ಬೆಂಗಳೂರು: ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಅಂಥ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಅವರು ಮಾತನಾಡಿ, ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು
ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು
ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು ಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಎಂದು ಪ್ರಶ್ನಿಸಿದ