ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ತನ್ನ ರಾಜಕೀಯ ಲಾಭಕ್ಕಾಗಿ ದರ್ಶನ್ ಅವರ ಸ್ಟಾರ್ ಪವರ್ ಬಳಸಿಸಿದ ಸುಮಲತಾ ಅಂಬರೀಶ್ ಅವರು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಏಕೆ ಮೌನವಾಗಿದ್ದಾರೆ ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಬಹುತೇಕ ಕೆ. ಎಫ್. ಐ. ವ್ಯಕ್ತಿಗಳು ದರ್ಶನ್ ಪ್ರಕರಣ ಒಂದು ವಾರಕ್ಕೂ ಮೀರಿದ್ದರೂ ಅದರ ಬಗ್ಗೆ ಮೌನವಾಗಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ತನ್ನ ರಾಜಕೀಯ ಲಾಭಕ್ಕಾಗಿ ದರ್ಶನ ಅವರ ಸ್ಟಾರ್ ಪವರ್ ಅನ್ನು ಬಳಸಿದ ಸುಮಲತಾ ಅಂಬರಿಶ್ ಅವರನ್ನು ತಮ್ಮ ‘ಹಿರಿಯ ಮಗ’ ಎಂದು ಕರೆದಿದ್ದರು. ತನ್ನ ಮಗನ ಇತ್ತೀಚಿನ ಘಟನೆಗಳ ಬಗ್ಗೆ ಸುಮಲತಾ ಏನು ಹೇಳುತ್ತಾರೆ? — ತಲೆ ಮರೆಸಿಕೊಳ್ಳುವುದು ಒಂದು ಆಯ್ಕೆಯಾಗಿರಬಾರದು ಎಂದು ಹೇಳಿದ್ದಾರೆ.