ಬಾಗಲಕೋಟೆ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಹೆಚ್ಚಿದ ನೀರಿನ ಹರಿವು ಹೆಚ್ಚಾಗಿದೆ.
ಹಿಪ್ಪರಗಿ ಜಲಾಶಯದಿಂದ 1 ಲಕ್ಷ 14 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.

BIG BREAKING NEWS: ಸಿಲಿಕಾನ್‌ ಸಿಟಿಯಲ್ಲಿ IAS ಹೆಸರೇಳಿ KAS ಪಾಸ್‌ ಮಾಡಿಸ್ತೀನಿ ಎಂದು ಹಣ ಪೀಕುತ್ತಿದ್ದವನ ಬಂಧನ

 

ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯ ತುಂಬಿ ಹರಿಯುತ್ತಿದೆ.
ಹಿಪ್ಪರಗಿ ಜಲಾಶಯಕ್ಕೆ 1 ಲಕ್ಷ 15 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ಜಮಖಂಡಿ, ರಬಕವಿ-ಬನಹಟ್ಟಿ ತಾಲೂಕಿನ ಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ದಾಟಿದರೆ ಪ್ರವಾಹ ಉಂಟಾಗಲಿದೆ. ಸದ್ಯ 1.14 ಲಕ್ಷ ಕ್ಯೂಸೆಕ್ ನೀರಿನ‌ ಹರಿವು ಇದೆ. ಇದರಿಂದಾಗಿ ಪ್ರವಾಹ ಭೀತಿ ಸದ್ಯಕ್ಕಿಲ್ಲ.

Share.
Exit mobile version