Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ಈ 12 ಮಾರಕ ರೋಗಗಳ ವಿರುದ್ದ ಪ್ರತೀ ತಿಂಗಳು ಲಸಿಕೆ ಹಾಕಿಸಿ.!

22/11/2025 9:03 AM

G-20 ಶೃಂಗಸಭೆಗೆ ಮುನ್ನ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ: ಕಾರ್ಯಸೂಚಿಯಲ್ಲಿ ಏನಿದೆ ?

22/11/2025 9:01 AM

ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!

22/11/2025 8:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನೀಟ್ ಪರೀಕ್ಷೆ ಅಕ್ರಮ’ದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮೀನಾಮೇಷ ಏಕೆ.?- ಸಚಿವ ಶರಣಪ್ರಕಾಶ್ ಪಾಟೀಲ್ ಪ್ರಶ್ನೆ
KARNATAKA

‘ನೀಟ್ ಪರೀಕ್ಷೆ ಅಕ್ರಮ’ದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮೀನಾಮೇಷ ಏಕೆ.?- ಸಚಿವ ಶರಣಪ್ರಕಾಶ್ ಪಾಟೀಲ್ ಪ್ರಶ್ನೆ

By kannadanewsnow0921/06/2024 6:10 PM

ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.

ಕೇಂದ್ರ ಸರ್ಕಾರದ ನಡೆವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು, ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬೇಜಾವಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ನಿಲುವುಗಳು ಬಹಳ ಅನುಮಾನಸ್ಪದವಾಗಿ ಕಾಣುತ್ತಿದೆ. ದೊಡ್ಡ ಮಟ್ಟದ ಹಗರಣವಾಗಿದೆ ಎಂದು ಪಕ್ಷಾತೀತವಾಗಿ ಬೀದಿಗಿಳಿದು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹೋರಾಟ ಮಾಡುತ್ತಿದ್ದಾರೆ. ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂಬುದು ಬಹುತೇಕ ರಾಜ್ಯಗಳ ಒಕ್ಕೋರಲಿನ ಬೇಡಿಯಾಗಿದೆ. ಈ ಮನವಿಯನ್ನು ಪರಿಷ್ಕರಿಸದೆ ಮೌನಕ್ಕೆ ಜಾರಿಯಾಗಿರುವುದನ್ನು ಗಮನಿಸಿದರೆ ಕೇಂದ್ರದ ಮೇಲೆ ಸಂಶಯಾಸ್ಪದವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ.. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂಕೋರ್ಟ್ ತೀರ್ಪು ಆಗಬೇಕು ಎಂದು ಹೇಳಿದರು.

ತಮಿಳುನಾಡು ಸರ್ಕಾರ ಅದರ ಭಾವನೆ ಹೇಳಿದೆ. ನಾವು ಕರ್ನಾಟಕದಲ್ಲಿ ಇದೇ ರೀತಿ ಮಾಡಬೇಕಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಸ್ಪಷ್ಟಪಡಿಸಿದರು.

BREAKING: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ‘ಜಮೀರ್ ಅಹ್ಮದ್’ ನೇಮಕ

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿ, ಪತಿ ವಿರುದ್ಧ ‘ಖ್ಯಾತ ಗಾಯಕ ಲಕ್ಕಿ ಆಲಿ’ ಲೋಕಾಯುಕ್ತಕ್ಕೆ ದೂರು

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ಈ 12 ಮಾರಕ ರೋಗಗಳ ವಿರುದ್ದ ಪ್ರತೀ ತಿಂಗಳು ಲಸಿಕೆ ಹಾಕಿಸಿ.!

22/11/2025 9:03 AM2 Mins Read

ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!

22/11/2025 8:59 AM2 Mins Read

ALERT : `ಮೀನು’ ಪ್ರಿಯರೇ ಎಚ್ಚರ : ಈ `ಫಿಶ್’ಗಳ ಸೇವನೆಯಿಂದ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಳ.!

22/11/2025 8:56 AM1 Min Read
Recent News

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ಈ 12 ಮಾರಕ ರೋಗಗಳ ವಿರುದ್ದ ಪ್ರತೀ ತಿಂಗಳು ಲಸಿಕೆ ಹಾಕಿಸಿ.!

22/11/2025 9:03 AM

G-20 ಶೃಂಗಸಭೆಗೆ ಮುನ್ನ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ: ಕಾರ್ಯಸೂಚಿಯಲ್ಲಿ ಏನಿದೆ ?

22/11/2025 9:01 AM

ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!

22/11/2025 8:59 AM

ALERT : `ಮೀನು’ ಪ್ರಿಯರೇ ಎಚ್ಚರ : ಈ `ಫಿಶ್’ಗಳ ಸೇವನೆಯಿಂದ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಳ.!

22/11/2025 8:56 AM
State News
KARNATAKA

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ಈ 12 ಮಾರಕ ರೋಗಗಳ ವಿರುದ್ದ ಪ್ರತೀ ತಿಂಗಳು ಲಸಿಕೆ ಹಾಕಿಸಿ.!

By kannadanewsnow5722/11/2025 9:03 AM KARNATAKA 2 Mins Read

ನವಜಾತ ಶಿಶುಗಳಿಗೆ ಬರುವ 12 ಮಾರಕ ರೋಗಗಳ ವಿರುದ್ಧ ಪ್ರತಿ ತಿಂಗಳು ಲಸಿಕೆಯನ್ನು ಹಾಕಿಸಬೇಕು ಎಂದು ತಾಯಿ-ಮಕ್ಕಳ ಆಸ್ಪತ್ರೆ, ಮಕ್ಕಳ…

ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!

22/11/2025 8:59 AM

ALERT : `ಮೀನು’ ಪ್ರಿಯರೇ ಎಚ್ಚರ : ಈ `ಫಿಶ್’ಗಳ ಸೇವನೆಯಿಂದ ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಳ.!

22/11/2025 8:56 AM

BIG Alert : ವಾಹನ ಮಾಲೀಕರೇ ಅಪ್ಪಿ ತಪ್ಪಿಯೂ ಇಂಥ ‘Apk ಫೈಲ್’ ಕ್ಲಿಕ್ ಮಾಡಬೇಡಿ.!

22/11/2025 8:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.