Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವರಂಗಿ ‘ನಕಲಿ ಸ್ವಾಮಿ’ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
KARNATAKA

ನವರಂಗಿ ‘ನಕಲಿ ಸ್ವಾಮಿ’ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

By kannadanewsnow0919/08/2024 6:07 PM

ಬೆಂಗಳೂರು : “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು.

ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳ ಹುನ್ನಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು.

“ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ” ಎಂದರು.

ರಾಜ್ಯಪಾಲರೇ ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ

“ಸರ್ಕಾರ ನೀಡಿರುವ ಸಲಹೆಗಳನ್ನೂ ಓದದ ರಾಜ್ಯಪಾಲರು ಟಿ.ಜೆ.ಅಬ್ರಹಾಂ ಎನ್ನುವ ವ್ಯಕ್ತಿ ಬೆಳಗ್ಗೆ ಅರ್ಜಿ ಕೊಟ್ಟರೆ, ಸಾಯಂಕಾಲದ ವೇಳೆಗೆ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರೇ ನಿಮ್ಮದು ಸಾಂವಿಧಾನಿಕ ಹುದ್ದೆ, ನಿಮ್ಮ ಮೇಲೆ ಈಗಲೂ ಗೌರವವಿದೆ. ನಿಮಗೆ ಸಾಕಷ್ಟು ಸಮಯವಿದ್ದು ವಿಚಾರಣೆಗೆ ನೀಡಿರುವ ಅನುಮತಿ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದರು.

ರಾಜ್ಯಪಾಲರ ಹುದ್ದೆ ಸೃಷ್ಟಿ ಮಾಡಿದ್ದೇ ಕಾಂಗ್ರೆಸ್

“ರಾಜ್ಯಪಾಲರು ಸಿಎಂ ಅವರ ವಿರುದ್ಧ ನೀಡಿರುವ ಅನುಮತಿ ವಿರುದ್ದ ನ್ಯಾಯಲಯದಲ್ಲಿ ನಮ್ಮ ಪರವಾಗಿ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇವೆ. ಹಿಂಬಾಗಿಲ ಮೂಲಕ ಬಿಜೆಪಿ, ಜೆಡಿಎಸ್ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿವೆ. ಸಂವಿಧಾನದ ಮೂಲಕ ರಾಜ್ಯಪಾಲರ ಕುರ್ಚಿಯನ್ನು ಸೃಷ್ಟಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ನಮ್ಮ ಪಕ್ಷ ಕೊಟ್ಟಿರುವ ಸಂವಿಧಾನದ ಹಕ್ಕನ್ನು ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅವಕಾಶ ನೀಡಿರುವುದು ಹಾಸ್ಯಾಸ್ಪದ” ಎಂದರು.

“ಪ್ರತಿಪಕ್ಷಗಳಿಗೆ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಮೇಲೆ ಅಸೂಯೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗದ ನಾಯಕನೊಬ್ಬ ಗ್ಯಾರಂಟಿಗಳನ್ನು ನೀಡಿ ಜನರ ಹೃದಯ ಗೆದ್ದಿದ್ದಾರೆ ಎಂಬುದನ್ನು ಪ್ರತಿಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಧಿಕಾರ ಸಿಗಲಿಲ್ಲ ಎಂದು ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

“ಪ್ರತಿಪಕ್ಷದವರಿಗೆ ಹೊಟ್ಟೆಯುರಿ ಬಂದರೆ ನಮ್ಮ ಬಳಿ ಇರುವ ವೈದ್ಯರಿಂದ ಔಷಧಿ ಕಳಿಸಿಕೊಡೋಣ. ಹೊಟ್ಟೆಯುರಿಗೆ ಔಷಧವಿದೆ ಆದರೆ ಅಸೂಯೆಗೆ ಮದ್ದಿಲ್ಲ. ನಾವು ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳುವ ಪ್ರಮೇಯವಿಲ್ಲ. ಏಕೆಂದರೆ ವಿಚಾರಣೆಗೆ ನೀಡಿರುವ ಅನುಮತಿಯನ್ನು ನ್ಯಾಯಲಯವು ಧಿಕ್ಕರಿಸಿ ನ್ಯಾಯ ನೀಡುವ ನಂಬಿಕೆಯಿದೆ” ಎಂದರು.

ರಾಜ್ಯಪಾಲರೇ ಒಳಸಂಚು ಏಕೆ?

“ಜನ ಬಹುಮತ ನೀಡಿರುವ ಕಾರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಪ್ರಮಾಣ ವಚನ ಭೋದನೆ ಮಾಡಿದರು. ಏಕೆ ಈಗ ಒಳಸಂಚು ಮಾಡುತ್ತಿದ್ದೀರಿ. ನಿಮಗೆ ಸಂವಿಧಾನವನ್ನು ಕಾಪಾಡುವ ಜವಾಬ್ದಾರಿ ನೀಡಲಾಗಿದೆ. ಆದರೆ ನೀವು ಏಕೆ ಇದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ? ಸಂವಿಧಾನವನ್ನು ಕಾಪಾಡಬೇಕೆ ಹೊರತು, ಆ ಕುರ್ಚಿಗೆ ಕಳಂಕ ತರಬಾರದು ಎಂದು ನಿಮಗೆ ಸಲಹೆಯನ್ನು ನೀಡುತ್ತಿದ್ದೇವೆ” ಎಂದು ಹೇಳಿದರು.

“ನಮ್ಮ ಮುಖ್ಯಮಂತ್ರಿಗಳ ಮೇಲೆ ಅಗಾಧವಾದ ಆರೋಪಗಳು ಬಂದಿವೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಆ ಆರೋಪಗಳ ಮೇಲೆ ನೀವು ತನಿಖೆ ನಡೆಸಿದ್ದೀರಾ? ಇದರ ಬಗ್ಗೆ ಯಾವುದಾದರೂ ತನಿಖಾ ಸಂಸ್ಥೆಗಳು ವರದಿ ನೀಡಿದ್ದಾವೆಯೇ? ಅಧಿಕಾರಿಗಳು, ಲೋಕಾಯುಕ್ತರು ಇಬ್ಬರಲ್ಲಿ ಯಾರು ನಿಮಗೆ ವರದಿ ನೀಡಿದ್ದಾರೆ” ಎಂದು ಖಾರವಾಗಿ ಪ್ರಶ್ನಿಸಿದರು.

“ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಎಂದು ಬ್ರಿಟಿಷರು 200 ವರ್ಷಗಳ ಕಾಲ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಈ ದೇಶದ ಜನರಿಗೆ ಸಂವಿಧಾನ, ಪ್ರಜಾಪ್ರಭುತ್ವ ಸೇರಿದಂತೆ ಎಲ್ಲಾ ಹಕ್ಕುಗಳನ್ನು ನೀಡಿದ್ದು ಕಾಂಗ್ರೆಸ್. ನಮ್ಮ ಸರ್ಕಾರದ ಯೋಜನೆಗಳನ್ನು ನೋಡಿ ಬಿಜೆಪಿಯವರು ಅನೇಕ ಕಡೆ ಕರ್ನಾಟಕ ಮಾಡೆಲ್ ಎಂದು ಜಾರಿಗೆ ತರುತ್ತಿದ್ದಾರೆ. ಇದು ಆ ಪಕ್ಷಕ್ಕೆ ಹೊಟ್ಟೆಯುರಿಯಾಗಿದೆ” ಎಂದರು.

“ನನ್ನ ಅಧ್ಯಕ್ಷತೆ ಹಾಗೂ ಸಿದ್ದರಾಮಯ್ಯ ಅವರ ಮುಖಂಡತ್ವಕ್ಕೆ 136 ಸ್ಥಾನವನ್ನು ನೀಡಿ, ಉತ್ತಮ ಆಡಳಿತ ನೀಡಿ ಎಂದು ಜನ ಅವಕಾಶಕೊಟ್ಟಿದ್ದಾರೆ. ಸರ್ಕಾರವನ್ನು ಅಲುಗಾಡಿಸುವವರ ವಿರುದ್ಧದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಎಲ್ಲರ ಜೊತೆ ಚರ್ಚೆ ಮಾಡಿ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯ ಅವರ ಜೊತೆ ನಿಂತು ಅವರ ಪರವಾಗಿ ಇರುತ್ತೇವೆ” ಎಂದರು.

ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಸಾಧ್ಯವಿಲ್ಲ

“ಬಿಜೆಪಿಯ ಹುನ್ನಾರಗಳನ್ನು ಜನರಿಗೆ ತಿಳಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಲಾಗುವುದು. ಬಿಜೆಪಿಯವರು ಅಧಿಕಾರಕ್ಕೆ ಏಕೆ ಬರಲಿಲ್ಲ. ನೀವು ಈ ಹಿಂದೆ 17 ಜನರನ್ನು ಕರೆದುಕೊಂಡು ಹೋಗಿ ಆಪರೇಷನ್ ಕಮಲ ಮಾಡಿ ಜನತಾದಳ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿದರು. ಈ ಬಾರಿಯೂ ಸ್ವಲ್ಪ ಪ್ರಯತ್ನ ಪಟ್ಟರು. ಆದರೆ ಅವರ ಆಟ ನಡೆಯಲಿಲ್ಲ. ಮುಂದಕ್ಕೂ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಶಾಸಕನನ್ನು ಖರೀದಿ ಮಾಡಲು ಸಾಧ್ಯವಿಲ್ಲ” ಎಂದು ಸವಾಲು ಹಾಕಿದರು.

“ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ಅವರು ಎಲ್ಲಾದರೂ ಪ್ರಭಾವ ಬೀರಿದ್ದಾರೆಯೇ. ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಅಣ್ಣ ಅರಿಶಿನ, ಕುಂಕುಮಕ್ಕೆ ಎಂದು ಜಮೀನು ದಾನ ಕೊಟ್ಟಿದ್ದರು. ಇದನ್ನು ಮುಡಾ ಆಕ್ರಮಿಸಿಕೊಂಡ ಕಾರಣಕ್ಕೆ ಪರಿಹಾರ ನೀಡಿ ಎಂದು ಮನವಿ ಮಾಡಿದ್ದರು. ಸಿಎಂ ಅವರ ಪತ್ನಿ ಇಂತಲ್ಲೇ ಸೈಟ್ ಬೇಕು ಎಂದು ಎಲ್ಲಿಯೂ ಮನವಿ ಮಾಡಿಲ್ಲ. ಸಿದ್ದರಾಮಯ್ಯ ಅವರು ಎಲ್ಲಿಯೂ ಪ್ರಭಾವ ಬೀರಿಲ್ಲ. ಇದು ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಈಗ ಅವರೇ ಆರೋಪ ಮಾಡುತ್ತಿರುವುದು ಎಷ್ಟು ಸರಿ?” ಎಂದು ಹೇಳಿದರು.

ಇಂದು ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಆಗಿದ್ದೇನು? ಇಲ್ಲಿದೆ BMRCL ಮಾಹಿತಿ

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ

BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.