ಬ್ರಹ್ಮಾವರ: ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು ವ್ಯಕ್ತಿಯೊಬ್ಬರಿಂದ 20000 ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಬ್ರಹ್ಮಾಣವರದ ಮೆಸ್ಕಾಂ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ ಎಂಬುವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಯಾಗಿದ್ದಾರೆ.
ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಳೆದ ತಿಂಗಳು ಸ್ಥಳ ಪರಿಶೀಲನೆ ನಡೆಸಿದ್ದಂತ ಮೆಸ್ಕಾಂ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ, ಆ ಬಳಿಕ ಮನೆ ಮಾಲೀಕ ದಿನೇಶ್ ಪೂಜಾರಿಗೆ 20,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದಿನೇಶ್ ಪೂಜಾರಿ ದೂರು ನೀಡಿದ್ದರು. ಇಂದು ಲಂಚದ ಹಣವಾದಂತ 20,000 ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ರೆಡ್ ಹ್ಯಾಂಡ್ ಆಗಿ ಮೆಸ್ಕಾಂ ಎಇ ಅಶೋಕ್ ಪೂಜಾರಿ ಹಿಡಿದಿದ್ದಾರೆ. ಆ ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.