Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಕ್ತದಲ್ಲಿನ ‘ಶುಗರ್ ಲೆವೆಲ್ಸ್’ ನಿಯಂತ್ರಣ ತಪ್ಪಿದ್ರೆ ದೇಹದಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಿವು.!

03/08/2025 8:52 PM

BREAKING: ಉಡುಪಿಯಲ್ಲಿ ‘ಲೈಫ್ ಜಾಕೆಟ್’ ಧರಿಸಿದ್ದರಿಂದ ಬದುಕುಳಿದ 9 ಮೀನುಗಾರರು

03/08/2025 8:51 PM

‘ಸುಂಕ ವಿನಾಯಿತಿ ಪಡೆದ ಅಮೆರಿಕದ ಸರಕುಗಳ ಪಟ್ಟಿಯನ್ನ ಭಾರತ ಪರಿಶೀಲಿಸುತ್ತಿಲ್ಲ’: ಸುಳ್ಳು ವರದಿ ತಳ್ಳಿಹಾಕಿದ ಕೇಂದ್ರ ಸರ್ಕಾರ

03/08/2025 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮಿಂದ ಸಾಧ್ಯವಾಗಿದ್ದು, ಕುಮಾರಸ್ವಾಮಿಯಿಂದ ಸಾಧ್ಯವಾಗಲಿಲ್ಲ ಯಾಕೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
KARNATAKA

ನಮ್ಮಿಂದ ಸಾಧ್ಯವಾಗಿದ್ದು, ಕುಮಾರಸ್ವಾಮಿಯಿಂದ ಸಾಧ್ಯವಾಗಲಿಲ್ಲ ಯಾಕೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

By kannadanewsnow0908/11/2024 4:24 PM

ರಾಮನಗರ: ನಾನು ಇಂಧನ ಸಚಿವನಾಗಿದ್ದಾಗ 10 ಕಡೆಗಳಲ್ಲಿ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಿದ್ದೇನೆ. ಪ್ರತಿ ಹಳ್ಳಿಯಲ್ಲಿ ಪ್ರತಿ ಇಬ್ಬರು ರೈತರಿಗೆ ಹೆಚ್ ವಿಡಿ ಯೋಜನೆಯಡಿ ಟ್ರಾನ್ಸ್ ಫಾರ್ಮರ್ಸ್ ಅಳವಡಿಸಿಕೊಟ್ಟಿದ್ದೇನೆ. ಈ ಕೆಲಸ ಕುಮಾರಸ್ವಾಮಿಯಿಂದ ಯಾಕೆ ಸಾಧ್ಯವಾಗಿಲ್ಲ? ಕುಮಾರಸ್ವಾಮಿ ಕ್ಷೇತ್ರದಲ್ಲಿ ಯಾರಿಗಾದರೂ ಒಬ್ಬರಿಗೆ ನಿವೇಶನ ಹಂಚಿದ್ದಾರಾ? ನಾವು ನಿವೇಶನ ನೀಡಲು ಬಂದಾಗ, ಜಿಲ್ಲಾಧಿಕಾರಿಗೆ ಕರೆ ಮಾಡಿ ನನ್ನ ಅವಧಿಯಲ್ಲಿ ಈ ಕೆಲಸ ಮಾಡಲು ಆಗಿಲ್ಲ, ಈಗ ಯಾಕೆ ಮಾಡುತ್ತಿದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ. ಕುಮಾರಣ್ಣ ನಿನಗೆ ಬಡವರ ಬಗ್ಗೆ ವಿಶ್ವಾಸ ಇರಲಿಲ್ಲ, ಅದಕ್ಕೆ ನೀನು ಮಾಡಲಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗಿದರು.

ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿ ಮಾತನಾಡಿದಂತ ಅವರು, ಮಹಿಳೆಯರದ್ದು ಹೆಂಗರುಳು, ಅವರಿಗೆ ಸಹಾಯ ಮಾಡಿದರೆ ಅವರು ಋಣ ತೀರಿಸುತ್ತಾರೆ. ಹೀಗಾಗಿ ಅವರಿಗೆ ಹೆಚ್ಚು ಕಾರ್ಯಕ್ರಮ ನೀಡಿದ್ದೇವೆ. ರಾಮಲಿಂಗಾ ರೆಡ್ಡಿ ಅವರು ಶಕ್ತಿ ಯೋಜನೆ ನೀಡಿದ್ದು, ನೀವು ಯಾವುದೇ ಪುಣ್ಯಕ್ಷೇತ್ರಕ್ಕೆ ಉಚಿತವಾಗಿ ಹೋಗಬಹುದು. ಈ ಯೋಜನೆಯಿಂದ ನಮ್ಮ ದೇವಾಲಯಗಳ ಹುಂಡಿಯಲ್ಲಿ ಹಣ ಹೆಚ್ಚಾಗುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ ಎಂದರು.

ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ?

ರಾಮನಗರದಲ್ಲಿ ಕುಮಾರಸ್ವಾಮಿ ಅವರೂ ಶಾಸಕರಾಗಿದ್ದರು, ಮುಖ್ಯಮಂತ್ರಿಯೂ ಆದರು. ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೂಡ ಶಾಸಕರಾಗಿದ್ದರು. ಆದರೂ ನಿಖಿಲ್ ರಾಮನಗರದಲ್ಲಿ ಯಾಕೆ ಸೋತರು? ಅವರು ಕೆಲಸ ಮಾಡಿದ್ದರೆ ಜನ ಸೋಲಿಸುತ್ತಿದ್ದರಾ? ಕೆಲಸ ಮಾಡಿ, ಜನರ ಸೇವೆ ಮಾಡಿದ್ದರೆ ಸೋಲುತ್ತಿರಲಿಲ್ಲ. 5 ವರ್ಷಕ್ಕೊಮ್ಮೆ ಬಂದು ಮತ ನೀಡಿ ಎಂದರೆ ಹೇಗೆ? ಮತದಾರರು ಏನು ಕೂಲಿಕಾರ್ಮಿಕರೇ? ಮತದಾನದ ಹಕ್ಕು ಸ್ವಾಭಿಮಾನದ ಪ್ರತೀಕ. ಅದನ್ನು ಯಾರೂ ಮಾರಿಕೊಳ್ಳುವುದಿಲ್ಲ.

ಸರ್ಕಾರ ನಿಮ್ಮ ಜತೆಗಿದೆ:

ಕೊಟ್ಟ ಕುದುರೆ ಏರಲು ಅರಿಯದೆ ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ಅಧಿಕಾರ ಇದ್ದಾಗ ಈ ಕ್ಷೇತ್ರದ ಹಳ್ಳಿಗಳಿಗೆ ಹೋಗಿ ಬಡವರಿಗೆ ಸಹಾಯ ಮಾಡದಿದ್ದರೆ, ಜನರಿಗೆ ನೆರವಾಗದಿದ್ದರೆ, ಶಾಸಕನಾಗಿ ಒಂದೇ ಒಂದು ಬಗರ್ ಹುಕ್ಕುಂ ಸಭೆ ಮಾಡಲಿಲ್ಲ. ಈ ಕ್ಷೇತ್ರದಲ್ಲಿ ಒಮ್ಮೆಯೂ ರಾಷ್ಟ್ರಧ್ವಜ, ಕನ್ನಡ ಧ್ವಜ ಹಾರಿಸಲಿಲ್ಲ. ಈ ದೇಶಕ್ಕೆ ಗೌರವ ಕೊಡದಿದ್ದರೆ, ಜನರಿಗೆ ಗೌರವ ಕೊಡುತ್ತಾರಾ? ಕುಮಾರಸ್ವಾಮಿಗೆ ಅವರಾಯ್ತು, ಅವರ ಕುಟುಂಬವಾಯ್ತು.

ಇಡೀ ಸರ್ಕಾರ ಯೋಗೇಶ್ವರ್ ಹಾಗೂ ನಿಮ್ಮ ಜತೆಗಿದೆ. ಈ ಅವಕಾಶವನ್ನು ನೀವು ಬಿಡುತ್ತೀರಾ? ಜೆಡಿಎಸ್ ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ಏನಾದರೂ ಮಾಡಿಕೊಳ್ಳಲಿ. ನಿಮ್ಮ ಕಷ್ಟ ಸುಖಕ್ಕೆ ಆಗುವವರು ನಾವು, ನಿಮ್ಮ ಋಣ ತೀರಿಸುವವರು ನಾವು. ನಾವು ನಿಮ್ಮನ್ನು ಹಾಗೂ ಈ ಜಿಲ್ಲೆ ಬಿಟ್ಟು ಹೋಗುವುದಿಲ್ಲ. ನಿಮ್ಮ ಸೇವೆ ಮಾಡುತ್ತೇವೆ. ಹೀಗಾಗಿ ನೀವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ, ಆಶೀರ್ವಾದ ಮಾಡಿ. ನಿಮ್ಮ ಜತೆಗೆ ನಾವು ನಿಂತು ನಿಮ್ಮ ಸೇವೆ ಮಾಡುತ್ತೇವೆ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈಗೆ ಅಧಿಕಾರ ಸಿಕ್ಕ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಿಮ್ಮ ಕೈಗಳು ಬಲಿಷ್ಠವಾದವು ಎಂದರು.

ಶಿವಮೊಗ್ಗ: ನ.12, 13, 14 ಮತ್ತು 15ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BIG NEWS: ‘ಗ್ಯಾರಂಟಿ’ಯಿಂದ ಕರ್ನಾಟಕದಲ್ಲಿ ಲೂಟಿಯಾಗಿದೆ, ಮಹಾರಾಷ್ಟ್ರದಲ್ಲಿ ಘೋಷಿಸಬೇಡಿ: ಕೇಂದ್ರ ಸಚಿವೆ ಮುಂದೆ ವ್ಯಕ್ತಿ ಆಕ್ರೋಶ, ತಬ್ಬಿಬ್ಬಾದ ‘ನಿರ್ಮಲಾ’

Share. Facebook Twitter LinkedIn WhatsApp Email

Related Posts

BREAKING: ಉಡುಪಿಯಲ್ಲಿ ‘ಲೈಫ್ ಜಾಕೆಟ್’ ಧರಿಸಿದ್ದರಿಂದ ಬದುಕುಳಿದ 9 ಮೀನುಗಾರರು

03/08/2025 8:51 PM1 Min Read

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM2 Mins Read

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM2 Mins Read
Recent News

ರಕ್ತದಲ್ಲಿನ ‘ಶುಗರ್ ಲೆವೆಲ್ಸ್’ ನಿಯಂತ್ರಣ ತಪ್ಪಿದ್ರೆ ದೇಹದಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಿವು.!

03/08/2025 8:52 PM

BREAKING: ಉಡುಪಿಯಲ್ಲಿ ‘ಲೈಫ್ ಜಾಕೆಟ್’ ಧರಿಸಿದ್ದರಿಂದ ಬದುಕುಳಿದ 9 ಮೀನುಗಾರರು

03/08/2025 8:51 PM

‘ಸುಂಕ ವಿನಾಯಿತಿ ಪಡೆದ ಅಮೆರಿಕದ ಸರಕುಗಳ ಪಟ್ಟಿಯನ್ನ ಭಾರತ ಪರಿಶೀಲಿಸುತ್ತಿಲ್ಲ’: ಸುಳ್ಳು ವರದಿ ತಳ್ಳಿಹಾಕಿದ ಕೇಂದ್ರ ಸರ್ಕಾರ

03/08/2025 8:15 PM

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM
State News
KARNATAKA

BREAKING: ಉಡುಪಿಯಲ್ಲಿ ‘ಲೈಫ್ ಜಾಕೆಟ್’ ಧರಿಸಿದ್ದರಿಂದ ಬದುಕುಳಿದ 9 ಮೀನುಗಾರರು

By kannadanewsnow0903/08/2025 8:51 PM KARNATAKA 1 Min Read

ಉಡುಪಿ: ಜಿಲ್ಲೆಯಲ್ಲಿ ದೋಣಿ ಮುಳುಗಿದ್ದರಿಂದ ಲೈಫ್ ಜಾಕೆಟ್ ಧರಿಸಿ, ಸಮುದ್ರಕ್ಕೆ ಹಾರಿದ್ದರಿಂದ 9 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ಉಪ್ಪಂದದ…

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

03/08/2025 8:04 PM

ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್

03/08/2025 7:55 PM

‘ಬ್ಯಾಂಕ್ ಖಾತೆದಾರ’ರೇ ಹುಷಾರ್.! ಹೀಗೂ ವಂಚಿಸ್ತಾರೆ ‘ಆನ್ ಲೈನ್ ವಂಚಕ’ರು | Cyber Crime

03/08/2025 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.