Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NSA ದೋವಲ್ ಜೊತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವ ವಾಂಗ್, ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಕರೆ

11/05/2025 10:27 AM

ಅಮೇರಿಕಾ ಮತ್ತು ಚೀನಾ ನಡುವೆ ಮೊದಲ ದಿನದ ಆರ್ಥಿಕ ಮಾತುಕತೆ ಅಂತ್ಯ | US -China

11/05/2025 10:24 AM

ಭಾರತ-ಪಾಕಿಸ್ತಾನ ಕದನ ವಿರಾಮ: ಕಾಶ್ಮೀರ ಪರಿಹಾರಕ್ಕೆ ಎರಡೂ ರಾಷ್ಟ್ರಗಳೊಂದಿಗೆ ಕೆಲಸ ಮಾಡುತ್ತೇವೆ: ಡೊನಾಲ್ಡ್ ಟ್ರಂಪ್

11/05/2025 10:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ DKS ಹೇಳಿದ್ದೇನು..?
KARNATAKA

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ DKS ಹೇಳಿದ್ದೇನು..?

By kannadanewsnow0914/11/2024 4:46 PM

ಬೆಂಗಳೂರು : “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದರು.

ಇದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂದು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಸಲಹೆಯುಕ್ತ ಉತ್ತರ.

“ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ, ವಿಧಾನಸೌಧನ ಸಮ್ಮೇಳನಾ ಸಭಾಂಗಣವು ದೇಶಕ್ಕೆ ಸಂವಿಧಾನ ತರುವಂತಹ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು” ಎಂದು ಸಲಹೆ ನೀಡಿದರು.

ವಯೋಮಿತಿ ನಿಗದಿ ಮಾಡಿ ಗಂಡು ಮಕ್ಕಳಿಗೂ ಶಕ್ತಿ ಯೋಜನೆ ನೀಡುವ ಬಗ್ಗೆ ಚರ್ಚೆ:

ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಚರಣ್, ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ ಎಂದು ಕೇಳಿದಾಗ, “ನಿಮ್ಮ ತಾಯಿಗೆ 2000, ಬಸ್ ಉಚಿತ, 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ನೀಡಲಾಗುತ್ತಿದೆ. ನೀನು ಕೇಳಿರುವ ಪ್ರಶ್ನೆಗೆ ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು.

2 ಸಾವಿರ ಸಿಎಸ್ಆರ್ ಶಾಲೆಗಳ ಸ್ಥಾಪನೆ:

ಹೇರೋಹಳ್ಳಿ ಪಾಲಿಕೆ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಶಾಲಿನಿ ಬಿ.ಆರ್, ಗ್ರಾಮೀಣ ಭಾಗದಲ್ಲಿ ಪ್ರೌಢಶಾಲೆಗಳ ಕೊರತೆ ಇದೆ ಎಂದು ಕೇಳಿದಾಗ, “ಸರ್ಕಾರದಿಂದ ಹೊಸ ಯೋಜನೆ ಜಾರಿ ಮಾಡಲಾಗುತ್ತಿದ್ದು, 3 ಎಕರೆ ಪ್ರದೇಶದಲ್ಲಿ 2000 ಕಡೆ ಶಾಲೆ ನಿರ್ಮಾಣ ಮಾಡಲು ಮುಂದಾಗುತ್ತಿದೆ. ಅದನ್ನು ಖಾಸಗಿ ಶಾಲೆಗಳು ದತ್ತು ಪಡೆದುಕೊಳ್ಳಬೇಕು. ನಗರದಲ್ಲಿ ಬಂದು ವಿದ್ಯಾಭಾಸ ಪಡೆಯುವುದನ್ನು ತಪ್ಪಿಸಿ ಗ್ರಾಮೀಣ ಪ್ರದೇಶದಲ್ಲಿಯೇ ಶಾಲೆ ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಸರ್ಕಾರಿ ಶಾಲೆ ಶಿಕ್ಷಕರ ಗುಣಮಟ್ಟ ಹೆಚ್ಚಿಸಲು ಕ್ರಮ:

ಮಾರುತಿ ಮಂದಿರದ ಪ್ರಾಥಮಿಕ ಪಾಠಶಾಲೆ 5ನೇ ತರಗತಿ ವಿದ್ಯಾರ್ಥಿ ಹರ್ಷ, ದೊಡ್ಡ ದೊಡ್ಡ ಪ್ರೈವೇಟ್ ಸ್ಕೂಲ್‌ಗಳಂತೆ ನಮ್ಮ ಬಿಬಿಎಂಪಿ ಶಾಲೆಗಳಲ್ಲಿ ಕ್ವಾಲಿಟಿ ಎಜುಕೇಷನ್ ನೀಡಲು ಯೋಜನೆ ಇದಿಯಾ ಎಂದು ಕೇಳಿದಾಗ, “ರಾಜ್ಯದಲ್ಲಿ ಸರ್ಕಾರಿ, ಪಾಲಿಕೆ ಸೇರಿ ಸುಮಾರು 46,000 ಶಾಲೆಗಳಿದ್ದು, ಎಲ್ಲರಿಗೂ ಗುಣಮಟ್ಟ ಶಿಕ್ಷಣ ನೀಡುವುದು ಸರ್ಕಾರದ ಚಿಂತನೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಕ್ವಾಲಿಟಿ ಎಜುಕೇಷನ್ ನೀಡುತ್ತಿದ್ದಾರೆ. ಯಾರ ಪ್ರಭಾವಕ್ಕೂ ಒಳಗಾಗದೆ ಮೆರಿಟ್ ಮೇಲೆ ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತಿದೆ. ಶಿಕ್ಷಕರಿಗೆ ಹೊಸ ಸ್ಕೀಮ್ ತರಲಾಗುತ್ತಿದ್ದು, ಸಿಬಿಎಸ್‌ಸಿ, ಐಸಿಎಸ್‌ಸಿ ಶಿಕ್ಷಣ ನೀಡುವ ಹಾಗೆ ಸರ್ಕಾರಿ ಶಾಲೆಗಳನ್ನು ಹೊಸ ವ್ಯವಸ್ಥೆ ಜಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಈ ಬಾರಿ ಎಸ್.ಎಸ್.ಎಲ್.ಸಿ.ಯಲ್ಲಿ ಬಾಗಲಕೋಟೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೊದಲ ರ‍್ಯಾಂಕ್ ಬಂದಿದ್ದು, ಅದರಿಂದಲೇ ನಾವು ಯಾವ ರೀತಿಯ ಶಿಕ್ಷಣ ಸಿಗಲಿದೆ ಎಂಬುದನ್ನು ಗಮನಿಸಬಹುದಾಗಿದೆ. ಶ್ರಮ ಎಲ್ಲಿದಿಯೋ ಅಲ್ಲಿ ಫಲವಿರುತ್ತದೆ” ಎಂದು ತಿಳಿಸಿದರು.

ಮಾಲಿನ್ಯ ತಡೆಯಲು ಅಗತ್ಯ ಕ್ರಮ:

ವಿಜಯನಗರದ ಪಾಲಿಕೆ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿ ಅಜಿತ್ ಎಂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ವರ್ಷ ತುಂಬಾ ಮಾಲಿನ್ಯ ಉಂಟಾಗುತ್ತಿದೆ, ಬೆಂಗಳೂರು ನಗರ ಕೂಡ ಅನಿಯಮಿತ ಮಳೆ, ಬರ, ನೀರಿನ ಕೊರತೆಯನ್ನು ಎದುರಿಸುತ್ತಿದೆ. ನಮ್ಮ ನಗರವನ್ನು ಉಳಿಸಲು ಏನು ಕ್ರಮ ಕೈಗೊಳ್ಳುತ್ತಿರಾ? ಎಂದು ಕೇಳಿದಾಗ, “ದೆಹಲಿ, ಹರಿಯಾಣ, ಪಂಜಾಬ್, ರಾಜಸ್ಥಾನ ಕಡೆ ಹೆಚ್ಚು ಗೋಧಿ ಬೆಳೆಯುತ್ತಾರೆ, ಆ ಹುಲ್ಲನ್ನು ಉಪಯೋಗಿಸಲು ಸಾಧ್ಯವಾಗದ ಕಾರಣ ಸುಡುತ್ತಿದ್ದಾರೆ. ಆದ್ದರಿಂದ ವಾಯು ಮಾಲಿನ್ಯ ಹೆಚ್ಚುತ್ತಿದೆ. ನಮ್ಮಲ್ಲಿ ಆ ರೀತಿಯ ಸಮಸ್ಯೆ ಇಲ್ಲ, ವಾಹನಗಳ ಮಾಲಿನ್ಯ ಅಷ್ಟೇ ಇದ್ದು, ಕಾರ್ಖಾನೆಗಳನ್ನು ಕೂಡಾ ಹೊರ ಭಾಗದಲ್ಲಿ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುತ್ತಿದೆ. ನಗರದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ, ನಮ್ಮ ನಾಗರೀಕರೀಕರು ಸಹ ಪರಿಸರ ಸ್ನೇಹಿ ವಾಹನಗಳಿಗೆ ಬದಲಾಗಬೇಕು. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು” ಎಂದರು.

ರಾಜ್ಯದಾದ್ಯಂತ ಒಂದೇ ಗುಣಮಟ್ಟದ ಶಿಕ್ಷಣ:

ಮತ್ತಿಕೆರೆಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮಹೇಶ್ವರಿ, ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪೋಷಕರು ಬೇರೆ ಊರುಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದೆಬರುವುದಿಲ್ಲ ಎಂದು ಕೇಳಿದಾಗ, “ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕಲ್ಯಾಣ ಕರ್ನಾಟಕ ಆಗಲಿ, ಇಡೀ ರಾಜ್ಯ ಒಂದೇ, ಎಲ್ಲಾ ಕಡೆ ಒಂದೇ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನೀವು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಧೈರ್ಯ ತುಂಬಿದರು.

ಭೈರಸಂಧ್ರ

ದ ಪ್ರೌಢಶಾಲೆಯ 9ನೇ ತರಗತಿ ಕೌಸಲ್ಯ, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಮಾಲಿನ್ಯವೂ ಹೆಚ್ಚುತ್ತಿದೆ ಎಂದು ಕೇಳಿದಾಗ, “ಬೆಂಗಳೂರು ನಗರವನ್ನು ಕೆಂಪೇಗೌಡರು ಕಟ್ಟಿದ್ದಾರೆ. ದೊಡ್ಡ ಗಾತ್ರದಲ್ಲಿ ಇಡೀ ದೇಶದಲ್ಲಿ ಯಾವ ನಗರವೂ ಬೆಳೆಯುತ್ತಿಲ್ಲ. ಮುಂಬೈ, ಚೆನ್ನೈ, ಕಲ್ಕತ್ತಾಗೆ ಸಮುದ್ರ ಹತ್ತಿರವಾಗಿದೆ. ಸಮುದ್ರದಿಂದ ನಗರಗಳು ಬೆಳೆದು ಅಲ್ಲಿ ವಹಿವಾಟು ವ್ಯವಹಾರ ಹೆಚ್ಚಾಗಿರುತ್ತದೆ. ಆದರೆ, ಇಲ್ಲಿ ಆ ರೀತಿಯ ವಹಿವಾಟಿಲ್ಲ. ನಮ್ಮಲ್ಲಿರುವ ಹವಾಗುಣದಿಂದ, ಇಲ್ಲಿ ಐಟಿ ಹಬ್, ಟೆಕ್ನಿಕಲ್ ಹಬ್, ಮೆಡಿಕಲ್ ಹಬ್ ಆಗಿ ಬೆಳೆದಿದೆ. 20 ವರ್ಷದಿಂದ ನಗರಾಭಿವೃದ್ಧಿ ಸಚಿವನಾಗಿದ್ದಾಗ 70 ಲಕ್ಷ ಜನಸಂಖ್ಯೆಯಿತ್ತು. ಇದೀಗ ದ್ವಿಗುಣವಾಗಿ 1.40 ಕೋಟಿ ಜನಸಂಖ್ಯೆಯಾಗಿದೆ. ಅದೇ ರಸ್ತೆಯಿದ್ದು, ವಾಹನಗಳ ಸಂಖ್ಯೆ ಮಾತ್ರ ಹೆಚ್ಚಾಗಿ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಸರ್ಕಾರದಿಂದ ಎಷ್ಟೇ ಬಸ್, ಮೆಟ್ರೋ ಹಾಕಿದರು ಕೂಡಾ ಸ್ವಂತ ವವಾಹನಗಳನ್ನೇ ಬಳಸುತ್ತಾರೆ. ಆದ್ದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ರಿಂಗ್ ರಸ್ತೆ, ಮೆಟ್ರೋ 3ನೇ ಫೇಸ್ ಮಾಡಲಾಗುತ್ತಿದ್ದು, ಅಂತರಾಷ್ಟ್ರೀಯ ಮಟ್ಟದ ಮೆಟ್ರೋ ನಿರ್ಮಾಣ ಮಾಡಲಾಗಿದೆ. ನಗರದಲ್ಲಿ ಸಬ್ ಅರ್ಬನ್ ಮಾಡಲಾಗುತ್ತಿದೆ. ಎಷ್ಟೇ ಮೇಲ್ಸೇತುವೆ ಮಾಡುತ್ತಿದ್ದರೂ, ಸಂಚಾರ ದಟ್ಟಣೆ ನಿಯಂತ್ರಣವಾಗುತ್ತಿಲ್ಲ. ಇದೀಗ ಟನಲ್ ರಸ್ತೆ ಕೂಡಾ ಪ್ರಾರಂಭಿಸಲಾಗುತ್ತಿದೆ. ನಗರದಲ್ಲಿ ಬೇರೆ ನಗರಗಳಿಗೆ ಹೋಲಿಸಿದರೆ ಮಾಲಿನ್ಯ ನಿಯಂತ್ರಣದಲ್ಲಿದೆ” ಎಂದು ತಿಳಿಸಿದರು.

ಲಗ್ಗೆರೆಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಿಖಿತ, ನಿಮ್ಮ ಮಕ್ಕಳು ಚಿಕ್ಕವರಾಗಿದ್ದಾಗ ನೀವು ಅವರೊಂದಿಗೆ ಸಲುಗೆಯಿಂದ ಇದ್ದಿರಾ, ಕಟ್ಟುನಿಟ್ಟಾಗಿ ಇದ್ದಿರಾ, ಯಾವ ಸಲಹೆ ನೀಡುತ್ತಿದ್ದಿರಿ ಎಂದು ಕೇಳಿದಾಗ, “ನಾನು ಸಣ್ಣ ವಯಸ್ಸಿನಿಂದಲೇ ರಾಜಕೀಯದಲ್ಲಿ ತೊಡಗಿಕೊಂಡು ಬಂದಿದ್ದೇನೆ. ಆದ್ದರಿಂದ ನನ್ನ ಮಕ್ಕಳಿಗೆ ಸಮಯ ಕೊಡಲು ಆಗಿಲ್ಲ, ಆದರೂ ಅವರನ್ನು ತುಂಬಾ ಪ್ರೀತಿ ಹಾಗು ಕಾಳಜಿ ಮಾಡುತ್ತೇನೆ. ನನ್ನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇನೆ. ಆದರೆ, ರಾಜಕೀಯದಲ್ಲಿರುವ ಕಾರಣ ಹೆಚ್ಚು ಸಮಯ ನೀಡಲು ಸಾಧ್ಯವಾಗಿಲ್ಲ. ಮದುವೆಯಾಗುವ ಮುಂಚೆಯೇ ಮಂತ್ರಿಯಾಗಿದ್ದೆ. ಶಿಕ್ಷಣದ ಬಗ್ಗೆ ನನಗೆ ಹೆಚ್ಚು ಕಾಳಜಿಯಿದ್ದು, ನಗರದ ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಶಿಕ್ಷಣ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಿಗಬೇಕೆಂಬ ನಿಟ್ಟಿನಲ್ಲಿ ಸಿಎಸ್‌ಆರ್ ಅಡಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ” ಎಂದು ತಿಳಿಸಿದರು.

ಜೋಗುಪಾಳ್ಯದ ಬಾಲಕರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್, ಪಾಲಿಕೆ ಶಾಲೆಯ ಗುಣಮಟ್ಟ ಶಿಕ್ಷಣ ಹಾಗೂ ವ್ಯವಸ್ಥೆ ಬಗ್ಗೆ ಬೇರೆಯವರಿಗೂ ಅರಿವು ಮೂಡಿಸಿ ಎಂದು , “ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ, ಉಚಿತ ಸೌಲಭ್ಯ ಸಿಗಲಿದೆ ಎಂಬುದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗವುದು” ಎಂದು ಡಿಸಿಎಂ ತಿಳಿಸಿದರು.

ಇದೇ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, “ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ, ಎಲ್ಲಾ ಶಿಕ್ಷಕರು ಮೆರಿಟ್ ಮೇಲೆ ಬಂದಿರುತ್ತಾರೆ. ಸಾಧನೆ ಮಾಡುವವರೆಲ್ಲಾ ಸರ್ಕಾರಿ ಶಾಲೆಯ ಮಕ್ಕಳೇ ಆಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ” ಎಂದು ಮಾಹಿತಿ ನೀಡಿದರು.

ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿರ್ಭಿತಾ, ಖಾಸಗಿ ಶಾಲೆಗಳಲ್ಲಿ ವ್ಯಾನ್, ಬಸ್ ವ್ಯವಸ್ಥೆ ಇರುತ್ತದೆ, ಪಾಲಿಕೆ ಶಾಲೆಗಳಿಗೆ ವ್ಯಸಸ್ಥೆ ಕಲ್ಪಿಸಬಹುದೇ ಎಂದು ಕೇಳಿದಾಗ, “ಶಾಲೆಗಳಿಗೆ ಹತ್ತಿರವಿರುವ ಮಕ್ಕಳೇ ಬರುವುದರಿಂದ ವಾಹನಗಳ ವ್ಯವಸ್ಥೆ ಮಾಡಿರುವುದಿಲ್ಲ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಜೊತೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

ಇದೇ ಪ್ರಶ್ನೆಗೆ ಉತ್ತರಿಸಿದ ಪಾಲಿಕೆ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು, “ಶಾಲೆಗಳಿಗೆ ದಾಖಲಾತಿ ಆಗುವ ಸಮಯದಲ್ಲೇ ಹತ್ತಿರದ ಶಾಲೆಗಳಿಗೆ ಸೇರಲು ಅರಿವು ಮೂಡಿಸಲಾಗುತ್ತಿದೆ. ಕೆಲವು ಮಕ್ಕಳು ದೂರದಿಂದ ಬರಲು ಇಚ್ಛಿಸುತ್ತಿದ್ದಾರೆ. ಹೊರ ವಲಯಗಳಲ್ಲಿ ಪಾಲಿಕೆಯ ಹೆಚ್ಚು ಶಾಲೆಗಳಿಲ್ಲ, ಅಲ್ಲಿಯೂ ಹೊಸದಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಅದಾದ ಬಳಿಕ ಈ ಸಮಸ್ಯೆ ಕಡಿಮೆಯಾಗಲಿದೆ. ದಾಖಲಾತಿ ಆಗುವ ವೇಳೆ ಹತ್ತಿರದ ಶಾಲೆಗಳಿಗೆ ದಾಖಲಾತಿ ಮಾಡಲು ಪೋಷಕರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

ಕಸ್ತೂರ ಬಾ ನಗರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಕ್ರೀಡಾಸಕ್ತಿ ಇರುವ ವಿದ್ಯಾರ್ಥಿಗಳಿಗೆ ತರಬೇತಿ ಕೊರತೆ ಇದ್ದು, ಸರ್ಕಾರದಿಂದ ಇದಕ್ಕೆ ಪರಿಹಾರವಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, “ಶಿಕ್ಷಣ ಇಲಾಖೆಯಿಂದ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ. ಬೇರೆಯವರ ಸಹಯೋಗದಲ್ಲಿ ಸಣ್ಣ-ಸಣ್ಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಸಂಬಂಧ ಕ್ರೀಡಾ ಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋಬಳಿ ಮಟ್ಟದಲ್ಲಿ ಸುಮಾರು 300 ಕರ್ನಾಟಕ ಪಬ್ಲಿಕ್ ಶಾಲೆ ಮಾಡಲು ಮುಂದಾಗಿದ್ದೇವೆ. ಕ್ರೀಡೆ ಕುರಿತು ಮಕ್ಕಳಿಗೆ ನುರಿತ ತರಬೇತಿ ನೀಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

ಶ್ರೀರಾಂಪುರದ ಬಾಲಕಿಯರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ರಾಜೇಶ್ವರಿ, ಪೋಷಕರು ಎಸ್ಎಸ್ಎಲ್ ಸಿ ಮಕ್ಕಳಿಗೆ ಕ್ರೀಡೆಗೆ ಆದ್ಯತೆ ನೀಡದೇ ಬೋರ್ಡ್ ಪರೀಕ್ಷೆಗೆ ಹೊಚ್ಚು ಗಮನಹರಿಸುವಂತೆ ಒತ್ತಡ ಹಾಕುತ್ತಾರೆ ಎಂದು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವರು ಉತ್ತರಿಸಿ, “ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳ ಭವಿಷ್ಯ ಬದಲಾಯಿಸುವ ಪ್ರಮುಖ ಘಟ್ಟವಾಗಿರುವುದರಿಂದ, ನೀವು ಹೆಚ್ಚು ಜವಾಬ್ದಾರಿಯಿಂದ ಇರಬೇಕಾಗುತ್ತದೆ. ನೀವು ಆಯ್ಕೆ ಮಾಡುವ ವಿಷಯ ಸರಿಯಾಗಿರಬೇಕಾಗಿರುತ್ತದೆ. ಆದ ಕಾರಣ ಶಿಕ್ಷಕರು, ಪೋಷಕರು ಕೂಡಾ ಇದಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಆಟ ಆಡುವ ಜೊತೆಗೆ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯಬಾರದೆಂದು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯ ಆಯುಕ್ತರಾದl ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪಾಲಿಕೆ ಹಿರಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIG NEWS: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧದ ಅಕ್ರಮದ ತನಿಖೆಗೆ ‘ಲೋಕಾಯುಕ್ತ SIT ತಂಡ’ ರಚನೆ

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

11/05/2025 10:06 AM1 Min Read

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ `ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ.!

11/05/2025 9:50 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

11/05/2025 9:36 AM1 Min Read
Recent News

NSA ದೋವಲ್ ಜೊತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವ ವಾಂಗ್, ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಕರೆ

11/05/2025 10:27 AM

ಅಮೇರಿಕಾ ಮತ್ತು ಚೀನಾ ನಡುವೆ ಮೊದಲ ದಿನದ ಆರ್ಥಿಕ ಮಾತುಕತೆ ಅಂತ್ಯ | US -China

11/05/2025 10:24 AM

ಭಾರತ-ಪಾಕಿಸ್ತಾನ ಕದನ ವಿರಾಮ: ಕಾಶ್ಮೀರ ಪರಿಹಾರಕ್ಕೆ ಎರಡೂ ರಾಷ್ಟ್ರಗಳೊಂದಿಗೆ ಕೆಲಸ ಮಾಡುತ್ತೇವೆ: ಡೊನಾಲ್ಡ್ ಟ್ರಂಪ್

11/05/2025 10:20 AM

BREAKING : ‘ಜಮ್ಮು-ಕಾಶ್ಮೀರದ ಸಮಸ್ಯೆ’ ಬಗೆಹರಿಸಲು ಸಿದ್ಧ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೊಡ್ಡ ಘೋಷಣೆ.!

11/05/2025 10:09 AM
State News
KARNATAKA

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

By kannadanewsnow5711/05/2025 10:06 AM KARNATAKA 1 Min Read

ಗದಗ : ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.…

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ `ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ.!

11/05/2025 9:50 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

11/05/2025 9:36 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

11/05/2025 9:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.