Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಸಿದ್ಧರಾಮಯ್ಯ
KARNATAKA

ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಚಿಕ್ಕಮಗಳೂರು: ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದರು.

ದೇವೇಗೌಡರ ಸುಳ್ಳು ಕೇಳಿ ನನಗೇ ನಾಚಿಕೆ ಆಯ್ತು

ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು.

ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು. ಶ್ರೀಮಂತ ಉದ್ಯಮಿಗಳ ಪಾಲಿಗೆ ಅಕ್ಷಯ ಪಾತ್ರೆ ಆದರು. ಈ ಸತ್ಯ ದೇವೇಗೌಡರಿಗೆ ಗೊತ್ತಿದ್ದೂ ಏಕೆ ರಾಜ್ಯದ ಜನರಿಗೆ ಸುಳ್ಳು ಹೇಳಿದರು ಎಂದು ಪ್ರಶ್ನಿಸಿದರು.

ಪ್ರತೀ ಕುಟುಂಬದ ಹಣ ಉಳಿತಾಯ ಆಗುತ್ತಿದೆ

ನಾವು ನುಡಿದಂತೆ ನಡೆದು ಪ್ರತೀ ಕುಟುಂಬಗಳ ಖಾತೆಗೆ, ಜನರ ಜೇಬಿಗೆ ಹಣ ಹಾಕುತ್ತಿರುವ ನಮ್ಮ ಗ್ಯಾರಂಟಿಗಳಿಗೆ ಮತ ಹಾಕುತ್ತೀರೋ, ಸುಳ್ಳುಗಳ ಸರದಾರನ ಖಾಲಿ ಚೊಂಬಿಗೆ ಮತ ಹಾಕುತ್ತೀರೋ ಯೋಚಿಸಿ ಎಂದು ಕರೆ ನೀಡಿದರು.

ಒಂದೂಕಾಲ ಲಕ್ಷ ಬೇಕೋ- ಖಾಲಿ ಚೊಂಬು ಬೇಕಾ: ಯೋಚಿಸಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಕೊಡುತ್ತಿರುವ ವಾರ್ಷಿಕ 24 ಸಾವಿರ ರೂಪಾಯಿ ಜತೆಗೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುವ ಘೋಷಣೆ ಮಾಡಿ ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಸಹಿ ಹಾಕಿದ್ದಾರೆ.

ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂಪಾಯಿ ಹಾಕುವ ಗ್ಯಾರಂಟಿಯನ್ನೂ ನಾವು ನೀಡಿದ್ದೇವೆ. ಹೀಗಾಗಿ ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಕರೆ ನೀಡಿದರು.

ಕುಮಾರಸ್ವಾಮಿ ಮಾತಿಗೆ ಸಿಎಂ ಆಕ್ರೋಶ

ಸರ್ಕಾರದ ಗ್ಯಾರಂಟಿಗಳನ್ನು ಪಡೆದು ರಾಜ್ಯದ ಮಹಿಳೆಯರು ಹಾದಿ ತಪ್ಪಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಟ್ಟಾದ ಸಿಎಂ, ಅವರ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇಂಥಾ ಮಾತು ಹೇಳೋಕೆ ಅವರಿಗೆ ನಾಚಿಕೆಯಾದ್ರೂ ಆಗಲಿಲ್ವಾ ಎಂದು ಖಾರವಾಗಿ ಪ್ರಶ್ನಿಸಿದರು.

ಅಡಿಕೆ ಆಮದು ದೊಡ್ಡ ದ್ರೋಹ

ಮೋದಿ ಸರ್ಕಾರ ಅಡಿಕೆಯನ್ನು ವಿದೇಶದಿಂದ ಆಮದು ಮಾಡಿಕೊಂಡು ರಾಜ್ಯದ ಅಡಿಕೆ ಬೆಳೆಗಾರರ ಕುಟುಂಬಕ್ಕೆ ದ್ರೋಹ ಬಗೆದಿದೆ. ಇದಕ್ಕೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

2 Mins Read

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

1 Min Read
Recent News

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

State News
KARNATAKA

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಅದ್ಭುತ ಪ್ರತಿಫಲ ಸಿಕ್ಕಿದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ…

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.