ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಚೊಂಬು ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಿರೋಧ ಪಕ್ಷದ ನಾಯಕ ಆರ್ ಅಶೋಕಗೆ ಕೇಳಿ 15 ಲಕ್ಷ ಹಣ ಪ್ರತಿಯೊಬ್ಬ ನಾಗರೀಕನ ಅಕೌಂಟಿಗೆ ಹಾಕುತ್ತೇವೆ ಎಂದಿದ್ದರು ಹಾಕಿದ್ದೀರಾ ಎಂದು ಪ್ರಶ್ನಿಸಿದರು.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತಿವಿ ಅಂದ್ರಲ್ಲ ಹಾಕಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದಿದ್ದರು ಮಾಡಿದ್ರ? ಅಲ್ಲದೆ ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಹೇಳಿದರು ಅದೆಲ್ಲವನ್ನು ಮಾಡಿದ್ರಾ? ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇವೆ ಅಂದ್ರು ಇಳಿಸಿದ್ದಾರಾ? ಬಿಜೆಪಿಯವರು ಅಚ್ಚೆದಿನ್ ಬರುತ್ತೆ ಅಂತ ಹೇಳಿದರು ಬಂತಾ? ಅದಕ್ಕೆ ಕಾಲಿ ಚೆಂಬು ಅಂತಿರೋದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸರ್ಕಾರ ವಜಾ ಮಾಡಬೇಕೆಂದು ಡಾಕ್ಟರ್ ಅಶ್ವತ್ ನಾರಾಯಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾರು ಹೇಳುತ್ತಾರೆ ಮೊದಲು ಅವರನ್ನು ವಜಾ ಮಾಡಿ. ನಮಗೆ ಜನ ಆಶೀರ್ವಾದ ಮಾಡಿರೋದು ಇವರ್ಯಾರು ಹೇಳುವುದಕ್ಕೆ. 66 ಸ್ಥಾನ ಕೊಟ್ಟು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಿ ಎಂದು ಜನರು ಹೇಳಿದ್ದಾರೆ ಎಂದು ಅಶ್ವಥ್ ನಾರಾಯಣ ವಿರುದ್ಧ ಆಕ್ರೋಶ ಹೊರ ಹಾಕಿದರು.

Share.
Exit mobile version