Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಪ್ರಕರಣ : ಡಿ.26ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

10/12/2025 1:54 PM

ಧರ್ಮಸ್ಥಳದ `SIT’ ಚಾರ್ಚ್‌ ಶೀಟ್‌ ನಾನು ನೋಡಿಲ್ಲ : CM ಸಿದ್ದರಾಮಯ್ಯ

10/12/2025 1:47 PM

ರಾಜ್ಯದ ಜನತೆಯ ಗಮನಕ್ಕೆ `ಇ-ಸ್ವತ್ತು’ ಸಮಸ್ಯೆ ಪರಿಹಾರಕ್ಕೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

10/12/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟೋಲ್ ದರ ಹೆಚ್ಚಳದ ಬಗ್ಗೆ ಬಿಜೆಪಿಯವರು ಏಕೆ ಪ್ರತಿಭಟನೆ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
KARNATAKA

ಟೋಲ್ ದರ ಹೆಚ್ಚಳದ ಬಗ್ಗೆ ಬಿಜೆಪಿಯವರು ಏಕೆ ಪ್ರತಿಭಟನೆ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

By kannadanewsnow0903/04/2025 5:12 PM

ದೆಹಲಿ : “ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?. ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು.

ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಒಡಕು ಮೂಡಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದ ವಿಚಾರ ನನಗೆ ಬೇಡ. ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ” ಎಂದರು.

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ” ಎಂದು ಹೇಳಿದರು.

ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ‌ಮಾಡಿದ್ದರ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು ಅದಕ್ಕೆ ಬೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ‌ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ” ಎಂದರು.

“ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

GOOD NEWS: ರಾಜ್ಯದ ‘SC ಸಮುದಾಯ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರತಿಷ್ಠಿತ ಶಾಲೆ’ಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

`SSLC, PUC’ ಪಾಸಾದ ಯುವಕ/ಯುವತಿಯರಿಗೆ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಪ್ರಕರಣ : ಡಿ.26ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

10/12/2025 1:54 PM1 Min Read

ಧರ್ಮಸ್ಥಳದ `SIT’ ಚಾರ್ಚ್‌ ಶೀಟ್‌ ನಾನು ನೋಡಿಲ್ಲ : CM ಸಿದ್ದರಾಮಯ್ಯ

10/12/2025 1:47 PM1 Min Read

ರಾಜ್ಯದ ಜನತೆಯ ಗಮನಕ್ಕೆ `ಇ-ಸ್ವತ್ತು’ ಸಮಸ್ಯೆ ಪರಿಹಾರಕ್ಕೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

10/12/2025 1:42 PM1 Min Read
Recent News

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಪ್ರಕರಣ : ಡಿ.26ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

10/12/2025 1:54 PM

ಧರ್ಮಸ್ಥಳದ `SIT’ ಚಾರ್ಚ್‌ ಶೀಟ್‌ ನಾನು ನೋಡಿಲ್ಲ : CM ಸಿದ್ದರಾಮಯ್ಯ

10/12/2025 1:47 PM

ರಾಜ್ಯದ ಜನತೆಯ ಗಮನಕ್ಕೆ `ಇ-ಸ್ವತ್ತು’ ಸಮಸ್ಯೆ ಪರಿಹಾರಕ್ಕೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

10/12/2025 1:42 PM

BREAKING: ‘ದೀಪಾವಳಿಗೆ’ ವಿಶ್ವ ಮನ್ನಣೆ: ಯುನೆಸ್ಕೋ ಪಟ್ಟಿಗೆ ಹಬ್ಬ ದಾಖಲು : ಭಾರತದ ಹೆಮ್ಮೆಯ ಕ್ಷಣ ಎಂದ ಪ್ರಧಾನಿ

10/12/2025 1:40 PM
State News
KARNATAKA

BREAKING : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಪ್ರಕರಣ : ಡಿ.26ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

By kannadanewsnow0510/12/2025 1:54 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳ ವಿರುದ್ಧ ಷಡ್ಯಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟಿಗೆ…

ಧರ್ಮಸ್ಥಳದ `SIT’ ಚಾರ್ಚ್‌ ಶೀಟ್‌ ನಾನು ನೋಡಿಲ್ಲ : CM ಸಿದ್ದರಾಮಯ್ಯ

10/12/2025 1:47 PM

ರಾಜ್ಯದ ಜನತೆಯ ಗಮನಕ್ಕೆ `ಇ-ಸ್ವತ್ತು’ ಸಮಸ್ಯೆ ಪರಿಹಾರಕ್ಕೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

10/12/2025 1:42 PM

BREAKING : ರಾಜ್ಯದಲ್ಲಿ ಮತ್ತೊಂದು ವೈರಸ್ ಪತ್ತೆ : ದಕ್ಷಿಣಕನ್ನಡದ ಒಂದೇ ಶಾಲೆಯಲ್ಲಿ 17 ಮಕ್ಕಳಿಗೆ ‘ಚಿಕನ್ ಪಾಕ್ಸ್’ ಪತ್ತೆ!

10/12/2025 1:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.