Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್
KARNATAKA

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್

By kannadanewsnow0705/01/2024 11:23 AM

ಬೆಂಗಳೂರು: ಕಾಂಗ್ರೆಸ್ ಸರಕಾರದ ಶ್ರೀರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನದಡಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಅಯೋಧ್ಯೆ ಅಭಿಯಾನದ ಘಟನಾವಳಿಗಳಿಗೆ ನಾನು ಕೂಡ ಸಾಕ್ಷಿಯಾಗಿದ್ದೆ. ಇದೀಗ ಸರಕಾರವು ಕರಸೇವಕರನ್ನು ಬಂಧಿಸುತ್ತಿದೆ. ಇದನ್ನು ವಿರೋಧಿಸಿ ನಾನು ಪ್ರತಿಭಟನೆಗೆ ಬಂದಿದ್ದೇನೆ ಎಂದು ಎಸ್.ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಮಂದಿರ ವಹೀ ಬನಾಯೇಂಗೇ ಎಂಬುದು ನಮ್ಮ ಘೋಷವಾಕ್ಯವಾಗಿತ್ತು. ಇವತ್ತು ಮಂದಿರವಲ್ಲೇ ಕಟ್ಟಿದೆವು ಎಂಬ ಕಾಲಕ್ಕೆ ಬಂದಿದ್ದೇವೆ. ಜನವರಿ 22ರಂದು ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮಲಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಸಹಜವಾಗಿ ಇಲ್ಲಿನ ಕಾಂಗ್ರೆಸ್ ಸರಕಾರಕ್ಕೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

30 ವರ್ಷಗಳ ಹಿಂದಿನ ಕೇಸನ್ನು ರೀ ಓಪನ್ ಮಾಡಿ ಕರಸೇವಕರನ್ನು ಸರಕಾರ ಬಂಧಿಸುತ್ತಿದೆ. ಈಗ ಬಂಧಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. ಈಗಿನದು ಬಿಜೆಪಿ ಶ್ರೀರಾಮ ಎಂದು ಕಾಂಗ್ರೆಸ್‍ನವರು ಹೇಳುತ್ತಾರೆ. ಹಾಗಿದ್ದರೆ ಡಿಸೆಂಬರ್ 6ಕ್ಕೆ ಮೊದಲು ಇದ್ದುದು ಕಾಂಗ್ರೆಸ್ ಮಸೀದಿಯೇ ಎಂದು ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರವಾಗಿ ಕೇಳಿದರು.

ಹರಿಪ್ರಸಾದ್ ಅವರ ಹೇಳಿಕೆಯು ಅವರ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ನರೇಂದ್ರ ಮೋದಿಯವರಿಗೆ ಬೈದದ್ದು ಗೊತ್ತಿದೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ಕೊಟ್ಟರು. ಇವತ್ತು ಯಾರನ್ನಾದರೂ ಕ್ರಿಮಿನಲ್ ಎನ್ನಲು ಕಾಂಗ್ರೆಸ್ಸಿಗರು ಸಿದ್ಧರಾಗಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ? ಅವರು ಕರಸೇವಕ ಎಂಬ ಕಾರಣಕ್ಕೇ ರೀಓಪನ್ ಮಾಡಿದ್ದಾಗಿ ನಮ್ಮ ಬಲವಾದ ನಂಬಿಕೆ ಎಂದು ತಿಳಿಸಿದರು. ಮಾಜಿ ಸಚಿವ ರಾಮಚಂದ್ರ ಗೌಡ ಅವರು ಉಪಸ್ಥಿತರಿದ್ದರು. ಸ್ಥಳದಲ್ಲಿದ್ದ ಕಾರ್ಯಕರ್ತರು ಇದೇವೇಳೆ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು.

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್ Why did you give life to a 30-year-old case today?
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM1 Min Read

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM1 Min Read

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM1 Min Read
Recent News

ಗ್ಯಾಸ್ ಅಗತ್ಯವಿಲ್ಲ, ಈ ಸುಲಭ ಪಾಕವಿಧಾನಗಳನ್ನ ಟ್ರೈ ಮಾಡಿ, ಟೇಸ್ಟ್ ಮಾಡಿ!

10/03/2026 10:02 PM

ಗಣಿತ ಪತ್ರಿಕೆಯಲ್ಲಿ ಯೂಟ್ಯೂಬ್ ‘QR ಕೋಡ್’ ಕುರಿತು ‘CBSE’ ಸ್ಪಷ್ಟನೆ! ಹೇಳಿದ್ದೇನು ಗೊತ್ತಾ?

10/03/2026 9:46 PM

ಭಾರತದಲ್ಲಿ ಪ್ರಸ್ತುತ ‘ಪೆಟ್ರೋಲ್’ ಸ್ಟಾಕ್ ಎಷ್ಟಿದೆ ಗೊತ್ತಾ.? ಇನ್ನೂ ಎಷ್ಟು ದಿನಗಳಿಗೆ ಸರಿಯೋಗ್ಬೋದು.?

10/03/2026 9:40 PM

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM
State News
KARNATAKA

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

By kannadanewsnow0910/03/2026 9:22 PM KARNATAKA 1 Min Read

ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.…

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.