದ್ದೇವೆ: ಪ್ರಿಯಾಂಕ್ ಖರ್ಗೆ

By kannadanewsnow0922/10/2024 1:25 PM

ಬೆಂಗಳೂರು: ಪಾರದರ್ಶಕ ನೇಮಕಾತಿಯ ಮೂಲಕ ನಮ್ಮ ಸರ್ಕಾರ ಅರ್ಹ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಿಂದೆ ನಾನು ಹಗರಣವನ್ನು ಬಯಲಿಗೆಳೆದಾಗ ಸಿಐಡಿ ಮೂಲಕ ನೋಟಿಸ್ ನೀಡಿತ್ತು ಅಂದಿನ ಬಿಜೆಪಿ ಸರ್ಕಾರ, ನನ್ನ ಮೇಲಿನ ಬಿಜೆಪಿಯವರ ದಾಳಿಗೆ 545 ಪಿಎಸ್ಐ ಹುದ್ದೆಗಳ ನೇಮಕದ ಮೂಲಕ ಉತ್ತರ ನೀಡಿದ್ದೇವೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು ಎಂದು ಹೇಳಿದ್ದಾರೆ.

ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹಸಚಿವರಾದಿಯಾಗಿ ಬಿಜೆಪಿ ನಾಯಕರೆಲ್ಲರೂ ಸದನದಲ್ಲಿ “ಹಗರಣ ನಡೆದೇ ಇಲ್ಲ” ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು. ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು ಬಿಜೆಪಿಗರು ನಡೆಸಿದ ಕಸರತ್ತು ಒಂದೆರಡಲ್ಲ, ನನಗೆ CID ಪೊಲೀಸರ ಮೂಲಕ ಎರಡೆರಡು ಬಾರಿ ನೋಟಿಸ್ ನೀಡಿದ್ದರು. ಪ್ರಮುಖ ಆರೋಪಿ ಆರ್.ಡಿ ಪಾಟೀಲನೊಂದಿಗೆ ನನ್ನ ಹೆಸರು ತಳುಕು ಹಾಕಲು ಯತ್ನಿಸಿದ್ದರು. ನನ್ನ ವಿರುದ್ಧ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ತಮ್ಮ ಕೊಳಕು ನಾಲಿಗೆಯ ಮೂಲಕ ಯುದ್ಧ ಸಾರಿದ್ದರು. “ಕಾನ್ವೆಂಟ್ ದಲಿತ್” ಎಂಬ ಬಿರುದನ್ನೂ ಕೊಟ್ಟಿದ್ದರು ಎಂದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು.

ನಾವು ಈ ಹಗರಣವನ್ನು ಬಿಚ್ಚಿಟ್ಟಾಗ… pic.twitter.com/GQLaCkA9ZP

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 22, 2024

“ನೀರಿಗಿಳಿದ ಮೇಲೆ ಚಳಿಯ ಚಿಂತೆಯೇಕೆ” ಎನ್ನುವಂತೆ ನ್ಯಾಯದ ಹೋರಾಟಕ್ಕೆ ಇಳಿದ ಮೇಲೆ ಬಿಜೆಪಿಗರ ದಾಳಿಗಳನ್ನು ಲೆಕ್ಕಿಸಲಿಲ್ಲ, ಲೆಕ್ಕಿಸುವ ಜಾಯಮಾನವೂ ನನ್ನದಲ್ಲ. ಇಂದು ನಮ್ಮ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ಪ್ರಾಮಾಣಿಕ ನೇಮಕಾತಿಯೇ ಬಿಜೆಪಿಗರಿಗೆ ನಾನು ಕೊಡಬಹುದಾದ ಅತ್ಯುತ್ತಮ ಉತ್ತರ ಎಂದು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇಂದು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ ಸರ್ಕಾರ ಲೂಟಿಗೆ ಬಳಸಿಕೊಂಡಿದ್ದ ಅದೇ 545 ಪಿಎಸ್ಐ ಹುದ್ದೆಗಳಿಗೆ ಪ್ರತಿಭಾವಂತ ಅಭ್ಯರ್ಥಿಗಳನ್ನು ನಿಯಮಾನುಸಾರ, ನ್ಯಾಯಸಮ್ಮತವಾಗಿ ಆಯ್ಕೆ ಮಾಡಿದೆ. ಆಯ್ಕೆ ಪ್ರಕ್ರಿಯೆ ವಿಳಂಬವಾದರೂ ಪಾರದರ್ಶಕವಾಗಿರಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳೆಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಚುನಾವಣೆಯ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಕೊಡಲಾಗಿದೆ, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳು ನಿರಾಸೆಗೊಳ್ಳದೆ ತಮ್ಮ ಪ್ರಯತ್ನವನ್ನು ಮುಂದುವರೆಸಬೇಕು, ಪ್ರತಿಭೆಗೆ ತಕ್ಕ ಫಲ ಪಡೆಯುವ ವಿಫುಲ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಯುವ ಸಮುದಾಯದ ಜೊತೆಗಿದೆ. ನೊಂದವರಿಗೆ ನ್ಯಾಯ ನೀಡುವುದು, ಯುವಜನರಿಗೆ ಸುಭದ್ರ ಬದುಕು ರೂಪಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದಿದ್ದಾರೆ.

ವಿಧಾನಸಭಾ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್

BREAKING: ದೆಹಲಿ, ಹೈದರಾಬಾದ್ CRPF ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | CRPF Schools Receive Bomb Threats

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : `ಆಯುಷ್ಮಾನ್ ಆರೋಗ್ಯ ಕೇಂದ್ರ’ಗಳಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/07/2025 11:56 AM1 Min Read

ರಾಯಚೂರಲ್ಲಿ ಊಟ ಮಾಡಿ ಮೂವರ ಸಾವು ಪ್ರಕರಣ : ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಶಂಕೆ

22/07/2025 11:49 AM1 Min Read

BREAKING : ನಟ ದರ್ಶನ್ ಕೇಸ್ ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್.!

22/07/2025 11:46 AM1 Min Read
Recent News

BREAKING : ಜಗದೀಪ್ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

22/07/2025 12:19 PM

BREAKING : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | Jagdeep Dhankhar

22/07/2025 12:17 PM

BREAKING : ರೈತರ `ಕೃಷಿ ಸಾಲ ಮನ್ನಾ’ ಕುರಿತು ಸರ್ಕಾರದಿಂದ ಮಹತ್ವದ ಹೇಳಿಕೆ

22/07/2025 12:14 PM

BREAKING: ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ | Bomb threat

22/07/2025 12:13 PM
State News
KARNATAKA

ಸಾರ್ವಜನಿಕರೇ ಗಮನಿಸಿ : `ಆಯುಷ್ಮಾನ್ ಆರೋಗ್ಯ ಕೇಂದ್ರ’ಗಳಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5722/07/2025 11:56 AM KARNATAKA 1 Min Read

ಬೆಂಗಳೂರು : ರಾಜ್ಯದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಹಲವು ಸೌಲಭ್ಯಗಳು ಸಿಗುತ್ತಿದ್ದು, ಸಾರ್ವಜನಿಕರಿಗೆ ಸಿಗುವ ಆರೋಗ್ಯ ಸೇವೆಗಳ ಪ್ಯಾಕೇಜ್ಗಳ…

ರಾಯಚೂರಲ್ಲಿ ಊಟ ಮಾಡಿ ಮೂವರ ಸಾವು ಪ್ರಕರಣ : ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಶಂಕೆ

22/07/2025 11:49 AM

BREAKING : ನಟ ದರ್ಶನ್ ಕೇಸ್ ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್.!

22/07/2025 11:46 AM

BREAKING : ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

22/07/2025 11:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.