ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಪ್ರಜಾಧ್ವನಿ 2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಕರ್ನಾಟಕದ 28 ಸ್ಥಾನಗಳಲ್ಲಿ 20 ಕ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವಿಶ್ವಾಸ ನನಗಿದೆ ಎಂದರು.

ಶಿವಮೊಗ್ಗ ಕುವೆಂಪು ಅವರ ನಾಡು, ಬಂಗಾರಪ್ಪ ಅವರಿಗೆ ಆಶೀರ್ವಾದ ಮಾಡಿದ ನಾಡು. ಈ ಬಾರಿ ಶಿವಮೊಗ್ಗ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಕುವೆಂಪು ಅವರು ಈ ನೆಲವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಈ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು.

ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಆತ್ಮೀಯತೆಯನ್ನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ. ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಕೊಟ್ಟಂತೆ ಕೇಂದ್ರದಿಂದ ಗ್ಯಾರಂಟಿಗಳನ್ನು ಕೊಡಲು ರಾಹುಲ್ ಗಾಂಧಿ ಅವರು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ಕಾರ್ಡ್ಗಳಿಗೆ ಸಹಿ ಹಾಕಿ ಕೊಟ್ಟಿದ್ದಾರೆ. ಎಲ್ಲರೂ ಹಸ್ತದ ಗುರುತಿಗೆ ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

Prajwal Revanna: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವೀಡಿಯೋ ವೈರಲ್ ‘ಸೂತ್ರಧಾರಿ’ ಸುಳಿವು ಪತ್ತೆ

ಕ್ಯಾನ್ಸರ್ ಪ್ರಕರಣಗಳಿಗೆ 648 ಕೋಟಿ ಪರಿಹಾರ ನೀಡಲು `ಜಾನ್ಸನ್ & ಜಾನ್ಸನ್’ ಅಂಗಸಂಸ್ಥೆ ನಿರ್ಧಾರ

Share.
Exit mobile version