Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೈಜೀರಿಯಾದಲ್ಲಿ ದೋಣಿ ಮಗುಚಿ ಘೋರ ದುರಂತ ; 25 ಮಂದಿ ಸಾವು, 14 ಜನರು ನಾಪತ್ತೆ

04/01/2026 9:43 PM

BREAKING : ಕಾನೂನುಬಾಹಿರ ವಿಷಯ ರಚಿಸುವ ಬಳಕೆದಾರರ ‘X ಖಾತೆ’ಗಳು ಶಾಶ್ವತವಾಗಿ ಬ್ಯಾನ್

04/01/2026 9:31 PM

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯನ್ನು ಹೊಡೆದು ಸುಟ್ಟು ಕೊಂದ ಮೂವರು ಅರೆಸ್ಟ್

04/01/2026 9:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0903/01/2026 4:24 PM

ಬೆಂಗಳೂರು : “ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ಬಿಜೆಪಿ ನಾಯಕರು ಇನ್ನು ಮುಂದೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಕೂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮಹಾತ್ಮಾ ಗಾಂಧಿ ಅವರ ಫೋಟೋಗಳನ್ನು ತಮ್ಮ ಕಚೇರಿಗಳಲ್ಲಿ ಹಾಕಿಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ. ಅವರ ಫೋಟೋ ಹಾಕಿಕೊಳ್ಳುವ ಯೋಗ್ಯತೆ ನಿಮಗಿಲ್ಲ. ಅವರ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ? ನೀವು ಮಹಾತ್ಮಾ ಗಾಂಧಿ ಬಗ್ಗೆ ಮಾತನಾಡುವ ಹಾಗೂ ಅವರ ಪ್ರತಿಮೆಗೆ ಹೂವಿನ ಹಾರ ಹಾಕುವ ಹಕ್ಕೂ ಇಲ್ಲ. ನಿಮ್ಮ ಬಳಿ ಇರುವ ಮಹಾತ್ಮಾ ಗಾಂಧೀಜಿ ಅವರ ಫೋಟೋಗಳನ್ನು ನಮಗೆ ಕೊಟ್ಟುಬಿಡಿ, ನಾವು ಅವುಗಳನ್ನು ನಮ್ಮ ಹಾಗೂ ಗಾಂಧಿಜಿಯನ್ನು ಗೌರವಿಸುವ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ” ಎಂದರು.

“ಮಹಾತ್ಮಾ ಗಾಂಧೀಜಿ ಅವರು ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಲು ನೇತೃತ್ವ ವಹಿಸಿ ನೂರು ವರ್ಷಗಳು ತುಂಬಿವೆ. ಇಂತಹ ಸಂಭ್ರಮಾಚರಣೆ ವೇಳೆ ಅವರ ಹೆಸರನ್ನು ತೆಗೆದು, ಮತ್ತೊಮ್ಮೆ ಅವರ ಕೊಲೆ ಮಾಡುತ್ತಿದ್ದೀರಲ್ಲಾ, ಈ ದೇಶದಲ್ಲಿ ಇದಕ್ಕಿಂತ ದೊಡ್ಡ ಅಪಮಾನ ಬೇರೋಂದಿಲ್ಲ” ಎಂದು ಹೇಳಿದರು.

ಮಸೂದೆ ಹಿಂಪಡೆಯುವವರೆಗೂ ಆಂದೋಲನ:

“ರಾಜ್ಯದ ಕೂಲಿ ಕಾರ್ಮಿಕರ ಬದುಕು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮಾರಕವಾಗಿರುವ ವಿಬಿ ಜಿ ರಾಮ್ ಜಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಪಕ್ಷತೀತವಾಗಿ ಆಂದೋಲನ ರೂಪಿಸಲಾಗುವುದು. ಈ ಮಸೂದೆ ವಿರುದ್ಧದ ಹೋರಾಟ ಕೇವಲ ಪಕ್ಷ ಅಥವಾ ಸರ್ಕಾರಕ್ಕೆ ಮಾತ್ರ ಸೀಮಿತವಲ್ಲ. ಪ್ರತಿ ಪಂಚಾಯ್ತಿಯಲ್ಲಿ ಪ್ರತಿಯೊಬ್ಬರನ್ನು ಆಹ್ವಾನ ನೀಡಿ ನಮ್ಮ ನಾಯಕರು ಸೇರಿ ಸಮಾವೇಶ ಹಾಗೂ ಗ್ರಾಮ ಸಭೆ ನಡೆಸುತ್ತೇವೆ. ಅಲ್ಲಿ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ನಂತರ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರ ಹೇಗೆ ಕೃಷಿ ಕರಾಳ ಕಾಯ್ದೆ ಹಿಂಪಡೆಯಿತೋ ಅದೇ ರೀತಿ ಈ ಮಸೂದೆಯನ್ನು ಹಿಂಪಡೆಯುವಂತೆ ಮಾಡಲು ಆಂದೋಲನ ಮಾಡುತ್ತೇವೆ. ಪಕ್ಷಬೇಧ ಮರೆತು ನಮ್ಮ ಹೋರಾಟ ರೂಪಿಸುತ್ತೇವೆ” ಎಂದು ಹೇಳಿದರು.

“ಕಳೆದ 20 ವರ್ಷಗಳಿಂದ ಹಳ್ಳಿ ಜನ ತಮ್ಮ ಬೆವರು ಸುರಿಸಿ ತಮ್ಮ ಹಳ್ಳಿಗಳ ಅಭಿವೃದ್ಧಿ ಮಾಡುವ ಪ್ರಯತ್ನಕ್ಕೆ ಅಂತ್ಯ ಹಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ಮಸೂದೆ ನಮ್ಮ ಕರಾವಳಿ ಭಾಗದ ಮೀನುಗಾರರಿಗೂ ಅನ್ಯಾಯವಾಗಲಿದೆ. ಮನರೇಗಾ ಯೋಜನೆಯಲ್ಲಿ ಮೀನುಗಾರರಿಗೂ ಕೂಲಿ ಪಡೆಯುವ ಅವಕಾಶವಿತ್ತು. ಇದನ್ನೂ ಕಸಿಯಲಾಗಿದೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಸರಿ ಎಂದು ಸ್ವಾಗತಿಸುತ್ತಿಲ್ಲ, ತಪ್ಪು ಎಂದು ವಿರೋಧ ಮಾಡುತ್ತಿಲ್ಲ. ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ ಯಾಕೆ?” ಎಂದು ಪ್ರಶ್ನಿಸಿದರು.

“ಮನರೇಗಾ ಪ್ರತಿ ಕೂಲಿ ಕಾರ್ಮಿಕರ ಕುಟುಂಬಕ್ಕೆ ಶಕ್ತಿ ತುಂಬಿತ್ತು. ಇಂದಿರಾ ಆವಾಸ್, ರಾಜ್ಯ ಹಾಗೂ ಕೇಂದ್ರ ವಸತಿ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಲ್ಲಿ ತಾನು ತನ್ನ ಮನೆ ಕಟ್ಟಿಕೊಳ್ಳಲು ಮನರೇಗಾ ಯೋಜನೆ ಕೂಲಿ ನೀಡುತ್ತಿತ್ತು. ರೈತರು ತಮ್ಮದೇ ಜಮೀನನ್ನು ಮಟ್ಟು ಮಾಡಿಕೊಳ್ಳಲು, ಇಂಗು ಗುಂಡಿ ನಿರ್ಮಿಸಲು, ವಿವಿಧ ಬೆಳೆ ಹಾಕಲು ಮನರೇಗಾ ಯೋಜನೆಯಲ್ಲಿ ಕೂಲಿ ಪಡೆದುಕೊಳ್ಳಬಹುದಾಗಿತ್ತು. ಇದು ತೋಟಗಾರಿಗೆ, ರೇಷ್ಮೆ ಮೂಲಕ ಜೀವನೋಪಾಯದಕ್ಕೆ ದಾರಿ ಮಾಡಿಕೊಳ್ಳಲಾಗಿತ್ತು. ಈಗ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಇಂದಿರಾ ಅವಾಸ್, ರಾಜ್ಯ ಹಾಗೂ ಕೇಂದ್ರ ಅವಾಸ್ ಯೋಜನೆಗಳ ಮನೆ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೂಲಿಯನ್ನು ತೆಗೆದುಹಾಕಲಾಗಿದೆ. ಕೇವಲ ಪ್ರಧಾನಮಂತ್ರಿ ಅವಾಸ್ ಯೋಜನೆ ಮಾತ್ರ ಅವಕಾಶ ನೀಡಿದ್ದಾರೆ” ಎಂದು ಕಿಡಿ ಕಾರಿದರು.

ಕನಕಪುರ, ಹಾವೇರಿಗೆ ಹೋಗಿ ನೋಡಿ:

“ಇನ್ನು ದನದ ಕೊಟ್ಟಿಗೆ, ಹಂದಿ, ಕುರಿ ಶೆಡ್ ಸೇರಿದಂತೆ ಮೂಲಸೌಕರ್ಯ ನಿರ್ಮಾಣಕ್ಕೆ ಮನರೇಗಾದಲ್ಲಿ ಯೋಜನೆ ರೂಪಿಸಲಾಗಿತ್ತು. ಮಾಧ್ಯಮಗಳಿಗೆ ವಾಹನ ವ್ಯವಸ್ಥೆ ಮಾಡಿಕೊಡುತ್ತೇನೆ. ಬೇಕಾದರೆ ನಮ್ಮ ಕನಕಪುರ ತಾಲ್ಲೂಕಿಗೆ ಹೋಗಿ ನೋಡಿ. ಇಡೀ ದೇಶದಲ್ಲಿ ಅತಿ ಹೆಚ್ಚು ನರೇಗಾ ಯೋಜನೆ ಅನುದಾನ ಬಳಸಿದ ತಾಲ್ಲೂಕು ನಮ್ಮದು. ನಾವು ಈ ಯೋಜನೆಯಲ್ಲಿ ವಂಚನೆ ಮಾಡಿದ್ದೇವೆ ಎಂದು ಕೇಂದ್ರ ದಿಂದ ಸುಮಾರು ಹತ್ತು ತಂಡಗಳನ್ನು ಕಳುಹಿಸಿ ತನಿಖೆ ಮಾಡಿಸಿದ್ದರು. ನಾವು ಅರ್ಕಾವತಿ ನದಿಗೆ ಚೆಕ್ ಡ್ಯಾಂ ನಿರ್ಮಿಸಿದ್ದೇವೆ. 50 ಸಾವಿರ ದನದ ಕೊಟ್ಟಿಗೆ ಕಟ್ಟಿಸಿದ್ದೇವೆ. ಪಂಚಾಯ್ತಿ ಕಟ್ಟಡ, ಉದ್ಯಾನವನ, ಆಟದ ಮೈದಾನ ನಿರ್ಮಿಸಿದ್ದೇವೆ. ಇದೆಲ್ಲವನ್ನು ನೋಡಿ, ತಮ್ಮ ಮತಬ್ಯಾಂಕಿಗೆ ಧಕ್ಕೆಯಾಗುತ್ತದೆ. ಎಂದು ಪಂಚಾಯ್ತಿಗಳು ಹಾಗೂ ಪಂಚಾಯ್ತಿ ಸದಸ್ಯರಿಗೆ ಕೊಟ್ಟಂತಹ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ” ಎಂದು ಹರಿಹಾಯ್ದರು.

“ನೀವೂ ಹಾವೇರಿ ಜಿಲ್ಲೆಗೆ ಹೋಗಿ ನೋಡಿ, ಪ್ರತಿ ತಾಲ್ಲೂಕಿನಲ್ಲಿ 5-10 ಸಾವಿರ ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಈ ಯೋಜನೆ ಇಡೀ ದೇಶದ ಗ್ರಾಮೀಣ ಅಭಿವೃದ್ಧಿಗೆ ಮಾರಕವಾಗಿದೆ. ಗ್ರಾಮೀಣ ಪ್ರದೇಶದ ಬದುಕಿಗೆ ಮಾರಕವಾದ ಮತ್ತೊಂದು ಮಸೂದೆ ಬೇರೋಂದಿಲ್ಲ. ರಾಜೀವ್ ಗಾಂಧಿ ಅವರು ಪಂಚಾಯ್ತಿಗಳಿಗೆ ಶಕ್ತಿ ತುಂಬಲು ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತರುವಾಗ ನಮ್ಮ ರಾಜ್ಯಕ್ಕೆ ಬಂದು ವಿಚಾರ ಸಂಕೀರ್ಣ ನಡೆಸಿದ್ದರು. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ನಮ್ಮಲ್ಲಿ ಬೇಲೂರು ನಿರ್ಣಯ ಕೈಗೊಳ್ಳಲಾಯಿತು. 25 ಇಲಾಖೆಗಳಲ್ಲಿ ಪಂಚಾಯ್ತಿಗಳಿಗೆ ಶಕ್ತಿ ತುಂಬಲು ತೀರ್ಮಾನ ಮಾಡಿದೆವು. ಅಂಗನವಾಡಿ, ಗ್ರಾಮ ಪಂಚಾಯ್ತಿ, ಸ್ವಸಾಹಯ ಗುಂಪು, ಸೈಕ್ಲೋನ್ ಶೆಟ್ಲರ್, ಸ್ಮಶಾಣ, ಗೋದಾಮು, ಸಮುದಾಯ ಭವನ, ಕಟ್ಟಡ ನಿರ್ಮಾಣಕ್ಕೆ, ಚರಂಡಿ ನಿರ್ಮಾಣ, ಜಮೀನು ರಸ್ತೆ ನಿರ್ಮಾಣ ಮಾಡಲು ಅವಕಾಶವಿತ್ತು. ಈ ಹೊಸ ಮಸೂದೆಯಿಂದ ಇದೆಲ್ಲದಕ್ಕೂ ಅಂತ್ಯ ಹಾಡಲಾಗಿದೆ” ಎಂದು ವಾಗ್ದಾಳಿ ನಡೆಸಿದರು.

“ರೈತರು ಅಥವಾ ಕೂಲಿ ಕಾರ್ಮಿಕರು ತಮ್ಮ ಜಮೀನಿನಲ್ಲಿ ಮಾಡುವ ಕಾಮಗಾರಿಗೆ ಅರ್ಜಿ ಹಾಕಿ ಅನುದಾನ ಪಡೆಯಬಹುದಾಗಿತ್ತು, ಈಗ ಇದನ್ನು ತಪ್ಪಿಸಿ ಈ ಯೋಜನೆ ಕಾಮಗಾರಿಗಳನ್ನು ಗುತ್ತಿಗೆದಾರರ ಕೈಗೆ ಕೊಟ್ಟಿದ್ದಾರೆ. ಎಲ್ಲಿ ಯಾವ ಕೆಲಸ ಆಗಬೇಕು ಎಂಬುದನ್ನು ಕೇಂದ್ರ ಸರ್ಕಾರದಿಂದ ನಿರ್ದೇಶನದ ಮೇರೆಗೆ ನಿರ್ಧಾರ ಮಾಡಲಾಗುವುದು. ಈ ಯೋಜನೆ ನಮ್ಮ ರಾಜ್ಯದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ಯಾವ ರಾಜ್ಯಗಳಲ್ಲೂ ಯಶಸ್ವಿಯಾಗುವುದಿಲ್ಲ. ಕೇಂದ್ರದ ಸಚಿವರು ಹಾಗೂ ರಾಜ್ಯದಿಂದ ಕೇಂದ್ರ ಪ್ರತಿನಿಧಿಸುತ್ತಿರುವ ಯಾವುದೇ ಸಚಿವರು ಇದನ್ನು ಸ್ವಾಗತಿಸಿಯೂ ಇಲ್ಲ. ವಿರೋಧಿಸುತ್ತಲೂ ಇಲ್ಲ, ಯಾಕೆ ” ಎಂದು ಪ್ರಶ್ನಿಸಿದರು.

ನಾಳೆ ಶಿವಮೊಗ್ಗ ಟೌನ್-ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ರದ್ದು

Share. Facebook Twitter LinkedIn WhatsApp Email

Related Posts

ALERT : ಯುವಜನರಲ್ಲಿ ಹೆಚ್ಚುತ್ತಿದೆ `ಮೆದುಳು ಪಾರ್ಶ್ವವಾಯು’ ಅಪಾಯ : ಕಾರಣ ಏನು ಗೊತ್ತಾ?

04/01/2026 8:51 PM2 Mins Read

ALERT : ಮೊಬೈಲ್ ಗ್ರಾಹಕರೇ ಎಚ್ಚರ : `ಬ್ಲೂಟೂತ್’ ಆನ್ ನಲ್ಲಿ ಇರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗೋದು ಪಕ್ಕಾ.!

04/01/2026 8:44 PM2 Mins Read

BIG NEWS: ಹುಬ್ಬಳ್ಳಿ ಮರ್ಯಾದಾಗೇಡು ಹತ್ಯೆ ಕೇಸ್ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

04/01/2026 8:38 PM1 Min Read
Recent News

BREAKING : ನೈಜೀರಿಯಾದಲ್ಲಿ ದೋಣಿ ಮಗುಚಿ ಘೋರ ದುರಂತ ; 25 ಮಂದಿ ಸಾವು, 14 ಜನರು ನಾಪತ್ತೆ

04/01/2026 9:43 PM

BREAKING : ಕಾನೂನುಬಾಹಿರ ವಿಷಯ ರಚಿಸುವ ಬಳಕೆದಾರರ ‘X ಖಾತೆ’ಗಳು ಶಾಶ್ವತವಾಗಿ ಬ್ಯಾನ್

04/01/2026 9:31 PM

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯನ್ನು ಹೊಡೆದು ಸುಟ್ಟು ಕೊಂದ ಮೂವರು ಅರೆಸ್ಟ್

04/01/2026 9:11 PM

ಗುಡ್ ನ್ಯೂಸ್ ; ಆಧಾರ್ ದೃಢೀಕೃತ ಬಳಕೆದಾರರಿಗೆ ‘ಟಿಕೆಟ್ ಬುಕಿಂಗ್ ಸಮಯ’ ವಿಸ್ತರಣೆ

04/01/2026 8:52 PM
State News
KARNATAKA

ALERT : ಯುವಜನರಲ್ಲಿ ಹೆಚ್ಚುತ್ತಿದೆ `ಮೆದುಳು ಪಾರ್ಶ್ವವಾಯು’ ಅಪಾಯ : ಕಾರಣ ಏನು ಗೊತ್ತಾ?

By kannadanewsnow5704/01/2026 8:51 PM KARNATAKA 2 Mins Read

ಇತ್ತೀಚೆಗೆ ಅನೇಕ ಯುವಕರು ಮಿದುಳಿನ ಪಾರ್ಶ್ವವಾಯುವಿಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿ. ಮಿದುಳಿನ…

ALERT : ಮೊಬೈಲ್ ಗ್ರಾಹಕರೇ ಎಚ್ಚರ : `ಬ್ಲೂಟೂತ್’ ಆನ್ ನಲ್ಲಿ ಇರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗೋದು ಪಕ್ಕಾ.!

04/01/2026 8:44 PM

BIG NEWS: ಹುಬ್ಬಳ್ಳಿ ಮರ್ಯಾದಾಗೇಡು ಹತ್ಯೆ ಕೇಸ್ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

04/01/2026 8:38 PM

BREAKING: ಬಳ್ಳಾರಿ ಬ್ಯಾನರ್ ಗಲಾಟೆ, ಫೈರಿಂಗ್ ಕೇಸ್: ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಅರೆಸ್ಟ್

04/01/2026 8:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.