Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0924/11/2025 8:44 PM

ಬೆಂಗಳೂರು: ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೇ ಆಗಲಿ ಮಾತನಾಡಿಲ್ಲ. ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಾ ಇದ್ದೀರಿ. ನೀವುಗಳೇ ಅನವಶ್ಯಕ ಗೊಂದಲ ಮೂಡಿಸುತ್ತಿದ್ದೀರಿ. ನನಗೂ ಹಾಗೂ ಯಾರಿಗೂ ಗೊಂದಲಗಳಿಲ್ಲ. ಏನಾದರೂ ಇದ್ದರೆ ನಾನು ಹಾಗೂ ಪಕ್ಷದ ಹೈಕಮಾಂಡ್ ಬಗೆಹರಿಸಿಕೊಳ್ಳುತ್ತೇವೆ. ಏನೇ ತೀರ್ಮಾನ ಆಗಿದ್ದರು ಅದು ಒಂದು ಕೊಠಡಿಯ ಆಂತರಿಕ ಚೌಕಟ್ಟಿನ ಒಳಗೆ ಆಗಿರುತ್ತದೆ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಳಿದಾಗ, “ಮೊನ್ನೆಯೇ ದೆಹಲಿಯಲ್ಲಿ ಭೇಟಿ ಮಾಡಿದ್ದೇನೆ. ಪದೇ, ಪದೇ ಭೇಟಿ ಮಾಡುವುದು ಸರಿಯೇ? ಸಂದರ್ಭ ಬಂದರೆ ಹೋಗಿ ಭೇಟಿ ಮಾಡುತ್ತೇನೆ. ಅವರು ದೆಹಲಿಗೆ ಹೋಗಿ ಬಂದ ನಂತರ ಭೇಟಿಗೆ ಅವಕಾಶ ಕೇಳುತ್ತೇನೆ. ಸುಮ್ಮನೆ ಅವರಿಗೆ ತೊಂದರೆ ಕೊಡುವುದು ಬೇಡ” ಎಂದರು.

“ನೀವು (ಮಾಧ್ಯಮ) ನನಗೆ ಹಾಗೂ ಅವರಿಗೆ ಓಡಾಡುವುದಕ್ಕೂ ಬಿಡದಂತೆ ಬಾಗಿಲಿನಲ್ಲೇ ನಿಂತಿದ್ದೀರಿ. ಡಿ.ಕೆ.ಶಿವಕುಮಾರ್ ಒಳ ಹೋದರು, ಬಂದರು. ಕಾಫಿ ಕುಡಿದರು, ಉಪಹಾರ ಮಾಡಿದರು, 40-50 ನಿಮಿಷ ಮಾತನಾಡಿದರು ಎಂದು ಎಲ್ಲರ ಉದ್ವೇಗವನ್ನು ಜಾಸ್ತಿ ಮಾಡುತ್ತಾ ಇದ್ದೀರಿ. ಎಲ್ಲರಿಗೂ ಮಾಧ್ಯಮಗಳದ್ದೇ ಹೆಚ್ಚು ತೊಂದರೆಯಾಗಿದೆ. ನಮಗೆಲ್ಲ ಯಾವುದೇ ತೊಂದರೆಗಳಿಲ್ಲ” ಎಂದರು.

ದೆಹಲಿಗೆ ಹೋಗುವವರನ್ನು ಬೇಡ ಎನ್ನಲು ಆಗುತ್ತದೆಯೇ?

ಬಾಲಕೃಷ್ಣ ಸೇರಿದಂತೆ ಕೆಲವರು ದೆಹಲಿಗೆ ಹೋಗಿರುವ ಬಗ್ಗೆ ಕೇಳಿದಾಗ, “ಮಂತ್ರಿಯಾಗ ಬೇಕು ಎನ್ನುವ ಆಸೆ ಇರುತ್ತದೆ. ತಪ್ಪೇನಿದೆ ಅದಕ್ಕೆ ಹೋಗುತ್ತಾರೆ. ದೆಹಲಿಗೆ ಹೋಗುವವರನ್ನು ಬೇಡ ಎನ್ನಲು ಆಗುತ್ತದೆಯೇ? ದೆಹಲಿಯ ಪಕ್ಷದ ಕಚೇರಿ ನಮಗೆಲ್ಲ ದೇವಸ್ಥಾನ ಇದ್ದಂತೆ. ಭವಿಷ್ಯ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಹೋಗುತ್ತಾರೆ” ಎಂದರು.

ಇದರಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗುತ್ತಿದೆ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ಪಕ್ಷ ವಿರೋಧಿ ಹೇಳಿಕೆ ನೀಡಿ. ಗುಂಪುಗಳನ್ನು ಮಾಡಿ, ಡಿನ್ನರ್ ಮೀಟಿಂಗ್ ಗಳ ರೀತಿ ಮಾಡಿ ಪಕ್ಷದ ವಿರುದ್ಧ ಹೋದರೆ ಉಲ್ಲಂಘನೆಯಾಗುತ್ತದೆ.‌ ಈಗ ಏನು ಉಲ್ಲಂಘನೆ ಆಗುತ್ತದೆ? ಯಾರಾದರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆಯೇ? ಸಂಪುಟ ಪುನರ್ ರಚನೆ ಮಾಡಲಾಗುತ್ತದೆ ಎನ್ನುವ ಕಾರಣಕ್ಕೆ ತಮಗೂ ಅವಕಾಶ ಸಿಗಲಿ ಎಂದು ಹೋಗಿದ್ದಾರೆ” ಎಂದರು.

ಏಕಾಏಕಿ ತೀರ್ಮಾನ ಮಾಡಲು ಆಗುತ್ತದೆಯೇ?

ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎನ್ನುವ ಹೇಳಿಕೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ರಬ್ಬರ್ ಸ್ಟಾಂಪ್ ಅಧ್ಯಕ್ಷರು ಎಂದು ಜೆಡಿಎಸ್- ಬಿಜೆಪಿ ವ್ಯಂಗ್ಯದ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಎಂದು ಏಕೆ ಹೇಳಿದ್ದಾರೆ ಎಂದರೆ ಪಕ್ಷದಲ್ಲಿ ಒಂದಷ್ಟು ನಾಯಕರನ್ನು ಒಳಗೊಂಡ ಸಮಿತಿಯಿದೆ. ನಾನು ಕೆಪಿಸಿಸಿ ಅಧ್ಯಕ್ಷನಾದ ತಕ್ಷಣ ಏಕಾಏಕಿ ತೀರ್ಮಾನ ಮಾಡಲು ಆಗುತ್ತದೆಯೇ? ಇತ್ತೀಚಿಗೆ ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸುವಾಗ ಸಿದ್ದರಾಮಯ್ಯ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಅಧ್ಯಕ್ಷರು, ಆಂಕಾಕ್ಷಿಗಳನ್ನು ಕರೆದು ಮಾತನಾಡಿದ್ದೇನೆ. ಇಷ್ಟು ಜನ ಅರ್ಜಿ ಹಾಕಿದ್ದಾರೆ. ಇಂತಹವರ ಅಭಿಪ್ರಾಯ ಈ ರೀತಿಯಿದೆ, ಅವರ ಹಿನ್ನೆಲೆ ಈ ರೀತಿಯಿದೆ ಎಂದು ಕಳಿಸುತ್ತೇನೆ. ಆ ದಾಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಚುನಾವಣಾ ಸಮಿತಿ ಎಂದ ಮೇಲೆ ಒಬ್ಬರೇ ಮಾಡುತ್ತಾರಾ? ಹತ್ತಾರು ಜನ ಸೇರಿ ತೀರ್ಮಾನ ಮಾಡುತ್ತಾರೆ” ಎಂದರು.

ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಅವರ ನಿಧನಕ್ಕೆ ಸಂತಾಪ

“ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಅವರು ತಮ್ಮ ಶೋಲೆ ಚಿತ್ರದ ಮೂಲಕ ಬೆಂಗಳೂರು ದಕ್ಷಿಣ ಜಿಲ್ಲೆಯ ಬೆಟ್ಟ ಗುಡ್ಡಗಳಿಗೆ ಮಹತ್ವ ತಂದು ಕೊಟ್ಟವರು. ಚಿತ್ರರಂಗದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ಕೊಟ್ಟವರು. ಅವರ ಕೆಲಸ ಕಾರ್ಯಗಳನ್ನು ಗಮನಿಸುತ್ತಾ ಬಂದವನು ನಾನು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದವರು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆತ್ಮಕ್ಕೆ ಶಾಂತಿ ಸಿಗಲಿ ಎಂದು ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಆ ದೇವರಲ್ಲಿ ಬೇಡಿಕೊಳ್ಳುತ್ತೇನೆ” ಎಂದರು.

ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM3 Mins Read

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM1 Min Read

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM3 Mins Read
Recent News

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

BAFTA 2026: ಅತ್ಯುತ್ತಮ ಮಕ್ಕಳ ಮತ್ತು ಕುಟುಂಬ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ಬೂಂಗ್’!

23/02/2026 7:23 AM
State News
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

By kannadanewsnow5723/02/2026 7:30 AM KARNATAKA 3 Mins Read

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ”…

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.