Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಡಿಯುವ ನೀರು ಕೊಡದೆ ಯಾವ ‘ಬ್ರಾಂಡ್ ಬೆಂಗಳೂರು’ ಮಾಡ್ತೀರಾ?: ಡಿಕೆಶಿಗೆ ‘AAP ಮೋಹನ್ ದಾಸರಿ’ ಪ್ರಶ್ನೆ
KARNATAKA

ಕುಡಿಯುವ ನೀರು ಕೊಡದೆ ಯಾವ ‘ಬ್ರಾಂಡ್ ಬೆಂಗಳೂರು’ ಮಾಡ್ತೀರಾ?: ಡಿಕೆಶಿಗೆ ‘AAP ಮೋಹನ್ ದಾಸರಿ’ ಪ್ರಶ್ನೆ

By kannadanewsnow0928/02/2024 6:23 PM

ಬೆಂಗಳೂರು: ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗೆ ಪರ್ಯಾಯವಾಗಿ ಬಿಡಬ್ಲ್ಯುಎಸ್‌ಎಸ್‌ಬಿ ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್ ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ ಎಂದರು.

ಕಾವೇರಿ ನೀರು ಬೆಂಗಳೂರಿನ ಎಲ್ಲಾ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲಾ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಅನಧಿಕೃತ ಟ್ಯಾಂಕರ್ ಮಾಫಿಯಾದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದರು.

ಟ್ಯಾಂಕರ್ ನೀರು ಸರಬರಾಜು ಅನಧಿಕೃತ, ಇದಕ್ಕೆ ಕಾನೂನಿನಲ್ಲಿ ಅನುಮತಿಯೇ ಇಲ್ಲ. ಆದರೂ ಬೆಂಗಳೂರಿನಲ್ಲಿ ನೀರು ಸರಬರಾಜು ಮಾಫಿಯಾ ತೀವ್ರವಾಗಿದೆ ಎಂದರು. ಬೇಸಿಗೆ ಆರಂಭವಾಗುವ ಮುನ್ನವೇ ₹600 ಇರಬೇಕಿದ್ದ ಟ್ಯಾಂಕರ್ ನೀರಿನ ಬೆಲೆ ₹3000 ದವರೆಗೆ ಮುಟ್ಟಿದೆ ಎಂದರು.

ಡಿ.ಕೆ. ಶಿವಕುಮಾರ್ ಅವರೇ ಕುಡಿಯುವ ನೀರು ಅತ್ಯಗತ್ಯ ಎಷ್ಟಿದೆ ಎಂದು ಗೊತ್ತಿದೆ. ಕುಡಿಯುವ ನೀರಿದ್ದರೆ ಅಲ್ಲವೇ ಬ್ರಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ ಎಂದು ಎಚ್ಚರಿಕೆ ನೀಡಿದರು.

ನೀವೇ ಒಂದು ಮೊಬೈಲ್ ಆಪ್ ಸಿದ್ದಮಾಡಿ ಟ್ಯಾಂಕರ್ ಬುಕ್ ಮಾಡಲು ಅವಕಾಶ ಕೊಡಿ. ಸಹಾಯವಾಣಿ ಸಂಖ್ಯೆಯನ್ನು ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ದೊಡ್ಡ ಜಗಳವೇ ನಡೆದರೂ ಅಚ್ಚರಿ ಇಲ್ಲ ಎಂದರು.

ಬೆಂಗಳೂರು ನಗರಾಧ್ಯಕ್ಷರಾದ ಡಾ. ಸತೀಶ್ ಮಾತನಾಡಿ, ಜಲಮಂಡಳಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 110 ಹಳ್ಳಿಗಳಿಗೆ 131 ಕೋಟಿ ರೂ.ಗಳನ್ನು ಕೊಳವೆಬಾವಿ ಕೊರೆಸಲು ಅನುದಾನ ಕೊಡುತ್ತಿರುವುದು ಸಾಕಾಗುವುದಿಲ್ಲ. ಬೆಂಗಳೂರಿನಲ್ಲಿ ಕೇವಲ 150 ಸ್ಥಳಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸುಳ್ಳು. ಒಂದು ವಿಧಾನಸಭೆ ಕ್ಷೇತ್ರದಲ್ಲಿ 50 ಕಡೆಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಹೇಳಿದರು.

ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಮಹಿಳಾ ಮುಖಂಡ ಸತ್ಯವತಿ ಮಾಧ್ಯಮ ಗೋಷ್ಠಿಯಲ್ಲಿ ಹಾಜರಿದ್ದರು.

ಬೆಂಗಳೂರಲ್ಲಿ ‘ವಾಟರ್ ಟ್ಯಾಂಕರ್’ ಮಾಫಿಯಾಗೆ ‘BBMP’ ಕಡಿವಾಣ: ಮಾ.7ರೊಳಗೆ ‘ನೋಂದಣಿ ಕಡ್ಡಾಯ’

ಗ್ರಾಹಕರಿಗೆ ‘ಮ್ಯಾನೇಜರ್’ ವಂಚನೆ ಆರೋಪ: ಈ ಸ್ಪಷ್ಟನೆ ಕೊಟ್ಟ ‘ICICI ಬ್ಯಾಂಕ್’

Share. Facebook Twitter LinkedIn WhatsApp Email

Related Posts

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM3 Mins Read

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM2 Mins Read

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM1 Min Read
Recent News

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM
State News
KARNATAKA

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

By kannadanewsnow0928/06/2025 2:54 PM KARNATAKA 3 Mins Read

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ…

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.