Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0922/06/2024 6:41 PM

ಬೆಂಗಳೂರು: “ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೆಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:

“ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದರು.

ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ” ಎಂದು ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ” ಎಂದರು.

ಗ್ಯಾರಂಟಿಯಿಂದ ಬೆಲೆ ಏರಿಕೆ ಮಾಡಿಲ್ಲ:

ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಕೇಳಿದಾಗ, “ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ. ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ” ಎಂದರು.

ಸೂರಜ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಕೇಳಿದಾಗ, “ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ” ಎಂದರು.

ಮಾಜಿ ಮೇಯರ್ ಗಳ ಸಮಿತಿ ರಚನೆ:

ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.

ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ.

ಬಿಬಿಎಂಪಿ ಚುನಾವಣೆ ಮಾಡುತ್ತೀರಾ ಎದು ಕೇಳಿದಾಗ, “ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದರು.

ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ:

ಅನಾರೋಗ್ಯದಿಂದ ವಿಧಿವಶರಾದ ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಚಿಕ್ಕ ವಯಸ್ಸಿನಿಂದ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಾ ಸುದೀರ್ಘ 60 ವರ್ಷಗಳ ಕಾಲ ಸಾಹಿತ್ಯ ಸೇವೆ ಸಲ್ಲಿಸಿರುವ ಕಮಲಾ ಹಂಪನಾ ಅವರ ಅಗಲಿಕೆ ಬಹಳ ನೋವು ತಂದಿದೆ. ಈ ಕುಟುಂಬದ ಜತೆ ನನಗೆ 50 ವರ್ಷಗಳ ಒಡನಾಟವಿದೆ. ಇವರ ಪುತ್ರ ಹರ್ಷ ಹಾಗೂ ನಾನು ಬಾಲ್ಯದಲ್ಲಿ ಒಟ್ಟಿಗೆ ಓದಿದವರು. ಕಮಲಾ ಹಂಪನಾ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವರ ಸಾಹಿತ್ಯ ಸೇವೆ ದಾಖಲೆಗಳಲ್ಲಿ ಉಳಿದುಕೊಂಡಿವೆ. ಅವರು ಬಹಳ ಧೈರ್ಯದಿಂದ ಮಾತನಾಡುತ್ತಿದ್ದರು. ನಾವು ಈ ಕುಟುಂಬದ ಪರವಾಗಿದ್ದೇವೆ ಎಂದು ಧೈರ್ಯ ತುಂಬಲು ನಾನು ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅವರಿಗೆ ಏನೆಲ್ಲಾ ಗೌರವ ಸಲ್ಲಿಸಬಹುದೋ ಅದನ್ನು ಸಲ್ಲಿಸುತ್ತೇವೆ” ಎಂದರು.

‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ

‘ನಟ ದರ್ಶನ್’ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೆಚ್ಚಿನ ಭತ್ರತೆಗಾಗಿ ‘ಬಿ-ಬ್ಯಾರಕ್’ ವ್ಯವಸ್ಥೆ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM2 Mins Read
Recent News

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM
State News
KARNATAKA

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

By kannadanewsnow0904/06/2025 9:06 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ…

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.