ತುಮಕೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂಬುದಾಗಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿರೋ ಬಗ್ಗೆ ಮಾತನಾಡಿದಂತ ಅವರು, ನಮ್ಮ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಪಕ್ಷದಲ್ಲೇ ಜನಾರ್ಧನ ರೆಡ್ಡಿ ಅವರನ್ನು ಉಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು.

ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದು ಆಶ್ಚರ್ಯವಾಗಿದೆ. ಬೇರೆ ಪಕ್ಷಗಳು ಸ್ವಾಭಾವಿಕವಾಗಿ ಅಷ್ಟೊಂದು ಬೆಳವಣಿಗೆ ಕಾಣಿಸುತ್ತಿಲ್ಲ. ಯಾವು ಉದ್ದೇಶಕ್ಕಾಗಿ ಹೊಸ ಪಕ್ಷ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ತನ್ನ ಪ್ರಾಣ ಸ್ನೇಹಿತ ಹೊಸ ಪಕ್ಷ ರಚನೆ ಬಗ್ಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದೇನು ಗೊತ್ತಾ?

ಬೆಂಗಳೂರಿನಲ್ಲಿ ಗಾಂಜಾ ಮತ್ತಿನಲ್ಲಿ ಪೊಲೀಸರ ಮೇಲೆ ಲಾಂಗ್ ಬೀಸಿದ ಪುಂಡ: ಕಾಲಿಗೆ ಗುಂಡೇಟು, ಅರೆಸ್ಟ್

Share.
Exit mobile version