ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇತ್ತೀಚಿಗೆ ಬಿ ಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರರನ್ನು ಸೋಲಿಸಿ ಸೋಲಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಕೆ.ಎಸ್ ಈಶ್ವರಪ್ಪ ಸೆಡ್ಡು ಹೊಡೆದು ನಿಂತಿದ್ದಾರೆ.
ಚುನಾವಣೆಯಲ್ಲಿ ರಾಘವೇಂದ್ರ ಸೋತು ಮನೆಗೆ ಹೋಗಲಿದ್ದು, ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ : ಈಶ್ವರಪ್ಪ ವಾಗ್ದಾಳಿ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಎಸ್ ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳ ರೀತಿ ಅಂದುಕೊಂಡಿದ್ದಾರೆ. ರಾಘವೇಂದ್ರ ಸೋಲಿಸುವ ಮೂಲಕ ಅವರಿಗೆ ಬುದ್ಧಿ ಕಲಿಸಬೇಕು. ಸೋಲಿನ ರುಚಿ ಏನು ಅಂತ ಯಡಿಯೂರಪ್ಪಗೆ ತೋರಿಸಬೇಕು. ಅಪ್ಪ ಮಕ್ಕಳು ಬೇಡವೆಂದು ಶಿಕಾರಿಪುರದ ಜನ ತೀರ್ಮಾನಿಸಿದ್ದಾರೆ.ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಪಕ್ಷ ಉಳಿಯಬೇಕು ಹಿಂದುತ್ವ ಉಳಿಯಬೇಕು ಅದಕ್ಕಾಗಿ ಸ್ಪರ್ಧಿಸುತ್ತಿದ್ದೇನೆ. ನರೇಂದ್ರ ಮೋದಿ ಕಾಂಗ್ರೆಸ್ ಕುಟುಂಬದ ಕೈಯಲ್ಲಿ ಇದೆ ಅಂತಾರೆ ರಾಜ್ಯದ ಬಿಜೆಪಿಯಲ್ಲಿ ಏನು ನಡೆಯುತ್ತಿದೆ? ಎಂದು ಇದೇ ವೇಳೆ ಪ್ರಶ್ನಿಸಿದರು.
ದೆಹಲಿ : ‘ಮೆಟ್ರೋ’ದಲ್ಲಿ ಯುವತಿಯರ ಅಸಭ್ಯ ವರ್ತನೆ : ಪರಸ್ಪರ ಬಣ್ಣ ಎರಚಿ ‘ಹೋಳಿ’ ಆಚರಣೆ
ಕರ್ನಾಟಕ ಬಿಜೆಪಿಯಲ್ಲೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ನಡೆಯುತ್ತಿದೆ.ಶಿಕಾರಿಪುರದಲ್ಲಿ ಅನೇಕ ಕಾರ್ಯಕರ್ತರು ನೋವು ಅನುಭವಿಸಿದ್ದಾರೆ.ಆದರೆ ಮುಂದೆ ಬಂದು ಹೇಳಿಕೊಳ್ಳುವ ಜೊತೆಯಲ್ಲಿ ಯಾರು ಇಲ್ಲ. ಹಾವೇರಿಗೆ ಬೊಮ್ಮಾಯಿ ಚಿಕ್ಕಮಗಳೂರಿಗೆ ಶೋಭಾವಂತೆ ಇಬ್ಬರಿಗೂ ಟಿಕೆಟ್ ಕೊಡಿಸಲು ಹಟ ಹಿಡಿದಿದ್ದಾರಂತೆ ಎಂದು ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ನಾನು ಸಂಸನ 6 ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ- ಕೋಟಾ ಶ್ರೀನಿವಾಸ್ ಪೂಜಾರಿ
ನರೇಂದ್ರ ಮೋದಿ ಯುವಕರು ಬೆಳೆಯಬೇಕು ಅಂತ ಹೇಳುತ್ತಾರೆ. ಆದರೆ ಯುವಕರನ್ನು ತುಳಿಯುವುದೇ ಬಿಎಸ್ ಯಡಿಯೂರಪ್ಪ ಕೆಲಸವಾಗಿದೆ. ಬಿಎಸ್ ಯಡಿಯೂರಪ್ಪ ಕೆಜೆಪಿ ಕಟ್ಟಿ ಕೇವಲ ಆರು ಸೀಟ್ ಗಳನ್ನು ಗೆದ್ದರು. ಕೇಂದ್ರದವರಿಗೆ ಬಿಎಸ್ ಯಡಿಯೂರಪ್ಪ ಒಬ್ಬರೇ ಲಿಂಗಾಯತ ನಾಯಕರ? ಶಿಕಾರಿಪುರದಲ್ಲಿ ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡು ಗೆದ್ದರು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಬಿವೈ ವಿಜಯೇಂದ್ರ ಗೆದ್ದರು ಎಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.