Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಕ್ಕಳ ಆನ್ ಲೈನ್ ಸುರಕ್ಷತೆಗೆ ಬ್ರಿಟನ್ ಮಾಸ್ಟರ್ ಪ್ಲಾನ್ : 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.!

ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯ : ಸೂರಜ್‌ ಹೆಗ್ಡೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯ : ಸೂರಜ್‌ ಹೆಗ್ಡೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ
KARNATAKA

ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯ : ಸೂರಜ್‌ ಹೆಗ್ಡೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ

By ಸುರೇಶ್‌

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ನುಡಿನಮನ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

ಇದು ಅತ್ಯಂತ ದುಃಖದ ಸಂಗತಿ. ನಮಗೆಲ್ಲಾ ಒಬ್ಬ ಆತ್ಮೀಯ ಸ್ನೇಹಿತ, ದಕ್ಷ ಕಾರ್ಯಕರ್ತ ಹಾಗೂ ಜನಾನುರಾಗಿ ಮುಖಂಡರನ್ನು ಕಳೆದುಕೊಂಡಂತಾಗಿದೆ. ನನ್ನ ಆತ್ಮೀಯ ಸ್ನೇಹಿತ ಸೂರಜ್‌ ಅವರು ಅತ್ಯಂತ ಆದರ್ಶಪ್ರಾಯವಾದ ಜೀವನವನ್ನು ನಡೆಸಿದವರು. ತ್ಯಾಗ, ಪ್ರಾಮಾಣಿಕತೆ ಮತ್ತು ಕರ್ತವ್ಯ ಪ್ರಜ್ಞೆ – ಈ ಮೂರನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಎಂದಿಗೂ ಯಾವುದೇ ಅಧಿಕಾರ ಅಥವಾ ಸ್ಥಾನಮಾನಕ್ಕೆ ಆಸೆ ಪಡದ ಅವರು, ಯಾವಾಗಲೂ ಪಕ್ಷ ಸಂಘಟನೆಯೇ ಮುಖ್ಯ ಎಂದು ನಂಬಿ ನಡೆದವರು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ರಕ್ತ ಅವರ ಮೈಯಲ್ಲಿದ್ದ ಕಾರಣಕ್ಕಾಗಿಯೇ ಏನೋ, ಅವರು ಅರಸರ ಆ ಎಲ್ಲ ಜನಪರ ಆದರ್ಶಗಳನ್ನು ತಮ್ಮ ಉಸಿರಾಗಿಸಿಕೊಂಡಿದ್ದರು. ಇಂದು ಅವರು ನಮ್ಮನ್ನು ಅಗಲಿರುವುದು ತುಂಬಲಾರದ ನಷ್ಟ.

ಕೆಲ ದಿನಗಳ ಹಿಂದೆ ದೇವರಾಜ ಅರಸು ಅವರ ಪುಣ್ಯಸ್ಮರಣೆಯ ದಿನದಂದೇ ಸೂರಜ್ ಅವರು ನನ್ನನ್ನು ಭೇಟಿಯಾಗಿದ್ದರು. ನಾನು ಆಗಾಗ ಒಂದು ಮಾತನ್ನು ಹೇಳುತ್ತೇನೆ, ‘ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ; ಜನನ ಉಚಿತ, ಮರಣ ಖಚಿತ’. ಈ ಹುಟ್ಟು ಮತ್ತು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಸಾಧನೆ ಮಾಡಿ ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಸೂರಜ್‌ ಅವರ ಬದುಕಿನ ಬಹುದೊಡ್ಡ ಸಾಧನೆಯೆಂದರೆ ಅದು ಪಕ್ಷದ ಮೇಲಿದ್ದ ನಿಷ್ಠೆ ಮತ್ತು ಅವರ ನಿಸ್ವಾರ್ಥ ತ್ಯಾಗ.

ನಾನು ಇಂದು ಇಲ್ಲಿಗೆ ಒಬ್ಬ ಮುಖ್ಯಮಂತ್ರಿಯಾಗಿ ಬಂದಿಲ್ಲ; ಸೂರಜ್ ಅವರ ಒಡನಾಡಿಯಾಗಿದ್ದ ಒಬ್ಬ ಸಾಮಾನ್ಯ ಕಾಂಗ್ರೆಸ್‌ ಕಾರ್ಯಕರ್ತನಾಗಿ, ಅವರ ಪ್ರೀತಿಯ ಸ್ನೇಹಿತನಾಗಿ ಬಂದಿದ್ದೇನೆ. ‘ಸೂರಜ್‌’ ಎಂದರೆ ಸೂರ್ಯ. ಸದಾ ಎಲ್ಲರಿಗೂ ಬೆಳಕು ನೀಡುವ ಸೂರ್ಯನಂತೆ ಅವರು ಬದುಕಿದರು. ಕೊನೆಯ ಉಸಿರಿರುವವರೆಗೂ ಮುಖದಲ್ಲಿ ಸದಾ ಮುಗುಳ್ನಗೆಯನ್ನು ಉಳಿಸಿಕೊಂಡೇ ಅವರು ಈ ಲೋಕವನ್ನು ತೊರೆದಿದ್ದಾರೆ.

ಎಲ್ಲರ ಜೊತೆಗೆ ಅಪಾರವಾದ ಸ್ನೇಹ ಮತ್ತು ವಿಶ್ವಾಸವನ್ನು ಸಂಪಾದಿಸಿದ್ದ ಸೂರಜ್‌ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ನುಡಿನಮನ ಸಲ್ಲಿಸಿದೆ.

ಇದು ಅತ್ಯಂತ ದುಃಖದ ಸಂಗತಿ. ನಮಗೆಲ್ಲಾ ಒಬ್ಬ ಆತ್ಮೀಯ ಸ್ನೇಹಿತ, ದಕ್ಷ ಕಾರ್ಯಕರ್ತ ಹಾಗೂ… pic.twitter.com/bG4wofDy6g

— DK Shivakumar (@DKShivakumar) June 15, 2026

Share. Facebook Twitter LinkedIn WhatsApp Email

Related Posts

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

2 Mins Read

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

2 Mins Read

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

1 Min Read
Recent News

BREAKING : ಮಕ್ಕಳ ಆನ್ ಲೈನ್ ಸುರಕ್ಷತೆಗೆ ಬ್ರಿಟನ್ ಮಾಸ್ಟರ್ ಪ್ಲಾನ್ : 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.!

ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯ : ಸೂರಜ್‌ ಹೆಗ್ಡೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

State News
KARNATAKA

ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯ : ಸೂರಜ್‌ ಹೆಗ್ಡೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ

By ಸುರೇಶ್‌ KARNATAKA 2 Mins Read

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ…

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

BREAKING : ಅಯ್ಯಪ್ಪ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ : ಶಬರಿಮಲೆಗೆ ಯಾತ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.