Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಯನ್ಮಾರ್ `ಬೌದ್ಧ ಉತ್ಸವ’ದ ವೇಳೆ ಭೀಕರ ಬಾಂಬ್ ಸ್ಪೋಟದಲ್ಲಿ 40 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ |WATCH VIDEO

09/10/2025 11:29 AM

CJI ಮೇಲೆ ಹಲ್ಲೆ ನಡೆಸಿದ ವಕೀಲನಿಗೆ ಸುಪ್ರೀಂಕೋರ್ಟ್ ಪ್ರವೇಶಕ್ಕೆ ನಿಷೇಧ

09/10/2025 11:28 AM

ಪ್ರಧಾನಿ ಮೋದಿ ಹೊಸ ಸ್ಟೆಪ್ ಉದ್ಯೋಗ ಕಾರ್ಯಕ್ರಮ: 75,000 ವಿದ್ಯಾರ್ಥಿಗಳಿಗೆ ಪ್ರಯೋಜನ

09/10/2025 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿತಾರಾ? ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಬೊಮ್ಮಾಯಿ
KARNATAKA

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿತಾರಾ? ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಬೊಮ್ಮಾಯಿ

By kannadanewsnow0911/07/2025 3:03 PM

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೊ ಇಲ್ಲವೋ ಅನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಎಲ್ಲಿಯವರೆಗೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೂ ಈ ನಾಟಕ ನಡೆಯುತ್ತಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯನವರು ಎಷ್ಟು ಬಾರಿ 5 ವರ್ಷ ಇರುತ್ತೇನೆ ಅಂತ ಹೇಳುತ್ತಾರೊ ಅಷ್ಟು ಬಾರಿ ಅವರ ಮುಂದುವರಿಕೆ ಬಗ್ಗೆ ಪ್ರಶ್ನೆ ಬರುತ್ತದೆ. ಈ‌ ವಿಚಾರದಲ್ಲಿ ಯಾರು ಮಾತನಾಡಬೇಕೋ ಅವರು ಸುಮ್ಮನೇ ಇದ್ದಾರೆ ಹೈಕಮಾಂಡ್ ಎಲ್ಲಿವರೆಗೂ ಈ ಬಗ್ಗೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೆ ಇದು ನಾಟಕ ನಡೆಯುತ್ತಲೇ ಇರುತ್ತದೆ ಎಂದರು.

ಸಿದ್ದರಾಮಯ್ಯ ಅವರು ಮುಂದುವರೆದರೂ ಅಷ್ಟೆ, ಬಿಟ್ಟರೂ ಅಷ್ಟೆ. ಆಡಳಿತ ಹದಗೆಡಲು ಅವಕಾಶ ಮಾಡಿಕೊಡಬಾರದು ಅಷ್ಟೆ. ಸಿದ್ದರಾಮಯ್ಯನವರು ನಾನು 5 ವರ್ಷ ಇರುತ್ತೇನೆ ಅಂತ ಹೇಳುವುದು. ಇಲ್ಲ ಅವರು 5 ವರ್ಷ ಇರಲ್ಲ ಅಂತ ಕೆಲವರು ಹೇಳುವುದು ಆಗುತ್ತಿದೆ. ಇದಕ್ಕೆ ಅಂತಿಮ ಯಾರು ಹಾಡಬೇಕು? ಹೈಕಮಾಂಡ್ ಯಾಕೆ ಅವರು ಮುಂದುವರೆಯುತ್ತಾರೆ ಅಂತ ಹೇಳಿಲ್ಲ? ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳು ಹೇಳುವುದನ್ನು ಯಾರೂ ನಂಬುವುದಕ್ಕೆ ತಯಾರಿಲ್ಲ ಹೈಕಮಾಂಡ್ ಈ ಬಗ್ಗೆ ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದಲ್ಲಿ ಗುತ್ತಿಗೆ ನೌಕರರಿಗೂ ಸಂಬಳ ಕೊಡಲು ಹಣ ಇಲ್ಲ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೌಕರರಿಗೆ ಮೂರು ನಾಲ್ಕು ತಿಂಗಳಿಗೆ ಒಮ್ಮೆ ಒಂದು ತಿಂಗಳ ಸಂಬಳ ಹಾಕುತ್ತಿದ್ದಾರೆ ಎಂದು ಹೇಳಿದರು.

ಯೂರಿಯಾ ಗೊಬ್ಬರ ಪೂರೈಕೆಗೆ ಆಗ್ರಹ

ರಾಜ್ಯದಲ್ಲಿ ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಉತ್ತಮವಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಆಗಿದೆ. ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಇದೆ. ಗೊಬ್ಬರ ಪೂರೈಕೆ ಆಗುತ್ತಿಲ್ಲ. ಅತ್ಯಧಿಕ ಯೂರಿಯಾ ಅಗತ್ಯ ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ ಮತ್ತು ಗೊಬ್ಬರ ಪೂರೈಕೆ ಮಾಡುವುದು ಕೃಷಿ ಇಲಾಖೆ ಕರ್ತವ್ಯ. ಕೃಷಿ ಇಲಾಖೆ ಯಾವುದೇ ಮುಂದಾಲೋಚನೆ ಇಲ್ಲದೇ ಕೆಲಸ ಮಾಡುತ್ತಿದೆ. ಗೊಬ್ಬರದ ವಿಚಾರದಲ್ಲಿ ಬ್ಲಾಕ್ ಮಾರ್ಕೇಟ್ ಪ್ರಾರಂಭ ಆಗಿದೆ. ಡೀಲರ್ ಗಳು ಗೊಬ್ಬರವನ್ನು ಬ್ಲ್ಯಾಕ್ ಮಾರ್ಕೇಟ್ ನಲ್ಲಿ ಮಾರುವ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ಯಾವುದೇ ರೀತಿಯ ಗೊಬ್ಬರ ಒದಗಿಸುವ ಕೆಲಸ ಆಗುತ್ತಿಲ್ಲ. ಮಾರ್ಕೆಟಿಂಗ್ ಫೆಡೆರೇಷನ್ ನಿಂದ ಸೊಸೈಟಿಗಳಿಗೆ ಗೊಬ್ಬರ ಒದಗಿಸುವ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇವರು ಅದನ್ನೂ ತಮ್ಮ ವಶಕ್ಕೆ ಪಡೆದು ಸೊಸೈಟಿಗಳಿಗೂ ಗೊಬ್ಬರ ಸಿಗದಂತೆ ಮಾಡಿದ್ದಾರೆ. ಕೃಷಿ ಸಚಿವರು ಈ ವರ್ಷದ ಅಗತ್ಯತೆಯ ಅನುಗುಣವಾಗಿ ಹಾವೇರಿ ಜಿಲ್ಲೆಯ ರೈತರ ಬೇಡಿಕೆ ಈಡೇರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಹೆಣ್ಣು ಮಕ್ಕಳ ಮಾರಾಟ ಜಾಲ ದುರಂತ

ಹಾನಗಲ್ ತಾಲೂಕು ಬ್ಯಾಗವಾದಿ ಗ್ರಾಮದಲ್ಲಿ ಹೆಣ್ಣುಮಕ್ಕಳು ಮಾರಾಟ ಜಾಲ ಪತ್ತೆಯಾಗಿರುವುದು ದುರಂತ. ಒಟ್ಟಾರೆ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಈ ತರದ ಚಟುವಟಿಕೆಗಳು ಸಮಾಜಕ್ಕೆ ಮಾರಕ. ಜಿಲ್ಲೆಯಲ್ಲಿ ಜೂಜು ಹೆಚ್ಚಾಗಿದೆ. ಮುಕ್ತವಾಗಿ ಆಗಿ‌ ಇಸ್ಪೀಟ್ ಆಡುತ್ತಾರೆ. ಚಿಕ್ಕ ಮಕ್ಕಳನ್ನು ಬೇರೆ ಕಡೆಯಿಂದ ತಂದು ಮಾರಾಟ ಮಾಡುವ ಜಾಲ ಪತ್ತೆಯಾಗಿರುವುದು ದುರಂತ. ಇಂಥ ಜಾಲ ನಮ್ಮ ಜಿಲ್ಲೆಯಲ್ಲಿ ಇದೆ ಅನ್ನುವುದು ನಂಬಲು ಆಗುತ್ತಿಲ್ಲ ಎಂದು ಹೇಳಿದರು.

ಪ್ರಕರಣದ ಆರೋಪಿ ಆ ಹೆಣ್ಣು ಮಗಳು ಹಾಗೂ ಅವಳ ಮಗಳು ಹಾಗೂ ಅವರ ಜೊತೆ ಇದ್ದವರನ್ನು ಇನ್ನೂ ಬಂಧನ ಮಾಡಿಲ್ಲ. ಯಾರು ಮುಖ್ಯವಾಗಿ ದಂಧೆ ನಡೆಸುತ್ತಿದ್ದಾರೋ ಅವರನ್ನು ಬಂಧನ ಮಾಡಿಲ್ಲ. ಈ ಪ್ರಕರಣದಲ್ಲಿ ಎಸ್. ಪಿ. ಮುತವರ್ಜಿ ವಹಿಸಬೇಕು. ಹೆಣ್ಣ ಮಕ್ಕಳ ಸುರಕ್ಷತೆ ಏನು? ಬ್ಯಾಗವಾದಿ ಗ್ರಾಮದಲ್ಲಿ ಆರೋಪಿ ಲಕ್ಕವ್ವ ಮನೆ ಎದುರಿಗೇ ಅಂಗನವಾಡಿ ಇದೆ. ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಮಲಗಿಕೊಂಡಿದಿಯಾ? ಇಲಾಖೆಯಿಂದ ದೂರು ಕೊಟ್ಟಿಲ್ಲ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಡೀ ಜಿಲ್ಲೆಯಲ್ಲಿ ಯಾರು ಕಳ್ಳರಿದ್ದಾರೆ ಅವರಿಗೆ ರಕ್ಷಣೆ ಇದೆ. ಗುಂಡಾಗಳು ಎರಡು ಮೂರು ತಾಸಿನಲ್ಲಿ‌ ಬಿಡುಗಡೆ ಆಗುತ್ತಾರೆ ಎಂದರು.

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರೇ ರಾಜಿ ಮಾಡುತ್ತಿದಾರೆ ಅಂತ ಸುದ್ದಿ ಇದೆ. ರಾಜೀ ಪ್ರಯತ್ನದ ಬಗ್ಗೆಯೂ ತನಿಖೆ ಆಗಬೇಕು.ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ಸಚಿವರು, ಮುಖ್ಯಮಂತ್ರಿ ರಾಜಕೀಯ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ, ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ: ಡಿಕೆಶಿ

ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ

Share. Facebook Twitter LinkedIn WhatsApp Email

Related Posts

BREAKING : ಬಿಹಾರ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಪಕ್ಕಾ : 15 ಸಚಿವರಿಗೆ ಕೊಕ್ ನೀಡೋ ಸಾಧ್ಯತೆ

09/10/2025 11:14 AM1 Min Read

BREAKING : ರಾಜ್ಯದಲ್ಲಿ ಹೊಸ `BPL’ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್.!

09/10/2025 10:47 AM1 Min Read

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

09/10/2025 10:42 AM1 Min Read
Recent News

SHOCKING : ಮಯನ್ಮಾರ್ `ಬೌದ್ಧ ಉತ್ಸವ’ದ ವೇಳೆ ಭೀಕರ ಬಾಂಬ್ ಸ್ಪೋಟದಲ್ಲಿ 40 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ |WATCH VIDEO

09/10/2025 11:29 AM

CJI ಮೇಲೆ ಹಲ್ಲೆ ನಡೆಸಿದ ವಕೀಲನಿಗೆ ಸುಪ್ರೀಂಕೋರ್ಟ್ ಪ್ರವೇಶಕ್ಕೆ ನಿಷೇಧ

09/10/2025 11:28 AM

ಪ್ರಧಾನಿ ಮೋದಿ ಹೊಸ ಸ್ಟೆಪ್ ಉದ್ಯೋಗ ಕಾರ್ಯಕ್ರಮ: 75,000 ವಿದ್ಯಾರ್ಥಿಗಳಿಗೆ ಪ್ರಯೋಜನ

09/10/2025 11:17 AM

BREAKING : ಬಿಹಾರ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಪಕ್ಕಾ : 15 ಸಚಿವರಿಗೆ ಕೊಕ್ ನೀಡೋ ಸಾಧ್ಯತೆ

09/10/2025 11:14 AM
State News
KARNATAKA

BREAKING : ಬಿಹಾರ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಪಕ್ಕಾ : 15 ಸಚಿವರಿಗೆ ಕೊಕ್ ನೀಡೋ ಸಾಧ್ಯತೆ

By kannadanewsnow0509/10/2025 11:14 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಈಗಾಗ್ಲೇ ಹಲವಾರು ಬಾರಿ ಚರ್ಚೆ ನಡೆದಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ…

BREAKING : ರಾಜ್ಯದಲ್ಲಿ ಹೊಸ `BPL’ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್.!

09/10/2025 10:47 AM

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

09/10/2025 10:42 AM

ALERT : ಸಾರ್ವಜನಿಕರೇ ಗಮನಿಸಿ : `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.!

09/10/2025 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.