Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಂಗಾರದ ಬೆಲೆಯಲ್ಲಿ ಭಾರಿ ಏರಿಕೆ ಮುನ್ಸೂಚನೆ: ವರ್ಷದ ಅಂತ್ಯಕ್ಕೆ ಶೇ. 40 ರಷ್ಟು ಜಿಗಿದು 6,000 ಡಾಲರ್‌ ತಲುಪಲಿದೆಯೇ ಚಿನ್ನ?

BIG NEWS : ಆಹಾರ ಉದ್ಯಮಗಳಲ್ಲಿ ತುಕ್ಕು ಹಿಡಿದ ಕತ್ತರಿ, ಚಾಕುಗಳ ಬಳಕೆಗೆ ನಿಷೇಧ : `FSSAI’ ಖಡಕ್ ಆದೇಶ

​ಮೊಬೈಲ್ ವ್ಯಸನ ಮತ್ತು ಸೈಬರ್ ಅಪರಾಧಕ್ಕೆ ಮುಕ್ತಿ: ಇಟ್ಟಿಗೆ-ಕಲ್ಲುಗಳಿಂದ 55ಕ್ಕೂ ಹೆಚ್ಚು ಸ್ಮಾರ್ಟ್‌ಫೋನ್ ಪುಡಿಪುಡಿ ಮಾಡಿದ ಗ್ರಾಮಸ್ಥರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಯ ‘ಸುಗ್ರೀವಾಜ್ಞೆ’ಯಲ್ಲಿ ಏನಿದೆ.? ಇಲ್ಲಿದೆ ಪ್ರಮುಖ ಹೈಲೈಟ್ಸ್
KARNATAKA

‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಯ ‘ಸುಗ್ರೀವಾಜ್ಞೆ’ಯಲ್ಲಿ ಏನಿದೆ.? ಇಲ್ಲಿದೆ ಪ್ರಮುಖ ಹೈಲೈಟ್ಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಸುಗ್ರೀವಾಜ್ಞೆಯಲ್ಲಿ ಏನೆಲ್ಲಾ ಮುಖ್ಯಾಂಶಗಳಿದ್ದಾವೆ ಅಂತ ಮುಂದೆ ಓದಿ.

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:-

1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.

2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.

3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.

4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.

7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.

11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.

12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.

13. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

14. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

BREAKING: ಪ್ರಯಾಣಿಕರ ಒತ್ತಡಕ್ಕೆ ಮಣಿದ BMRCL: ‘ನಮ್ಮ ಮೆಟ್ರೋ ದರ’ ಇಳಿಕೆಗೆ ನಿರ್ಧಾರ | Namma Metro

BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ದೇಶದಲ್ಲಿ ಇನ್ನೂ 3 ಕೋಟಿ `ಪಡಿತರ ಚೀಟಿ’ ವಿತರಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

2 Mins Read

BIG NEWS : ರಾಜ್ಯದಲ್ಲಿ `ಮತದಾನದ ಹಕ್ಕು’ ಇಲ್ಲದಿದ್ದರೆ ಗ್ಯಾರಂಟಿ ಇಲ್ಲ : ಸಿಎಂ ಡಿ.ಕೆ.ಶಿವಕುಮಾರ್

2 Mins Read
Recent News

​ಬಂಗಾರದ ಬೆಲೆಯಲ್ಲಿ ಭಾರಿ ಏರಿಕೆ ಮುನ್ಸೂಚನೆ: ವರ್ಷದ ಅಂತ್ಯಕ್ಕೆ ಶೇ. 40 ರಷ್ಟು ಜಿಗಿದು 6,000 ಡಾಲರ್‌ ತಲುಪಲಿದೆಯೇ ಚಿನ್ನ?

BIG NEWS : ಆಹಾರ ಉದ್ಯಮಗಳಲ್ಲಿ ತುಕ್ಕು ಹಿಡಿದ ಕತ್ತರಿ, ಚಾಕುಗಳ ಬಳಕೆಗೆ ನಿಷೇಧ : `FSSAI’ ಖಡಕ್ ಆದೇಶ

​ಮೊಬೈಲ್ ವ್ಯಸನ ಮತ್ತು ಸೈಬರ್ ಅಪರಾಧಕ್ಕೆ ಮುಕ್ತಿ: ಇಟ್ಟಿಗೆ-ಕಲ್ಲುಗಳಿಂದ 55ಕ್ಕೂ ಹೆಚ್ಚು ಸ್ಮಾರ್ಟ್‌ಫೋನ್ ಪುಡಿಪುಡಿ ಮಾಡಿದ ಗ್ರಾಮಸ್ಥರು!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಗುರುವಾರ (ಜೂನ್ 18) ಭಾರಿ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ…

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ದೇಶದಲ್ಲಿ ಇನ್ನೂ 3 ಕೋಟಿ `ಪಡಿತರ ಚೀಟಿ’ ವಿತರಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

BIG NEWS : ರಾಜ್ಯದಲ್ಲಿ `ಮತದಾನದ ಹಕ್ಕು’ ಇಲ್ಲದಿದ್ದರೆ ಗ್ಯಾರಂಟಿ ಇಲ್ಲ : ಸಿಎಂ ಡಿ.ಕೆ.ಶಿವಕುಮಾರ್

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.