Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿದೇಶಾಂಗ ನೀತಿ ಅಸ್ತವ್ಯಸ್ತ’: ಗಾಝಾ ಕುರಿತ ವಿಶ್ವಸಂಸ್ಥೆಯ ನಿರ್ಣಯದಿಂದ ದೂರ ಉಳಿಯುವ ಸರ್ಕಾರದ ನಿಲುವನ್ನು ಖಂಡಿಸಿದ ಕಾಂಗ್ರೆಸ್

15/06/2025 11:03 AM

ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787 ವಿಮಾನದ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ : ಟರ್ಕಿ ಸ್ಪಷ್ಟನೆ

15/06/2025 10:49 AM

2021 ಕ್ಕೆ ಹೋಲಿಸಿದರೆ 2022 ರಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಹೆಚ್ಚಿನ ಸಾವು : ವರದಿ

15/06/2025 10:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ
KARNATAKA

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

By kannadanewsnow0923/05/2025 3:49 PM

ನವದೆಹಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ ಅವರು; ಮುಂದೆ ಪರಿಸ್ಥಿತಿ ಬದಲಾಗಲಿದೆ. ಆಗ ಇವರು ಇಟ್ಟಿರುವ ಹೆಸರೂ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದರು ಕೇಂದ್ರ ಸಚಿವರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು.

2007 ರಲ್ಲಿ ನಾನು ತೀರ್ಮಾನ ಮಾಡುವಾಗ ಆಗ ವಿರೋಧ ಮಾಡಬಹುದಾಗಿತ್ತು ಆಗ ಮಾಡಲಿಲ್ಲ. ಈ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ರಾಮನಗರ ಕೊಟ್ಟಿದೆ. ಇಡೀ ಜಗತ್ತೇ ನಿಬ್ಬೆರಗಾಗುವ ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ್ದರು. ನೆಹರು ಅವರಿಗೆ ಸಡ್ಡು ಹೊಡೆದು ರಾಜಕೀಯ ಮಾಡಿದ್ದರು. ಅಂತಹ ಮಹನೀಯರ ಹೆಸರನ್ನಾದರೂ ಜಿಲ್ಲೆಗೆ ಇಡಬಹುದಿತ್ತು. ಅವರ ಹೆಸರು ಇಟ್ಟಿದ್ದಿದ್ದರೆ ನಾನು ಅಭಿನಂದಿಸುತ್ತಿದ್ದೆ. ಕೆಂಗಲ್ ಅವರ ಹೆಸರಿಟ್ಟರೆ ಇವರ ಭೂಮಿಗಳಿಗೆ ಬೆಲೆ ಬರುವುದಿಲ್ಲವಲ್ಲ? ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ರಾಮನಗರ ಹೆಸರನ್ನು ತೆಗೆದುಹಾಕಿ ಬೆಂಗಳೂರು ದಕ್ಷಿಣ ಎಂದು ಹೆಸರು ಇಟ್ಟುಕೊಂಡಿರುವುದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಭೂಮಿಗಳ ಬೆಳೆಯನ್ನು ಏರಿಸುವ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಅವರು ಏತಕ್ಕಾಗಿ ಜಿಲ್ಲೆಯ ಹೆಸರು ಬದಲಿಸಿದ್ದಾರೆ? ಅದರ ಹಿಂದಿನ ದುರುದ್ದೇಶ ಏನಿದೆ? ಎಂಬುದು ಗೊತ್ತಿದೆ. ಇದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಯಾವಾಗ ಅದಕ್ಕೆ ತಿರುಗಿಸಿ ಉತ್ತರ ಕೊಡಬೇಕೋ ಆಗ ಕೊಡುತ್ತೇನೆ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.

ಇಂತಹ ರಾಜಕಾರಣಕ್ಕೆ ನಾನು ಸೊಪ್ಪು ಹಾಕುವುದಿಲ್ಲ. ಇವರು ಕೇಂದ್ರ ಗೃಹ ಸಚಿವರಿಗೆ ಹೆಸರು ಬದಲಾವಣೆ ರಾಜ್ಯ ಸರ್ಕಾರ ಪ್ರಸ್ತಾಪ ಕಳಿಸಿದ್ದು, ಅದು ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇವರು ಮಾಡಿದ್ದು ಮುಂದೆ ಬದಲಾಗಲಿದೆ:

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ? ಇವರು ಮಾಡಿದ್ದು ಮುಂದೆ ಬದಲಾಗಲಿದೆ. ಅದೂ ನನಗೆ ಗೊತ್ತಿದೆ. ಹೇಳಿ ಕೇಳಿ ಈ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯಾಪಾರಿ. ಏನೆಲ್ಲಾ ತಂತ್ರಗಾರಿಕೆ ಹೂಡಿದರೆ ತಮ್ಮ ಜಮೀನುಗಳಿಗೆ ಬೆಲೆ ಬರುತ್ತಿದೆ ಎನ್ನವುದು ಅವರಿಗೆ ಗೊತ್ತಿದೆ. ರಾಮನಗರ ಜಿಲ್ಲೆಯಾದಾಗಲೇ ರೈತರ ಭೂಮಿಗೆ ಬೆಲೆ ಬಂದಿರಲಿಲ್ಲವೇ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ನನ್ನ ಜಮೀನಿಗೆ ಬೆಲೆ ಬರುತ್ತದೆ ಎಂದು ಅವರು ಹೇಳಿದ್ದಾರೆ. ಆ ಜಮೀನನ್ನು ಕೂಡ ಕಿತ್ತುಕೊಳ್ಳಲು ಕುತಂತ್ರ ಮಾಡಿದ್ದಾರೆ ಇವರು. 40 ವರ್ಷಗಳ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್ಐಟಿ ಅಂತ ರಚನೆ ಮಾಡಿಕೊಂಡು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇದರ ವಿರುದ್ಧ ನಾನೂ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಹೇಳ್ದರು.

ಇವರು ನನ್ನ ವಿರುದ್ಧ ಕಿರುಕುಳ, ಕುತಂತ್ರ ಮಾಡುತ್ತಿದ್ದಾರೆ. ಹೀಗೆಯೇ ಅವರು ಮಾಡುತ್ತಿರಲಿ, ಇವರು ಲೂಟಿ ಹೊಡೆದಿರುವ ಶೇ.50ರಷ್ಟು ಸರ್ಕಾರಿ ಭೂಮಿಗಳಿವೆ. ಇವರು ಏನೆಲ್ಲಾ ಅನ್ಯಾಯ, ಅಕ್ರಮ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ನೀಡಲಾದ ಜಾಗ ನುಂಗಿದ್ದು ಯಾರು? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ದಲಿತರ ಭೂಮಿ ಕಬಳಿಸಿದವರನ್ನು ಸಿದ್ದರಾಮಯ್ಯ ಜತೆಯಲ್ಲಿ ಇಟ್ಟುಕೊಂಡಿದ್ದಾರೆ?:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಂದ್ವ ನೀತಿ ಬಗ್ಗೆ ಕಿಡಿಕಾರಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಿದ್ದಾರಾಮಯ್ಯ ಅವರು ತಾವು ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ದುರಂತವೆಂದರೆ, ದಲಿತರ ಭೂಮಿ ಕಬಳಿಸಿದವರನ್ನೇ ತಮ್ಮ ಜತೆಯಲ್ಲಿ ಇಟ್ಟುಕೊಂಡಿದ್ದಾರೆ! ಈಗ ನೋಡಿದರೆ ಅವರು ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿದ್ದಾರೆ. ಇದು ಈ ಸರ್ಕಾರದಲ್ಲಿ ನಡೆಯುತ್ತಿರುವ ದಲಿತ ವಿರೋಧಿ ನೀತಿ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ | Teacher Jobs

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

Share. Facebook Twitter LinkedIn WhatsApp Email

Related Posts

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM2 Mins Read

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM1 Min Read

SHOCKING : ಚಾಕ್ಲೆಟ್ ಪ್ರೀಯರೇ ಹುಷಾರ್ : ಕೋಲಾರದಲ್ಲಿ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆ!

15/06/2025 9:43 AM1 Min Read
Recent News

‘ವಿದೇಶಾಂಗ ನೀತಿ ಅಸ್ತವ್ಯಸ್ತ’: ಗಾಝಾ ಕುರಿತ ವಿಶ್ವಸಂಸ್ಥೆಯ ನಿರ್ಣಯದಿಂದ ದೂರ ಉಳಿಯುವ ಸರ್ಕಾರದ ನಿಲುವನ್ನು ಖಂಡಿಸಿದ ಕಾಂಗ್ರೆಸ್

15/06/2025 11:03 AM

ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787 ವಿಮಾನದ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ : ಟರ್ಕಿ ಸ್ಪಷ್ಟನೆ

15/06/2025 10:49 AM

2021 ಕ್ಕೆ ಹೋಲಿಸಿದರೆ 2022 ರಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಹೆಚ್ಚಿನ ಸಾವು : ವರದಿ

15/06/2025 10:44 AM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM
State News
KARNATAKA

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

By kannadanewsnow0915/06/2025 10:40 AM KARNATAKA 2 Mins Read

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ…

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM

SHOCKING : ಚಾಕ್ಲೆಟ್ ಪ್ರೀಯರೇ ಹುಷಾರ್ : ಕೋಲಾರದಲ್ಲಿ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆ!

15/06/2025 9:43 AM

BREAKING : ಮಂಗಳೂರಲ್ಲಿ ಜಲಸ್ಪೋಟದಿಂದ ಖಾಸಗಿ ಆಸ್ಪತ್ರೆ ಗೋಡೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

15/06/2025 9:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.