ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ನಾಳೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.
ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು/ಸಿಬ್ಬಂದಿಗಳೆಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 29.01.2026 ರ ಮಧ್ಯಾಹ್ನ 12.00 ಘಂಟೆಗೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ ಸಭೆಯನ್ನು ನಿಗಧಿಪಡಿಸಲಾಗಿದೆ. ಈ ಸಭೆಗೆ ತಾವು ಹಾಜರಾಗಬೇಕೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

BREAKING: ಹೃದಯಾಘಾತದಿಂದ ‘ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ಹೆಚ್.ವಿ.ಅನಂತ ಸುಬ್ಬರಾವ್’ ನಿಧನ
ಅಜಿತ್ ಪವಾರ್ ಇದ್ದ ವಿಮಾನ ಪಥನದ ಹಿಂದಿನ ಕಾರಣ ಬಿಚ್ಚಿಟ್ಟ DGCA: ಅದೇನು ಗೊತ್ತಾ? | Ajit Pawar plane crash








