ಮಂಡ್ಯ : ಸಿಎಂ ಕುರ್ಚಿ ಖಾಲಿ ಎಲ್ಲಿದೆ? ಖಾಲಿ ಇದ್ದಾಗ ಅದರ ಬಗ್ಗೆ ಮಾತಾಡಲಿ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್ ಹೇಳಿದರು.

ಚಂದ್ರಶೇಖರ್ ಸ್ವಾಮೀಜಿಯ ಅಭಿಪ್ರಾಯ ಅವರ ವೈಯಕ್ತಿಕ. ಈಗ ಸಿದ್ದರಾಮಯ್ಯ ಸಿಎಂ ಖುರ್ಚಿಯಲ್ಲಿ ಕುಳಿತಿದ್ದಾರೆ. ಸಿಎಂ ಖುರ್ಚಿ ಖಾಲಿ ಎಲ್ಲಿದೆ?. ಖಾಲಿ ಇರುವಾಗ ಚರ್ಚೆ ಮಾಡಬೇಕು. ಖಾಲಿ ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ. ಸ್ವಾಮೀಜಿ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.

ಒಕ್ಕಲಿಗರು, ಲಿಂಗಾಯತರು, ದಲಿತರು ಕೇಳ್ತಿದ್ದಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ಹಾಕಿದ ಗೆರೆಯನ್ನ ನಾವ್ಯಾರು ದಾಟುವುದಿಲ್ಲ. ಇದು ನಮ್ಮ ಪಕ್ಷದ ಪಾಲಿಸಿ. ಏನೇ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

Share.
Exit mobile version