ಮಂಗಳೂರು : ದಕ್ಷಿಣ ಕನ್ನಡದಲ್ಲಿ ಇತ್ತೀಚಿಗೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತ್ತು ರಹಿಮಾನ್ ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಮಧ್ಯಪ್ರವೇಶಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆ ಆರಂಭಿಸಿದೆ.
ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿದ್ದು, ಪೊಲೀಸರು ಕೆಲವು ಕ್ರಮ ಕೈಗೊಂಡಿದ್ದಾರೆ? ಸಣ್ಣಪುಟ್ಟ ಲೋಪ ಆಗಿರಬಹುದು. ಪೊಲೀಸರಿಗೆ ಕೆಲಸ ಮಾಡಲು ಬಿಡಬೇಕು ಅವರಿಗೆ ಯಾವುದೇ ದುರುದ್ದೇಶ ಇಲ್ಲ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರು ಯಾರನ್ನು ಸಹ ಟಾರ್ಗೆಟ್ ಮಾಡಿಲ್ಲ. ಎಲ್ಲಾದರೂ ಲೋಪಗಳು ಆಗಿದ್ದರೆ ಸರಿಪಡಿಸಿಕೊಳ್ಳುವಂತೆ ಅವರಿಗೆ ತಿಳಿಸಿದ್ದೇನೆ. ಯಾವುದೇ ಕ್ರಮ ಕಾನೂನಿನ ಪ್ರಕಾರ ಆಗಬೇಕೆ ಹೊರತು ಕಾನೂನಿನ ವಿರುದ್ಧವಾಗಿ ಆಗಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.